ಉಳಿದೆಡೆ ಪ್ರಜಾಪ್ರಭುತ್ವ ಇಲ್ಲವೇ? ಐವನ್ ಡಿ’ಸೋಜಾ ಪ್ರಶ್ನೆ
Team Udayavani, Mar 14, 2017, 11:51 AM IST
ಮಂಗಳೂರು: ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಹಾಗಾದರೆ ಉಳಿದೆಡೆಗಳಲ್ಲಿ ಪ್ರಜಾಪ್ರಭುತ್ವ ಇಲ್ಲವೋ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಆಗ್ರಹಿಸಿದ್ದಾರೆ.
ಲಾಲ್ಬಾಗ್ ಮನಪಾ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಧಾನಿಯವರು ಇಂತಹ ಟ್ವೀಟ್ ಮಾಡಿರುವುದು ಯಾಕೆಂದು ಅರ್ಥವಾಗುತ್ತಿಲ್ಲ. ಪ್ರಜಾಪ್ರಭುತ್ವ ಗೆದ್ದಿರುವುದು ಎರಡು ಕಡೆಗಳಲ್ಲಿ ಮಾತ್ರವಾ? ಉಳಿದೆಡೆಗಳಲ್ಲಿ ಪ್ರಜಾಪ್ರಭುತ್ವ ಇಲ್ಲವೇ ಎಂದು ಅವರು ಪ್ರಶ್ನಿಸಿದರು.
ನಿಯಮಕ್ಕೆ ವಿರುದ್ಧ ಏಕೈಕ ಅತಿದೊಡ್ಡ ಪಕ್ಷವನ್ನು ಕರೆದು ಸರಕಾರ ರಚನೆ ಮಾಡಲು ಹೇಳುವುದು ನಿಯಮ. ಆದರೆ ಈಗಿನ ಪರಿಸ್ಥಿತಿ ಅದಕ್ಕೆ ವ್ಯತಿರಿಕ್ತವಾಗಿದೆ. ಗೋವಾದಲ್ಲಿ 17 ಸೀಟ್ ಗಳಿಸಿರುವ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ 13 ಸೀಟ್ ಗಳಿಸಿರುವ ಬಿಜೆಪಿಯನ್ನು ಕರೆದು ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು.
ಮೋದಿ ಅಲೆ ಎಂದುಕೊಂಡು ಬಿಜೆಪಿಯವರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹಾಗಾದರೆ ಅಲೆ ಬೀಸಿದ್ದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಮಾತ್ರವಾ ಎಂದು ಪ್ರಶ್ನಿಸಿದ ಅವರು, ಇಂತಹ ಪದ ಪ್ರಯೋಗ ತಪ್ಪು ವ್ಯಾಖ್ಯಾನ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಅನಿಲ್ ಕುದೊRàರಿಗುಡ್ಡೆ, ಶರೀಫ್ ದೇರಳಕಟ್ಟೆ, ಸೋನ್ಸ್, ಮುದಶ್ಶಿರ್ ಕುದ್ರೋಳಿ, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್