ಅಪಾಯಕಾರಿಯಾದ ಜಕ್ರಿಬೆಟ್ಟು ಜಂಕ್ಷನ್‌

ಪದೇಪದೇ ಅಪಘಾತ; ಸಮಸ್ಯೆ ಬಗೆಹರಿಸಲು ಸಾರ್ವಜನಿಕರ ಆಗ್ರಹ

Team Udayavani, May 5, 2022, 9:58 AM IST

jakribettu

ಬಂಟ್ವಾಳ: ಬಂಟ್ವಾಳ ಪೇಟೆಯಿಂದ ಆಗಮಿಸಿದ ವಾಹನಗಳು ಬಿ.ಸಿ.ರೋಡ್‌-ಪುಂಜಾಲಕಟ್ಟೆ ಹೆದ್ದಾರಿ ಸೇರುವ ಜಕ್ರಿಬೆಟ್ಟು ಜಂಕ್ಷನ್‌ ಪ್ರದೇಶವು ತೀರಾ ಅಪಾಯಕಾರಿಯಾಗಿ ಪರಿಣಮಿಸಿದೆ. ನಿತ್ಯವೂ ಒಂದಿಲ್ಲೊಂದು ಅಪಘಾತಗಳಿಗೆ ಕಾರಣವಾಗುತ್ತಿದೆ.

ಬಿ.ಸಿ.ರೋಡ್‌-ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿ ಪೂರ್ಣಗೊಂಡ ಬಳಿಕ ಇದೇ ಜಂಕ್ಷನ್‌ನಲ್ಲಿ ಈಗಾಗಲೇ ಸುಮಾರು 25ಕ್ಕೂ ಅಧಿಕ ಅಪಘಾತಗಳು ಸಂಭವಿಸಿವೆ. ಕೆಲವು ದಿನಗಳ ಹಿಂದೆ ನಡೆದ ಅಪ ಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆಯೂ ನಡೆದಿದೆ. ಹೀಗಾಗಿ ಈ ಭಾಗದಲ್ಲಿ ವಾಹನ ಸವಾರರು/ಚಾಲಕರು ಎಷ್ಟೇ ಎಚ್ಚರ ವಹಿಸಿದ್ದರೂ ಅಪಘಾತದ ಸ್ಥಿತಿ ಮುಂದುವರಿದಿದೆ.

ಪ್ರಸ್ತುತ ಅಭಿವೃದ್ಧಿಗೊಂಡ ಬಳಿಕ ಹೆದ್ದಾ ರಿಯು ಮೇಲ್ಭಾಗದಲ್ಲಿದ್ದು, ಬಂಟ್ವಾಳ ಪೇಟೆಯನ್ನು ಸಂಪರ್ಕಿಸುವ ರಸ್ತೆ ಕೊಂಚ ಇಳಿಜಾರಾಗಿದೆ. ಪೇಟೆಯಿಂದ ಆಗಮಿಸಿದ ವಾಹನಗಳು ಹೆದ್ದಾರಿ ಸೇರುವ ಸಂದರ್ಭ ದಲ್ಲಿ ಗೊಂದಲ ಉಂಟಾಗುತ್ತಿದ್ದು, ಹೆದ್ದಾರಿಯಲ್ಲಿ ವೇಗವಾಗಿ ಸಾಗುವ ವಾಹನಗಳು ನಿಯಂತ್ರಣ ಕಳೆದುಕೊಂಡು ಢಿಕ್ಕಿ ಹೊಡೆಯುವ ಸ್ಥಿತಿ ಉಂಟಾಗುತ್ತಿದೆ.

ಒಂದೆಡೆ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುತ್ತಿದ್ದರೆ, ಪೇಟೆಯಿಂದ ಬಂದ ವಾಹನಗಳು ಹೆದ್ದಾರಿಯಲ್ಲಿ ಬರುವ ವಾಹನ ದೂರದಲ್ಲಿದೆ ಎಂದು ಏಕಾಏಕಿ ಹೆದ್ದಾರಿಯ ಕಡೆಗೆ ನುಗ್ಗಿಸುತ್ತಾರೆ. ಆದರೆ ದೂರದಲ್ಲಿದ್ದ ವಾಹನ ಏಕಾಏಕಿ ಹತ್ತಿರಕ್ಕೆ ಬಂದು ಎರಡೂ ಕಡೆಯ ವಾಹನಗಳು ಗೊಂದಲ ಕ್ಕೀಡಾಗುತ್ತಿವೆ. ಹಲವು ಸಮ ಯಗಳಿಂದ ನಿತ್ಯವೂ ವಾಹನ ಢಿಕ್ಕಿಯಾಗುವ ಘಟನೆ ಮರಕಳಿಸುತ್ತಲೇ ಇದೆ.

ಪರ್ಯಾಯ ಕ್ರಮ ಅಗತ್ಯ

ಪೇಟೆಯಿಂದ ಆಗಮಿಸಿರುವ ರಸ್ತೆ ಯಲ್ಲಿ ಹಂಪ್ಸ್‌ ಅನುಷ್ಠಾನಿಸಿದ್ದರೂ, ಅಪಘಾತವನ್ನು ತಪ್ಪಿಸುವುದಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸರು ಕನಿಷ್ಠ ಪಕ್ಷ ಬ್ಯಾರಿಕೇಡ್‌ಗಳನ್ನು ಇಟ್ಟಾದರೂ, ಅಪಘಾತದ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಅದು ಸಾಧ್ಯವಾಗದೇ ಇದ್ದರೆ ಪರ್ಯಾಯ ಕ್ರಮವೇನು ಎಂಬುದರ ಕುರಿತು ಚಿಂತನೆ ನಡೆಸಬೇಕಿದೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.