ಐಸಿಸ್ ಉಗ್ರ ಭೀತಿ: ಕರಾವಳಿ ಕಟ್ಟೆಚ್ಚರ
Team Udayavani, May 27, 2019, 6:06 AM IST
ಮಂಗಳೂರು/ಕಾಸರಗೋಡು/ಕುಂದಾಪುರ: ಐಸಿಸ್ ಉಗ್ರರು ಶ್ರೀಲಂಕಾದಿಂದ ಲಕ್ಷ ದ್ವೀಪಕ್ಕೆ ಹೊರಟಿದ್ದಾರೆ ಎಂಬ ಬೇಹು ಮಾಹಿತಿಯ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಸಮುದ್ರದಲ್ಲಿ ಲಕ್ಷದ್ವೀಪಕ್ಕೆ ಹೋಗುವ ಮಾರ್ಗದಲ್ಲಿ ಈ ಉಗ್ರರು ಕರ್ನಾಟಕಕ್ಕೆ ನುಸುಳಬಹುದೇ ಎಂಬ ಗುಮಾನಿಯ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.
ಶ್ರೀಲಂಕಾದಲ್ಲಿ ಐಸಿಸ್ ಉಗ್ರರ ದಾಳಿ ಘಟನೆ ಸಂಭವಿಸಿದಂದಿನಿಂದ ಭಾರತದ ಪಶ್ಚಿಮ ಕರಾವಳಿ ಉದ್ದಕ್ಕೂ ಪೊಲೀಸರು, ಕೋಸ್ಟ್ ಗಾರ್ಡ್, ನೌಕಾ ಪಡೆಯವರು ಕಣ್ಗಾವಲು ಇರಿಸಿದ್ದಾರೆ. ರಾಜ್ಯದ ಕರಾವಳಿ ಕಾವಲು ಪೊಲೀಸರು ಕರಾವಳಿ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರಿಗೂ ಸಂಶಯಾಸ್ಪದ ಬೋಟುಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ನೌಕಾಪಡೆ ಸಜ್ಜು: ವಾರಿಯರ್
ಕಾಸರಗೋಡು: ಬೇಹುಗಾರಿಕೆ ಸಂಸ್ಥೆಗಳ ವರದಿಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಆಕ್ರಮಣವನ್ನು ಎದುರಿಸಲು ನೌಕಾ ಪಡೆ ಸಿದ್ಧವಾಗಿದೆ ಎಂದು ನೌಕಾ ಪಡೆಯ ರಕ್ಷಣಾ ವಕ್ತಾರ ಕಮಾಂಡರ್ ಶ್ರೀಧರ್ ವಾರಿಯರ್ ಹೇಳಿದ್ದಾರೆ.
ಉಗ್ರರು ಬಿಳಿ ಬಣ್ಣದ ದೋಣಿಯಲ್ಲಿ ಸಾಗುತ್ತಿದ್ದಾರೆ ಎಂದು ಬೇಹು ಮಾಹಿತಿಯಿದ್ದು, ಕರಾವಳಿ ಪೊಲೀಸ್ ಠಾಣೆಗಳು, ಕೋಸ್ಟಲ್ ಗಾರ್ಡ್, ನೌಕಾಪಡೆ ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಪಹರೆಯನ್ನು ತೀವ್ರಗೊಳಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆ ಮೀನುಗಾರರ ಸಮಿತಿಗಳಿಗೆ ಸೂಚನೆ ನೀಡಲಾಗಿದೆ.
ಕರಾವಳಿ ಪ್ರದೇಶದ ಎಲ್ಲ ಸಮುದ್ರ ತೀರ ಪೊಲೀಸ್ ಠಾಣೆ ಗಳನ್ನು ಜಾಗೃತಗೊಳಿಸಲಾಗಿದೆ. ಕೇರಳ ಕರಾವಳಿಯ ಮೂಲಕ ಉಗ್ರರು ದಾಳಿ ಸಂಚು ಹೂಡಿದ್ದಾರೆಂದು ಬೇಹು ಗಾರಿಕೆ ಸಂಸ್ಥೆಗಳು ವರದಿ ಮಾಡಿವೆ.
ಕೊಚ್ಚಿಯ ದಕ್ಷಿಣ ನೌಕಾ ಪಡೆಯ ಜಂಟಿ ಆಪರೇಶನ್ ಸೆಂಟರ್ನಲ್ಲಿ ಸಂಭಾವ್ಯ ಉಗ್ರ ದಾಳಿಯನ್ನು ತಡೆಯಲು ಸಜ್ಜುಗೊಳಿಸಲಾಗಿದೆ. ನೌಕಾಪಡೆ, ಕೋಸ್ಟ್ಗಾರ್ಡ್ ಕಟ್ಟೆಚ್ಚರ ವಹಿಸಿದ್ದು, ಶಂಕಿತ ದೋಣಿಗಳನ್ನು ತಪಾಸಣೆ ನಡೆಸುತ್ತಿವೆ. ಕೋಸ್ಟಲ್ ಪೊಲೀಸ್ ಕರಾವಳಿ ಪ್ರದೇಶಗಳಲ್ಲಿ ತಪಾಸಣೆ ಬಿಗುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?