ಶೋಷಿತ ಸಮುದಾಯ ಡಿಜೆ ಹಾಕುವುದು ತಪ್ಪೇ ?

ದಲಿತರ ಅಹವಾಲು ಸ್ವೀಕಾರ ಸಭೆಯಲ್ಲಿ ಪ್ರತಿಧ್ವನಿಸಿದ ಕೋಟತಟ್ಟು ಪ್ರಕರಣ

Team Udayavani, Jan 1, 2022, 6:27 AM IST

ಶೋಷಿತ ಸಮುದಾಯ ಡಿಜೆ ಹಾಕುವುದು ತಪ್ಪೇ ?

ಮಂಗಳೂರು: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾ. ಪಂ.ನ ಬಾರಿಕೆರೆ ಕೊರಗರ ಕಾಲನಿಯಲ್ಲಿ ಕಳೆದ ಸೋಮವಾರ ರಾತ್ರಿ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್‌ ಲಾಠಿ ಚಾರ್ಜ್‌ ಪ್ರಕರಣ ಶುಕ್ರವಾರ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೊನಾವಣೆ ಅವರ ಅಧ್ಯಕ್ಷತೆಯಲ್ಲಿ ನಡೆದ ದಲಿತರ ಅಹವಾಲು ಸ್ವೀಕಾರ ಸಭೆಯಲ್ಲಿ ಪ್ರತಿಧ್ವನಿಸಿತು.

ಪೊಲೀಸರು ನಡೆಸಿದ ಲಾಠಿ ಪ್ರಹಾರ ಅಮಾನವೀಯ ಹಾಗೂ ಖಂಡ ನೀಯ. ಶೋಷಿತ ಸಮುದಾಯ ತಮ್ಮ ಮನೆಯ ಕಾರ್ಯಕ್ರಮದಲ್ಲಿ ಡಿಜೆ ಬಳಸು ವುದು ತಪ್ಪೇ ಎಂದು ದಲಿತ ನಾಯಕ ಶೇಖರ್‌ ಪ್ರಶ್ನೆ ಮಾಡಿದರು.

ಸಮಾಜ ಕಲ್ಯಾಣ ಸಚಿವರು ಕೊರಗ ಕುಟುಂಬದ ಸಂತ್ರಸ್ತರ ಮನೆಗೆ ತೆರಳಿ ನಿಮ್ಮ ಜತೆ ನಾವಿದ್ದೇವೆ ಎನ್ನುತ್ತಾರೆ. ಮತ್ತೂಂದೆಡೆ ಅದೇ ಮದುಮಗ ಸೇರಿ ಏಳು ಜನರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತದೆ. ಇದು ವಿಪರ್ಯಾಸ ಎಂದವರು ಅಸಮಾ ಧಾನ ವ್ಯಕ್ತಪಡಿಸಿದರು.

ಪ್ರಕರಣದ ಬಗ್ಗೆ ತಪ್ಪಿತಸ್ಥ ಪೊಲೀಸ ರನ್ನು ಅಮಾನತು ಮಾಡುವುದು ಮಾತ್ರ ವಲ್ಲ, ಅವರ ವಿರುದ್ಧ ಕ್ರಿಮಿ ನಲ್‌ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವಂತೆ ಅವರು ಜಿಲ್ಲಾ ಎಸ್‌ಪಿ ಅವರನ್ನು ಒತ್ತಾಯಿಸಿದರು.

ಸಮಸ್ಯೆ ಬಗೆಹರಿಸಲು ಆಗ್ರಹ
ಡಿಸಿ ಮನ್ನಾ ಜಾಗ ಕುರಿತಂತೆ ಸಾಕಷ್ಟು ಹೋರಾಟ ನಡೆಸಿದರೂ ಇನ್ನೂ ಯಾವುದೇ ರೀತಿಯ ನ್ಯಾಯ ದೊರಕಿಲ್ಲ. 1980ರ ಬಳಿಕ ಜಿಲ್ಲೆಯಲ್ಲಿ ದಲಿತರಿಗೆ ಡಿಸಿ ಮನ್ನಾ ಭೂಮಿ ಮಂಜೂರಾಗಿಲ್ಲ. ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರು ಅಕ್ರಮವಾಗಿ ಇಲ್ಲಿನ ಭೂಮಿಯಲ್ಲಿ ನೆಲೆಸಿರುವಾಗ ಇಲ್ಲಿನ ದಲಿತರಿಗೆ ಅವರಿಗಾಗಿ ಮೀಸಲಿಟ್ಟ ಜಾಗವನ್ನು ಹಂಚಿಕೆ ಮಾಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ದಲಿತ ಮುಖಂಡ ಎಸ್‌.ಪಿ. ಆನಂದ ಪ್ರಶ್ನಿಸಿದರು.

ಇದನ್ನೂ ಓದಿ:ಶೀಘ್ರ ಬಿಜೆಪಿ, ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಸೇರ್ಪಡೆ: ಸತೀಶ ಜಾರಕಿಹೊಳಿ

ಅಂಬೇಡ್ಕರ್‌ ನಿಗಮದಡಿ ದಲಿತರಿಗೆ
ಸ್ವ ಉದ್ಯೋಗಕ್ಕಾಗಿ ನೀಡಲಾಗುವ ಸಾಲ ಯೋಜನೆ ಪ್ರಸಕ್ತ ಆಯಾ ಕ್ಷೇತ್ರದ ಶಾಸಕರ ಮೂಲಕ ಮಂಜೂರಾಗು ತ್ತಿರುವುದರಿಂದ ಯಾವುದೋ ನಿರ್ದಿಷ್ಟ ಪಕ್ಷಗಳ ಕಾರ್ಯಕರ್ತರಿಗೆ ಮಾತ್ರ ದೊರೆಯುತ್ತಿದೆ. ಹಿಂದೆ ಜಿಲ್ಲಾಧಿಕಾರಿ ಮೂಲಕ ಹಂಚಿಕೆಯಾಗುತ್ತಿದ್ದು, ಅದೇ ರೀತಿ ಮುಂದುವರಿಸಬೇಕು. ಜಿಲ್ಲೆಯ ಮೂಲಗಳಿಂದ ಉನ್ನತ ಶಿಕ್ಷಣಕ್ಕಾಗಿ ನಗರಕ್ಕೆ ಬರುವ ದಲಿತ ಸಮುದಾಯದ ಮಕ್ಕಳಿಗಾಗಿ ಇರುವ ಹಾಸ್ಟೆಲ್‌ಗ‌ಳಲ್ಲಿ ಮೂಲಭೂತ ಸೌಕ ರ್ಯವನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಬೇಕೆಂದ‌ರು. ನಾಯಕರಾದ ವಿಶ್ವನಾಥ್‌, ಡಿ.ಎಸ್‌. ಪ್ರಸನ್ನ ಹಾಗೂ ಇತ ರರು ತಮ್ಮ ಅಹವಾಲುಗಳನ್ನು ಮಂಡಿಸಿದರು.

ಪರಿಶೀಲನೆಯ ಬಳಿಕ ಬಿ ರಿಪೋರ್ಟ್‌
ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಕೆಲವೊಂದು ಪ್ರಕರಣಗಳು ಮೇಲ್ವರ್ಗದವರ ಒತ್ತಡ ಹಾಗೂ ಹಣದ ಆಮಿಷದಿಂದ ಪೊಲೀಸರಿಂದ “ಬಿ’ ರಿಪೋರ್ಟ್‌ ಆಗಿ ಪರಿವರ್ತಿಸಲಾಗುತ್ತಿದೆ ಎಂದು ದಲಿತ ನಾಯಕರು ಆರೋಪಿಸಿದರು.

ಠಾಣಾ ಮಟ್ಟದಿಂದ ವರಿಷ್ಠಾಧಿಕಾರಿ ಮಟ್ಟದಲ್ಲಿಯೂ ಪರಿಶೀಲನೆ ನಡೆಸಿ ಬಳಿಕ ಐಜಿಗೆ ವರದಿ ಸಲ್ಲಿಕೆಯಾದ ಬಳಿಕವೇ ಬಿ ರಿಪೋರ್ಟ್‌ ಮಾಡಲಾಗುತ್ತದೆ. ಹಾಗಾಗಿ ಅಂತಹ ಯಾವುದೇ ರೀತಿಯ ಒತ್ತಡ, ಆಮಿಷಕ್ಕೆ ಬಲಿಯಾಗುವ ಪ್ರಶ್ನೆಯೇ ಬರುವುದಿಲ್ಲ. ಅಂತಹ ಅನುಮಾನವಿದ್ದಾಗಲೂ ಸಂತ್ರಸ್ತರಿಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರವಿರುತ್ತದೆ. ನ್ಯಾಯಾಲಯ ತನಿಖೆಗೆ ಆದೇಶ ನೀಡುವ ಅವಕಾಶವೂ ಇರುವುದರಿಂದ ಅಂತಹ ಅನುಮಾನ ಬೇಡ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೋನಾವಣೆ ತಿಳಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.