ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ:ಪಿಡಬ್ಲ್ಯುಡಿ ಎಇ ನರಸಿಂಹರಾಜುಗೆ ಜೈಲು, 25 ಲ.ರೂ.ದಂಡ
Team Udayavani, Nov 10, 2022, 7:54 PM IST
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಮಂಗಳೂರಿನಲ್ಲಿ ಲೋಕೋಪಯೋಗಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿದ್ದ ಎನ್.ನರಸಿಂಹ ರಾಜು ಅವರ ಮೇಲಿನ ಆರೋಪ ಸಾಬೀತಾಗಿದೆ.
ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ 3 ವರ್ಷ 6 ತಿಂಗಳು ಶಿಕ್ಷೆ ಹಾಗೂ 25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು ದೇವನಹಳ್ಳಿ ಮದ್ದಯ್ಯ ರಸ್ತೆ ನಿವಾಸಿ ಎನ್. ನರಸಿಂಹರಾಜು ವಿರುದ್ಧ 2010ರ ಮಾ. 24ರಂದು ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳನ್ನು ಹೊಂದಿರುವ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ನ. 10ರಂದು ತೀರ್ಪು ನೀಡಿದ್ದು, ತೀರ್ಪಿನಲ್ಲಿ ಅಪರಾಧಿ ನರಸಿಂಹರಾಜುವಿಗೆ 3ವರ್ಷ 6ತಿಂಗಳು ಶಿಕ್ಷೆ, 25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 6 ತಿಂಗಳು ಸಾದಾ ಸಜೆ ವಿಧಿಸಿ ಅಂತಿಮ ತೀರ್ಪು ನೀಡಿದ್ದಾರೆ.
ಪೊಲೀಸ್ ಉಪಾಧೀಕ್ಷಕ ಸದಾನಂದ ಎಂ. ವರ್ಣೇಕರ್ ದೂರುದಾರರಾಗಿದ್ದು, ಪೊಲೀಸ್ ಉಪಾಧೀಕ್ಷಕ ವಿಠಲದಾಸ್ ಪೈ ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮನ್ನಿಪಾಡಿ ಸರಕಾರದ ಪರವಾಗಿ ವಾದಿಸಿದ್ದರು.
ಮತ್ತೂಂದು ಪ್ರಕರಣ: ನರಸಿಂಹರಾಜು ವಿರುದ್ಧ 2009ರ ಸೆ. 8ರಂದು ಟ್ರಾÂಪ್ ಪ್ರಕರಣವೂ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು