ದುರಸ್ತಿಗೆ ಇನ್ನೂ ಕೂಡಿ ಬಂದಿಲ್ಲ ಸಮಯ!
Team Udayavani, Dec 27, 2017, 10:03 AM IST
ಸುರತ್ಕಲ್: ಸುರತ್ಕಲ್ ಬಳಿಕ ಮಂಗಳೂರು ನಂತೂರು ವರೆಗೆ ಸಿಗುವ ಹೆದ್ದಾರಿ ಮಾತ್ರ ಹೀಗೇಕೆ ಎಂಬ ಪ್ರಶ್ನೆ ಸವಾರರಲ್ಲಿ ಮೂಡುವ ನಿತ್ಯದ ಪ್ರಶ್ನೆ. ಕಾರಣ ಅಲ್ಲಲ್ಲಿ ಕಾಣುವ ಹೊಂಡ, ಡಾಮರು ಕಿತ್ತು ಮಣ್ಣು ಕಾಣುತ್ತಿರುವ ಸರ್ವಿಸ್ ರಸ್ತೆಗಳು. ಹೊನ್ನಕಟ್ಟೆ, ಬೈಕಂಪಾಡಿ,
ಕೈಗಾರಿಕಾ ಪ್ರದೇಶ, ಸರ್ವಿಸ್ ರಸ್ತೆಗಳೇ ಇಲ್ಲದ ಹೆದ್ದಾರಿ. ಇದರಿಂದ ಅಪಘಾತ ಕಡಿಮೆಯಾಗಲು ಮಾಡಿದ ಚತುಷ್ಪಥ
ರಸ್ತೆಯ ಉದ್ದೇಶವೇ ಬುಡ ಮೇಲಾಗಿದೆ.
ಭರವಸೆ ಉಳಿಸಿಕೊಳ್ಳುವಲ್ಲಿ
ನಿತ್ಯ ದ್ವಿಚಕ್ರ ವಾಹನ ಸವಾರರಲ್ಲಿ ಕೆಲವು ನತದೃಷ್ಟರು ಆಸ್ಪತ್ರೆಯ ಕದತಟ್ಟುವಂತಾದರೆ, ವಾಹನಗಳ ಬಿಡಿ ಭಾಗಗಳೇ ಕಳಚಿ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೋಸಿ ಹೋದ ನಾಗರಿಕ, ವಿವಿಧ ಸಂಘಟನೆಗಳು ಪ್ರತಿಭಟಿಸಿ ರಾ.ಹೆ. ಪ್ರಾಧಿಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದರು.
ಡಿ. 15ರ ಒಳಗಾಗಿ ಕಾಮಗಾರಿ ಆರಂಭಿಸುವ ಭರವಸೆಯೂ ಸಿಕ್ಕಿತ್ತು. ಭರವಸೆ ಉಳಿಸಿಕೊಳ್ಳುವಲ್ಲಿ ಇಲಾಖೆ ವಿಫಲವಾಗಿದ್ದು, ಪ್ರತಿಭಟನೆ ಹಮ್ಮಿಕೊಂಡ ಇಲಾಖೆಗಳು ಮತ್ತೆ ರಸ್ತೆಗಿಳಿಯಲು ಸಜ್ಜಾಗಿವೆ. ಡಿವೈಎಫ್ಐ ಬುಧವಾರ ಬೈಕಂಪಾಡಿ ಯಲ್ಲಿ ಅಣುಕು ಶವ ದಹನ ನಡೆಸಲು ನಿರ್ಧರಿಸಿದೆ. ಬೈಕಂಪಾಡಿಯಿಂದ ಪಾದಯಾತ್ರೆ ಮೂಲಕ ತೆರಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಿದೆ.
ಕಾಮಗಾರಿಗೆ ಮೀನ ಮೇಷ
ರಾಷ್ಟ್ರೀಯ ಕಾರ್ಮಿಕ ಸಂಘಟನೆ ಇಂಟಕ್ ರಾಷ್ಟ್ರೀಯ ಹೆದ್ದಾರಿ ಪ್ರಾ ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಜ. 1ರಿಂದ ಪ್ರತಿಭಟನೆಗೆ ನಿರ್ಧರಿಸಿದೆ. 8 ಕೋಟಿ ರೂ. ದುರಸ್ತಿಗಾಗಿ ಬಿಡುಗಡೆಯಾಗಿದ್ದರೂ ಮೀನ ಮೇಷ ಎಣಿಸಲಾಗುತ್ತಿದೆ ಎಂದು ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ಆರೋಪಿಸಿದರು.
ಭೀತಿಯಲ್ಲಿ ಸಣ್ಣ ವಾಹನಗಳು!
ಸಣ್ಣ ವಾಹನಗಳು ಇಲ್ಲಿನ ಹೆದ್ದಾರಿಯಲ್ಲಿ ಆತಂಕದಿಂದಲೇ ಓಡಾಡುವ ಸ್ಥಿತಿಯಿದೆ. ಒಂದೆರಡು ಬಾರಿ ಜಲ್ಲಿ ಸುರಿಯಲಾಗಿತ್ತಾದರೂ ಕೆಲವೇ ದಿನದಲ್ಲಿ ಮತ್ತೆ ಯಥಾ ಸ್ಥಿತಿ ಮುಂದುವರಿದಿದೆ. ಇಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚರಂಡಿ ನಿರ್ಮಾಣಕ್ಕೆ ಇಲಾಖೆ ಮುಂದಾಗಿತ್ತಾದರೂ ಗುತ್ತಿಗೆದಾರನಿಗೆ ಪಾವತಿ ಆಗದ ಕಾರಣ ಕಾಮಗಾರಿ ಅಪೂರ್ಣಗೊಂಡಿದೆ. ಕೆಟ್ಟು ಹೋದ ರಸ್ತೆಗಳನ್ನು ಶೀಘ್ರದಲ್ಲಿ ಸರಿಪಡಿಸಿ ಸುಗಮ ಸಂಚಾರಕ್ಕೆ ಅಣಿ ಮಾಡಬೇಕಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ನಿರ್ಲಕ್ಷ್ಯ ತಾಳಿರುವುದರಿಂದ ಬೇರೆ ಉಪಾಯವಿಲ್ಲದೆ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ.
ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ
ಹೆದ್ದಾರಿ ದುರಸ್ತಿಗೆ ಈಗಾಗಲೇ ಟೆಂಡರ್ ನೀಡಲಾಗಿದೆ. ಗುತ್ತಿಗೆದಾರರಿಗೆ ಈಗಾಗಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
– ಅಜಿತ್ ಕುಮಾರ್, ಎಂಜಿನಿಯರ್ ರಾ.ಹೆ. ಇಲಾಖೆ
ಸಭೆ ಕರೆದು ಚರ್ಚಿಸುವೆ
ಡಿ. 15ರ ಬಳಿಕಆರಂಭಿಸುವುದಾಗಿ ಹೆದ್ದಾರಿ ಅಧಿಕಾರಿಗಳು ಭರವಸೆ ನೀಡಿದ್ದರು. ಇದಕ್ಕಾಗಿ ವಿವಿಧ ಸಂಘಟನೆ ಪ್ರತಿಭಟನೆ ಮಾಡಿದರೂ ವಿಳಂಬವಾಗುತ್ತಿದೆ. ಮುಂದಿನ ಸೋಮವಾರ ಎನ್ಎಚ್ಎಐ ಅ ಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ.
– ಮೊಯಿದಿನ್ ಬಾವಾ, ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ