ಆಡಂ ಕುದ್ರುವಿನಲ್ಲಿ ಐವನ್ ಡಿ’ಸೋಜಾ ಮತಯಾಚನೆ
Team Udayavani, May 10, 2018, 10:51 AM IST
ಮಹಾನಗರ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಆಡಂ ಕುದ್ರುವಿನಲ್ಲಿ ಸರಕಾರಿ ಮುಖ್ಯ ಸಚೇತಕ ಐವನ್ ಡಿ’ಸೋಜಾ ಅವರು ಮನೆ-ಮನೆಗೆ ತೆರಳಿ ಕಾಂಗ್ರೆಸ್ ಪರ ಹಾಗೂ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚೇತಕರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 5 ವರ್ಷಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಭಿವೃದ್ಧಿ ಕಾರ್ಯಗಳನ್ನು ಈ ಚುನಾವಣೆಯಲ್ಲಿ ಪ್ರಮುಖ ವಿಚಾರವಾಗಿ ಪರಿಗಣಿಸಿ ಮತಚಲಾಯಿಸಿ ಕಾಂಗ್ರೆಸ್ನ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕು. ಜೆ.ಆರ್. ಲೋಬೋ ಅವರು ಮಾಡಿದ ಹಲವಾರು ಜನಪರ ಕಾರ್ಯಕ್ರಮಗಳು ಈ ಚುನಾವಣೆಯಲ್ಲಿ ಪರಿಗಣನೆಯಾಗಲಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಉಸ್ಮಾನ್ ಕಲ್ಲಡ್ಕ, ಪಿಯೂಸ್ ಮೊಂತೆರೋ ಹಾಗೂ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.