ಬೊಬ್ಬೆ ಕೇಳಿದ್ದು ನಿಜ : ಸೈಮನ್‌


Team Udayavani, Jul 31, 2019, 5:14 AM IST

siman

ಉಳ್ಳಾಲ: ನೇತ್ರಾವತಿ ಸೇತುವೆಯ 8ನೇ ಕಂಬದ ಬಳಿ ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ನದಿಗೆ ಬೀಳುತ್ತಿರುವ ದೃಶ್ಯವನ್ನು ಸ್ಥಳೀಯ ಮೀನುಗಾರ, 68ರ ಹರೆಯದ ಉಳಿಯ ಹೊಗೆ ನಿವಾಸಿ ಸೈಮನ್‌ ಡಿ’ಸೋಜಾ ಕಣ್ಣಾರೆ ಕಂಡಿದ್ದಾರೆ. ಉಳಿಯ ಹೊಗೆಯ ತನ್ನ ಮನೆಯಿಂದ ಎಂದಿನಂತೆ ಸಂಜೆ 5.30ಕ್ಕೆ ಮೀನು ಹಿಡಿಯಲು ಸಣ್ಣ ಬೋಟ್‌ನಲ್ಲಿ ತೆರಳಿದ್ದ ಸೈಮನ್‌ ಹೇಳುವಂತೆ, “ನಾನು ನೇತ್ರಾವತಿ ಸೇತುವೆಯ 6ನೇ ಕಂಬದ ಬಳಿ ಬಲೆ ಬೀಸಿ ಮೀನು ಹಿಡಿಯುತ್ತಿದ್ದಾಗ ಬೊಬ್ಬೆಯೊಂದು ಕೇಳಿತ್ತು. ಅತ್ತ ನೋಡಿದಾಗ ಎಂಟನೇ ಪಿಲ್ಲರ್‌ ಬಳಿ ವ್ಯಕ್ತಿಯೊಬ್ಬರು ನದಿಗೆ ಧುಮುಕಿದ್ದು ಕಾಣಿಸಿತು. ವ್ಯಕ್ತಿ ಸುಮಾರು 5 ನಿಮಿಷಗಳ ಕಾಲ ಮುಳುಗೇಳುತ್ತಿದ್ದುದನ್ನು ಕಂಡಿದ್ದೇನೆ. ನಾನು ಬಲೆಯನ್ನು ದೋಣಿಗೆ ಎಳೆದು ಘಟನಾ ಸ್ಥಳಕ್ಕೆ ತಲುಪಿದಾಗ ಬಿದ್ದ ಸ್ಥಳದಲ್ಲಿ ಯಾವುದೇ ಸಂಚಲನೆ ಕಂಡು ಬಂದಿರಲಿಲ್ಲ. ಹುಡುಕಾಡಿ ನಾನು ವಾಪಸ್‌ ಆದೆ. ಈ ಸಂದರ್ಭದಲ್ಲಿ ಇನ್ನೊಂದು ದೋಣಿಯವರೂ ಹುಡುಕಾಡಿದ್ದು, ಬಿದ್ದ ವ್ಯಕ್ತಿ ಮಾಯವಾಗಿದ್ದರು.’
ಸೀಗ್ರೌಂಡ್‌ ಸಮುದ್ರ ತೀರಕ್ಕೆ ಹೊರಟಿದ್ದರೆ?
ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಕ್ಕಚ್ಚೇರಿ ಸೀಗ್ರೌಂಡ್‌ನ‌ ಸಮುದ್ರ ತಟದಲ್ಲಿ ಸುಮಾರು 30 ಎಕರೆ ಖಾಲಿ ಭೂಮಿಯನ್ನು 20 ವರ್ಷಗಳ ಹಿಂದೆಯೇ ಸಿದ್ಧಾರ್ಥ್ ಖರೀದಿಸಿದ್ದರು. ಇದರಲ್ಲಿ ಸುಮಾರು 8 ಎಕರೆ ಪ್ರದೇಶ ಸಿಆರ್‌ಝಡ್‌ ವ್ಯಾಪ್ತಿಯಲ್ಲಿದೆ. ಸಮುದ್ರ ಕೊರೆತದಿಂದ ಸ್ವಲ್ಪ ಭಾಗ ಮಾಯವಾಗಿದೆ. 22 ಎಕರೆ ಭೂಮಿಯ ಆರ್‌ಟಿಸಿ ಸಿದ್ಧಾರ್ಥ್ ಹೆಸರಲ್ಲಿದೆ. ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯೊಂದಿಗೆ ಪೋಲೋ ಗ್ರೌಂಡ್‌ ಆರಂಭಿಸುವ ನಿಟ್ಟಿನಲ್ಲಿ ಶ್ರೀಲಂಕಾ ಮೂಲದ ಆರ್ಕಿಟೆಕ್ಟ್ ಬಂದು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೂವರೆ ವರ್ಷದ ಹಿಂದೆ ಸಿದ್ಧಾರ್ಥ್ ಪತ್ನಿ ಸಮೇತ ಈ ಜಾಗಕ್ಕೆ ಭೇಟಿ ನೀಡಿದ್ದು, ಸಿಆರ್‌ಝಡ್‌ ಕಾನೂನಿನಿಂದ ಪೋಲೋ ಗ್ರೌಂಡ್‌ ಮಾಡುವ ಯೋಜನೆ ವಿಳಂಬವಾಗಿತ್ತು ಎನ್ನಲಾಗಿದೆ. ಸೋಮವಾರ ತನ್ನ ಕಾರು ಚಾಲಕನೊಂದಿಗೆ ತನ್ನ ಸೈಟ್‌ ಕಡೆ ತೆರಳ್ಳೋಣ ಎಂದಿದ್ದು, ಮುಕ್ಕಚ್ಚೇರಿಯ ಸೀಗ್ರೌಂಡ್‌ ಪ್ರದೇಶಕ್ಕೆ ಭೇಟಿ ನೀಡುವವರಿದ್ದರೇ ಎನ್ನುವುದು ಇನ್ನೂ ನಿಗೂಢವಾಗಿದೆ.
ಸಮುದ್ರಕ್ಕೆ ಕೊಚ್ಚಿ ಹೋಗಿರುವ ಸಾಧ್ಯತೆ ?
ಸಾಮಾನ್ಯವಾಗಿ ರಾತ್ರಿ ಸಮಯವಾದ್ದರಿಂದ ಸಮುದ್ರ ಇಳಿತ ಸ್ಥಿತಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಯಾರಾದರೂ ನದಿಯಲ್ಲಿ ಬಿದ್ದಾಗ ಮುಳುಗೇಳದಿದ್ದರೆ ಬಿದ್ದ ಸ್ಥಳದಲ್ಲಿ ಸಿಲುಕಿಕೊಳ್ಳುವ (ಅಡಿ ಹಿಡಿಯುವ)ಸಾಧ್ಯತೆ ಹೆಚ್ಚು, ನದಿಗೆ ಹಾರಿದ ವ್ಯಕ್ತಿ ಮುಳುಗಿ ಏಳುವ ಸ್ಥಿತಿಯಲ್ಲಿದ್ದರೆ ಸಂಜೆಯ ಸಮಯದಲ್ಲಿ ನೀರು ಇಳಿತವಾಗುವುದರಿಂದ ಅಳಿವೆ ಬಾಗಿಲಿನ ಕಡೆ ರಭಸವಾಗಿ ಎಳೆದುಕೊಂಡು ಹೋಗುವ ಸಾಧ್ಯತೆ ಹೆಚ್ಚು. ಹೀಗಾಗಿ ಸೋಮವಾರ ಸಂಜೆ ನದಿಗೆ ಬಿದ್ದಿರುವ ವ್ಯಕ್ತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಅಳಿವೆ ಬಾಗಿಲಿನ ಮೂಲಕ ಸಮುದ್ರ ಸೇರಿರುವ ಸಾಧ್ಯತೆ ಹೆಚ್ಚು ಎಂದು ಸ್ಥಳೀಯ ಮೀನುಗಾರ ಫ್ರಾನ್ಸಿಸ್‌ ಅಭಿಪ್ರಾಯಪಟ್ಟಿದ್ದಾರೆ. 24 ಗಂಟೆಯ ಬಳಿಕ ಮುಳುಗಿರುವ ವ್ಯಕ್ತಿಯ ಮೃತದೇಹ ನೀರಿನ ಮೇಲೆ ಬರುತ್ತದೆ ಅಥವಾ ಸಮುದ್ರ ತಟಕ್ಕೆ ಬರುತ್ತದೆ ಎಂದೂ ಅವರು ಹೇಳಿದ್ದಾರೆ.
ಸಮುದ್ರ ತಟದಲ್ಲಿ ಕಣ್ಗಾವಲು
ಕೋಟೆಪುರ ಅಳಿವೆ ಬಾಗಿಲಿನಿಂದ ಸೋಮೇಶ್ವರ ಉಚ್ಚಿಲದ ಎಂಡ್‌ ಪಾಯಿಂಟ್‌ ಮತ್ತು ತಲಪಾಡಿ ಸಮುದ್ರ ತೀರದಲ್ಲಿ ಸ್ಥಳೀಯ ಮೀನುಗಾರರು ಕಣ್ಗಾವಲು ಇರಿಸಿದ್ದಾರೆ. ಸಮುದ್ರದ ಕಲ್ಲುಗಳೆಡೆಯಲ್ಲಿ ಸ್ಥಳೀಯ ಜೀವರಕ್ಷಕ ಈಜುಗಾರರು ಹುಡುಕಾಡಿದ್ದಾರೆ. ಮಂಜೇಶ್ವರ ಸೇರಿದಂತೆ ಕಾಸರಗೋಡುವರೆಗಿನ ಮೀನುಗಾರರಿಗೆ ಮತ್ತು ಸ್ಥಳೀಯ ಈಜುಗಾರರಿಗೆ ಸಮುದ್ರ ತಟದ ಮೇಲೆ ನಿಗಾ ಇರಿಸಿಲು ಮಾಹಿತಿ ನೀಡಲಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.