ನೀತಿ ಸಂಹಿತೆ: ವಸ್ತು, ನಗದು ಒಯ್ಯುವಾಗ ದಾಖಲೆ ಅಗತ್ಯ


Team Udayavani, Mar 31, 2018, 9:25 AM IST

Election-Symbol-650.jpg

ಮಂಗಳೂರು: ಚುನಾವಣಾ ದಿನಾಂಕ ಘೋಷಣೆಯಾದ ಕ್ಷಣದಿಂದಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಚುನಾವಣೆ ಜಾರಿಗೊಂಡ ಬಳಿಕ ಕಾರ್ಯಾಂಗವು ಸಂಪೂರ್ಣವಾಗಿ ಚುನಾವಣಾ ಆಯೋಗದ ಅಧೀನಕ್ಕೆ ಒಳಪಟ್ಟು ಕಾರ್ಯನಿರ್ವಹಿಸುತ್ತದೆ. ಅದರ ಮೂಲಕ ಚುನಾವಣಾ ಆಯೋಗವು ಎಲ್ಲ ರೀತಿಯ ಆಗುಹೋಗು, ವ್ಯವಹಾರ, ಚಲನವಲನಗಳ ಮೇಲೆ ಹದ್ದಿನ ಕಣ್ಣಿರಿಸಿ ಚುನಾವಣಾ ಅಕ್ರಮಗಳನ್ನು ತಡೆಯಲು ಶ್ರಮಿಸುತ್ತದೆ. ಈ ಹಿನ್ನೆಲೆಯಲ್ಲಿ ಸಂಚಾರದ ವೇಳೆ ಜನಸಾಮಾನ್ಯರು ಕೆಲವು ಎಚ್ಚರಿಕೆಗಳನ್ನು ವಹಿಸುವುದರೊಂದಿಗೆ ತಾವು ಕೊಂಡೊಯ್ಯುವ ವಸ್ತುಗಳ ದಾಖಲೆಗಳನ್ನು ಜತೆಗಿರಿಸಿಕೊಂಡರೆ ಅನಗತ್ಯ ಮುಜುಗರ, ಇಕ್ಕಟ್ಟುಗಳಿಂದ ಪಾರಾಗಬಹುದು.

ಈಗಾಗಲೇ ಜಿಲ್ಲೆಯಲ್ಲಿ  24×7 ಚೆಕ್‌ಪೋಸ್ಟ್‌ ಗಳು ಅಲ್ಲಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಯಾವುದೇ ಅಕ್ರಮ ವಹಿವಾಟುಗಳು ಜರಗದೆ, ಅದು ಸುಗಮವಾಗಬೇಕು ಎಂಬುದಕ್ಕಾಗಿ ವಾಹನ ತಪಾಸಣೆ ನಡೆಯುತ್ತಿದೆ. ಹೀಗಾಗಿ ಜನರು ಬೆಲೆಬಾಳುವ ವಸ್ತುಗಳು, ನಗದನ್ನು ಕೊಂಡೊಯ್ಯುವಾಗ ಸೂಕ್ತ ದಾಖಲೆಗಳನ್ನು ಇರಿಸಿಕೊಳ್ಳುವುದು ಅವಶ್ಯವಾಗಿದೆ.

ಸಾರ್ವಜನಿಕರು 50,000 ರೂ.ಗಳಿಗಿಂತ ಮೇಲ್ಪಟ್ಟು ನಗದು ಒಯ್ಯುವಾಗ ಸೂಕ್ತ ದಾಖಲೆಗಳನ್ನು ಇರಿಸಿಕೊಳ್ಳಬೇಕು. ಎಟಿಎಂ ಅಥವಾ ಬ್ಯಾಂಕ್‌ನಿಂದ 50,000 ರೂ.ಗಳಿಗಿಂತ ಹೆಚ್ಚು ಮೊತ್ತವನ್ನು ಡ್ರಾ ಮಾಡಿದರೆ ರಶೀದಿಯನ್ನು ತಪ್ಪದೇ ಜತೆಗಿರಿಸಿಕೊಳ್ಳಬೇಕು. ಇತರ ಯಾವುದೇ ಮೂಲಗಳಿಂದ ಈ ಕನಿಷ್ಠ ಮಿತಿಗಿಂತ ಹೆಚ್ಚು ಹಣ ಪಡೆದುಕೊಂಡರೂ ಚೆಕ್‌ ಪೋಸ್ಟ್‌ನಲ್ಲಿ ತಪಾಸಣೆಗೊಳಪಡಿಸಿದಾಗ ಸೂಕ್ತ ದಾಖಲೆ ಹಾಜರುಪಡಿಸಬೇಕು. ನೀತಿ ಸಂಹಿತೆ ಜಾರಿಯಲ್ಲಿರುವಾಗ ನಗದು ಕೊಂಡೊಯ್ಯುವುದಕ್ಕೆ ಯಾವುದೇ ಮಿತಿ ಇಲ್ಲದಿದ್ದರೂ 10 ಲಕ್ಷ ರೂ. ಗಳಿಗಿಂತ ಹೆಚ್ಚಿನ ಮೊತ್ತವನ್ನು ದಾಖಲೆ ಸಹಿತ ಕೊಂಡೊಯ್ದರೂ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ. ಆದರೆ ಸೂಕ್ತ ದಾಖಲೆಗಳಿದ್ದರೆ ಯಾವುದೇ ಸಮಸ್ಯೆ ಉಂಟಾಗದು.

ಚಿನ್ನಾಭರಣಕ್ಕೂ ಅನ್ವಯ
ಕೇವಲ ಹಣ ಮಾತ್ರವಲ್ಲ; ಚಿನ್ನಾಭರಣ ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೊಂಡೊಯ್ಯುವಾಗಲೂ ಅದಕ್ಕೂ ಸೂಕ್ತ ದಾಖಲೆ ಇರಿಸಿಕೊಂಡು ತಪಾಸಣೆ ನಿರತರು ಕೇಳಿದಾಗ ಹಾಜರುಪಡಿಸಬೇಕಾಗುತ್ತದೆ. ಇದು ಶುಭ ಸಮಾರಂಭಗಳ ಋತು; ಮದುವೆ ಬಟ್ಟೆ, ಚಿನ್ನಾಭರಣ ಖರೀದಿ ಸಾಮಾನ್ಯ. ಚಿನ್ನಾಭರಣ, ವಸ್ತ್ರ ಅಥವಾ ಇತರ ಗೃಹಪಯೋಗಿ ವಸ್ತುಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ ಒಂದೆಡೆಯಿಂದ ಇತರೆಡೆಗೆ ಕೊಂಡೊಯ್ಯುವಾಗ ಅದರ ಬಿಲ್‌ ಪಾವತಿ ರಶೀದಿಯನ್ನು ಜತೆಗಿರಿಸಿ ಕೊಳ್ಳುವುದು ಒಳ್ಳೆಯದು. ಆದರೆ ಇವುಗಳ ಮೇಲೆ ಯಾವುದೇ ಮಿತಿಗಳನ್ನು ಹಾಕಲಾಗಿಲ್ಲ. ‘ಶುಭ ಸಮಾರಂಭಗಳಿಗೆ ತೆರಳುವಾಗ ಹಳೆಯ ಚಿನ್ನಾಭರಣಗಳನ್ನು ಬ್ಯಾಗ್‌ನಲ್ಲೋ ಪರ್ಸ್‌ನಲ್ಲೋ ಕೊಂಡೊಯ್ಯುವ ಬದಲು ಧರಿಸಿಕೊಂಡು ತೆರಳಿದರೆ ಉತ್ತಮ. ಇದು ಯಾವುದೇ ಅನುಮಾನಗಳಿಗೆ ಎಡೆಮಾಡಿಕೊಡುವುದಿಲ್ಲ’ ಎಂದು ಜಿಪಂ ಸಿಇಒ ಡಾ| ಎಂ.ಆರ್‌. ರವಿ ತಿಳಿಸಿದ್ದಾರೆ.

ದಾಖಲೆ ಇಲ್ಲದಿದ್ದರೆ ವಶಕ್ಕೆ
ಸೂಕ್ತ ದಾಖಲೆ ಇಲ್ಲದೇ ಮಿತಿಗಿಂತ ಹೆಚ್ಚಿನ ನಗದು ಅಥವಾ ಇತರ ವಸ್ತುಗಳನ್ನು ಕೊಂಡೊಯ್ದಲ್ಲಿ ಕಾನೂನುಬಾಹಿರ ನಗದು ವರ್ಗಾವಣೆ ಪ್ರಕರಣ ದಾಖಲಾಗುತ್ತದೆ. ವಾಹನದಲ್ಲಿ ಯಾವುದೇ ಪಕ್ಷದ ಚಿಹ್ನೆ, ಧ್ವಜ ಅಥವಾ ಸಣ್ಣ ಕುರುಹುಗಳಿದ್ದರೂ ಅದನ್ನು ಪಕ್ಷದ ಉದ್ದೇಶಕ್ಕೆಂದೇ ಗುರುತಿಸುವ ಸಾಧ್ಯತೆಗಳೂ ಇವೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ದಾಖಲೆಗಳನ್ನು ಇಟ್ಟುಕೊಂಡೇ ತೆರಳುವುದು ಉತ್ತಮವಾಗಿದೆ. ಖಾಸಗಿ ಶುಭಸಮಾರಂಭಗಳ ಮೇಲೆ ನೀತಿ ಸಂಹಿತೆ ಪರಿಣಾಮ ಬೀರುವುದಿಲ್ಲ. ಆದರೆ ಸಂಬಂಧಪಟ್ಟವರು NOC (ನೋ ಆಬ್ಜೆಕ್ಷನ್‌ ಸರ್ಟಿಫಿಕೇಟ್‌) ಅನುಮತಿ ಪತ್ರವನ್ನು ಜಿಲ್ಲಾಡಳಿತದ ಕಡೆಯಿಂದ ಪಡೆದುಕೊಳ್ಳುವುದು ಉತ್ತಮ. ಒಂದು ವೇಳೆ ಸಮಾರಂಭದ ಏರ್ಪಾಟು, ಒದಗಿಸಲಾದ ಊಟ ಉಪಾಹಾರ, ಕೊಡುಗೆ ಇತ್ಯಾದಿಗಳಲ್ಲಿ ರಾಜಕೀಯ ಮುಖಂಡರ ಪಾತ್ರದ ಬಗ್ಗೆ ದೂರು ಬಂದಲ್ಲಿ ಕ್ರಮತೆಗೆದುಕೊಳ್ಳಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಾಖಲೆ ಇರಲಿ
ಜಿಲ್ಲೆಯ ಅಲ್ಲಲ್ಲಿ ಚೆಕ್‌ಪೋಸ್ಟ್‌ ಗಳು ಕಾರ್ಯನಿರ್ವಹಿಸುತ್ತಿವೆ. ಹಣ ಅಥವಾ ಯಾವುದೇ ವಸ್ತುಗಳನ್ನು ಕೊಂಡೊಯ್ಯುವಾಗ ಸರಿಯಾದ ದಾಖಲೆ ಜತೆಗಿರಲಿ. ಯಾವುದೇ ಅಕ್ರಮ ವಹಿವಾಟು ಘಟಿಸದಿರಲು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತದೆ.
-ವೈಶಾಲಿ, ಅಪರ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.