ಹೆದ್ದಾರಿ ಪಕ್ಕ ಹಲಸು ವ್ಯಾಪಾರ: ಗ್ರಾಮೀಣ ಜನರಿಗೆ ಆದಾಯ
Team Udayavani, May 28, 2018, 4:00 AM IST
ಬೆಳ್ತಂಗಡಿ: ಒಂದು ಕಾಲದಲ್ಲಿ ಹಲಸಿನ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಾಲವಿತ್ತು ಎಂದು ಹಿರಿಯರು ನೆನಪಿಸಿಕೊಳ್ಳುತ್ತಾರೆ. ಆದರೆ ಇಂದು ಮರಗಳ ನಾಶ ಹಾಗೂ ಇತರೆ ಕಾರಣಗಳಿಂದ ಹಲಸು ಕಡಿಮೆಯಾಗುತ್ತಿದೆ. ಆದರೆ ಗ್ರಾಮೀಣ ಜನತೆ ಇದೀಗ ಅಂಗಡಿ ಹಾಗೂ ಹೆದ್ದಾರಿಗಳ ಬದಿ ಹಲಸು ಮಾರಾಟ ಮಾಡುವ ಮೂಲಕ ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಮುಖ್ಯವಾಗಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಬದಿ ಹಾಗೂ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ದೂರದೂರುಗಳಿಂದ ಆಗಮಿಸುವ ಮಂದಿ ಹಲಸು ಖರೀದಿಸಿ ಆಸ್ವಾದಿಸಿದರೆ, ಗ್ರಾಮೀಣರಿಗೆ ಆದಾಯವಾಗುತ್ತಿದೆ.
ಪ್ಯಾಕೆಟ್ ಗಳಲ್ಲಿ ಮಾರಾಟ
ಹಲಸನ್ನು ಪೂರ್ಣವಾಗಿ ಹಾಗೂ ತೊಳೆಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡಲಾಗುತ್ತದೆ. ಪೂರ್ಣ ಹಲಸು 200ರಿಂದ 300 ರೂ. ವರೆಗೂ ಮಾರಾಟ ಮಾಡಲಾಗುತ್ತದೆ. 5ರಿಂದ 6 ತೊಳೆಗಳಿರುವ ಪ್ಯಾಕ್ ಗೆ 10 ರೂ.ನಂತೆ ಮಾರಾಟ ಮಾಡಲಾಗುತ್ತದೆ. ಸಾಮಾನ್ಯವಾಗಿ ಗಟ್ಟಿಯಾಗಿರುವ ಬರ್ಕೆ ಹಲಸಿನ ಹಣ್ಣಿಗೆ ಹೆಚ್ಚು ಬೇಡಿಕೆ ಇರುವುದು ಎನ್ನುತ್ತಾರೆ ವ್ಯಾಪಾರಸ್ಥರು.
ಬಿಡಿಸಿದ ತೊಳೆಗೆ ಬೇಡಿಕೆ ಹೆಚ್ಚು
ಉತ್ತಮ ಹಣ್ಣನ್ನು ಜನತೆ ಇಷ್ಟಪಟ್ಟು ಖರೀದಿಸುತ್ತಾರೆ. ಹೊರ ಜಿಲ್ಲೆಗಳ ಜನತೆ ದಾರಿಯಲ್ಲಿ ಆಗಮಿಸುವಾಗ ವಾಹನ ನಿಲ್ಲಿಸಿ ಖರೀದಿಸುತ್ತಾರೆ. ಊರಿನವರೂ ಹೆಚ್ಚಿನ ಖರೀದಿ ಮಾಡುತ್ತಾರೆ. ಹಣ್ಣಿನ ತೊಳೆ ಬಿಡಿಸಿ ಮಾರುವುದರಿಂದ ಬೇಡಿಕೆ ಹೆಚ್ಚುತ್ತದೆ.
– ಮೀನಾಕ್ಷಿ, ಹಲಸು ಮಾರಾಟಗಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್