ಇಳಂತಿಲ: ಹಿಂದೂ ಧರ್ಮಜಾಗೃತಿ ಸಭೆ
Team Udayavani, Dec 3, 2017, 3:21 PM IST
ಬೆಳ್ತಂಗಡಿ: ಇಳಂತಿಲದ ಅಂಡೆತಡ್ಕದಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆ ನಡೆಸಲಾಯಿತು.
ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ, ಸನಾತನ ಸಂಸ್ಥೆಯ ವಕ್ತಾರೆ ಲಕ್ಷ್ಮೀ ಪೈ ಮತ್ತಿತರರು ಉಪಸ್ಥಿತರಿದ್ದರು.
ಸನಾತನ ಸಂಸ್ಥೆಯ ಸಂಸ್ಥಾಪಕ ಪರಾತ್ಪರ ಗುರು ಡಾ| ಜಯಂತ ಆಠವಳೆ ಇವರ ಛಾಯಾಚಿತ್ರಮಯ ಜೀವನ ದರ್ಶನ ಸ್ಮರಣಿಕೆ ಬಿಡುಗಡೆ ಮಾಡಲಾಯಿತು.
ರವಿ ಶಿಲ್ಪಾ, ವಾಣಿಶ್ರೀ ಭಜನ ಮಂದಿರದ ಅಧ್ಯಕ್ಷ ಬಾಲಕೃಷ್ಣ, ಲಕ್ಷ್ಮಣ ಮಿತ್ತಿಲ, ವಿಜಯ್ ಕುಮಾರ್, ಸುಂದರ ಶೆಟ್ಟಿ, ನ್ಯಾಯವಾದಿಗಳಾದ ಶ್ಯಾಮ್ ಪ್ರಸಾದ್ ಕೈಲಾರ್, ಅಶೋಕ ಇಳಂತಿಲ, ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಸೀತಾರಾಮ ಆಳ್ವ, ಬಂದಾರು ಗ್ರಾ.ಪಂ. ಅಧ್ಯಕ್ಷ ಉದಯ್ ಕುಮಾರ್, ರಾಜಶೇಖರ ರೈ, ಹರಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ವೇ| ಮೂ| ಸುಬ್ರಹ್ಮಣ್ಯ ಪ್ರಸಾದ ವೇದಮಂತ್ರ ಪಠಿಸಿದರು. ದಯಾನಂದ ಹೆಗ್ಡೆ ಶಂಖನಾದ ಮೊಳಗಿಸಿದರು. ಜನಾರ್ದನ ಗೌಡ ಪರಿಚಯಿಸಿದರು. ಚೇತನಾ ಪ್ರಭು ಸೂತ್ರ ಸಂಚಾಲನೆ ನಡೆಸಿದರು.
ದುಷ್ಟ ಶಕ್ತಿ ವಿರುದ್ಧ ಹೋರಾಡಿ
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ನಾವು ಏನು ಮಾಡಬಹುದು ಎಂದು ಚಿಂತನೆ ಮಾಡಿ. ಇನ್ನೊಬ್ಬರನ್ನು ನಾಶ ಮಾಡಲು ಹಿಂದೂ ಧರ್ಮ ಕಲಿಸಿಲ್ಲ, ಆದರೆ ನಮ್ಮ ಸಂರಕ್ಷಣೆಗೆ ದುಷ್ಟಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಿದೆ. ಸಾತ್ವಿಕ ಶಕ್ತಿ ಉದ್ದೀಪನಗೊಳಿಸಲು ನಾವು ಸಂಕಲ್ಪ ಮಾಡಬೇಕು.
– ಸುಬ್ರಹ್ಮಣ್ಯ ಕುಮಾರ್
ಅಗರ್ತ, ನ್ಯಾಯವಾದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ