
ಮಂಗಳೂರು: ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಯುವಕನಿಗೆ ಜೈಲು
Team Udayavani, Sep 20, 2022, 8:49 PM IST

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ನಗರದಲ್ಲಿ ವೃದ್ಧೆಯೊಬ್ಬರ ಕೊರಳಿನಿಂದ ಸರ ಎಗರಿಸಿದ್ದ ಪ್ರಕರಣದಲ್ಲಿ ಸುಳ್ಯ ತಾಲೂಕು ಕಾನತ್ತಿಲ ಕ್ರಾಸ್ ಜಟ್ಟಿಪಳ್ಳ ನಿವಾಸಿ ಯುವಕನಿಗೆ ಮಂಗಳೂರಿನ 2ನೇ ಸಿಜೆಎಂ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಹಮ್ಮದ್ ನಿಝಾರ್ ಕೆ. ಶಿಕ್ಷೆಗೊಳಗಾದ ಯುವಕ. ಇತರ ಆರೋಪಿಗಳಾದ ಬೆಳ್ಳಾರೆಯ ಕಾಮಧೇನು ಜ್ಯುವೆಲರ್ನ ಮಾಲಕಿ ತಾರಾ ಕುಮಾರಿ ಹಾಗೂ ಜುರೈಸ್ ಕೆ.ಎಂ ಅವರನ್ನು ಸಾಕ್ಷ್ಯಾಧಾರದ ಕೊರತೆಯಿಂದ ದೋಷಮುಕ್ತಗೊಳಿಸಿದೆ.
ಅಪರಾಧಿ ನಿಝಾರ್ಗೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳು ಸಾಮಾನ್ಯ ಸೆರೆಮನೆ ವಾಸ ವಿಧಿಸಲಾಗಿದೆ.
2016 ಅ. 16ರಂದು ಕದ್ರಿ ಕಂಬಳ ರಸ್ತೆ ನಿವಾಸಿ ಅನುರಾಧಾ ಎಸ್. ರಾವ್ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದಾಗ ನಿಝಾರ್ ಹಿಂದುಗಡೆಯಿಂದ ಬಂದು ಏಕಾಏಕಿ ಕುತ್ತಿಗೆಗೆ ಕೈಹಾಕಿ 10.61ಗ್ರಾಂ ತೂಕದ 35 ಸಾವಿರ ರೂ. ಬೆಲೆಬಾಳುವ ಚಿನ್ನದ ಸರವನ್ನು ಕಿತ್ತುಕೊಂಡು ಇನ್ನೊಬ್ಬ ಆರೋಪಿ ಜುರೈಸ್ನೊಂದಿಗೆ ಸ್ಕೂಟರಿನಲ್ಲಿ ಪರಾರಿಯಾಗಿದ್ದ.
ಅಂದಿನ ಮಂಗಳೂರು ಪೂರ್ವ ಇನ್ಸ್ಪೆಕ್ಟರ್ ಮಾರುತಿ ಜಿ. ನಾಯಕ್ ಅವರು ಆರೋಪಿಗಳನ್ನು ಬಂಧಿಸಿ ಸುಲಿಗೆ ಮಾಡಿದ್ದ ಸರವನ್ನು ಬೆಳ್ಳಾರೆಯ ಜುವೆಲರಿಯಿಂದ ವಶಪಡಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಕುರಿತು 2ನೇ ಸಿಜೆಎಂ ನ್ಯಾಯಾಧೀಶ ಮಧುಕರ ಪಿ.ಭಾಗವತ್ ಅವರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
