ಜಲೀಲ್‌ ಕರೋಪಾಡಿ ಕೊಲೆ: ಸಿಐಡಿ ತನಿಖೆಗೆ ತಂದೆ ಆಗ್ರಹ


Team Udayavani, May 10, 2017, 11:10 AM IST

10-REPORT-3.jpg

ಮಂಗಳೂರು: ಕರೋಪಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಎ. ಅಬ್ದುಲ್‌ ಜಲೀಲ್‌ ಕರೋಪಾಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯ ಪೊಲೀಸರು ನಡೆಸುತ್ತಿರುವ ತನಿಖೆ ತೃಪ್ತಿಕರವಾಗಿಲ್ಲ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಬೇಕು ಎಂದು ಜಲೀಲ್‌ ಅವರ ತಂದೆ ಎ. ಉಸ್ಮಾನ್‌ ಕರೋಪಾಡಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ರನ ಕೊಲೆಗೆ ಕಾರಣವಾಗಿರುವ ಮೂಲ ವ್ಯಕ್ತಿ ಹಾಗೂ ಸೂತ್ರಧಾರರನ್ನು ಇನ್ನೂ ದಸ್ತಗಿರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಎಸ್ಪಿ ಸುಳ್ಳು ಮಾಹಿತಿ: ಐಜಿಪಿಯವರು ಇತ್ತೀಚೆಗೆ ಪತ್ರಿಕಾಗೋಷ್ಠಿಯ ಸಂದರ್ಭ ದಿನೇಶ್‌ ಶೆಟ್ಟಿ ಹೆಸರನ್ನು ಹೇಳಿದ್ದರು. ಎಡಿಜಿಪಿ ಆಲೋಕ್‌ ಕುಮಾರ್‌ ಕೂಡ ದಿನೇಶ್‌ ಶೆಟ್ಟಿ ಬಂಧನಕ್ಕೆ ಪೊಲೀಸ್‌ ವರಿಷ್ಠಾಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಆದರೆ ಎಸ್ಪಿಧಿಯವರು ಮಾತ್ರ ಆತ ಕೇರಳದಲ್ಲಿ ತಲೆಮರೆಸಿಕೊಂಡಿದ್ದಾನೆಂದು ಸಚಿವರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಆತ ಊರಲ್ಲೇ ಇದ್ದುಕೊಂಡು ಧಾರ್ಮಿಕ ಸಮಾಧಿರಂಭಗಳಲ್ಲಿ ಭಾಗವಹಿಸುತ್ತಿದ್ದರೂ ಪೊಲೀ ಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಗೃಹ ಸಚಿವರ ಭೇಟಿಯಿಂದಲೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಉಸ್ಮಾನ್‌ ಕರೋಪಾಡಿ ತಿಳಿಸಿದರು. ಜಲೀಲ್‌ ಹತ್ಯೆಗೆ ದಿನೇಶ್‌ ಪ್ರಮುಖ ಕಾರಣ ಎಂದ‌ ಉಸ್ಮಾನ್‌ ಕರೋಪಾಡಿ, ಆತ ಮತ್ತು ಸಹಚರರ ಬಂಧನವಾಗಬೇಕು ಎಂದು ಆಗ್ರಹಿಸಿದರು.

ಮುಂದಿನ ವಾರ ಸಿಎಂ ಭೇಟಿ: ಮುಂದಿನ ವಾರ ತಾನು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರಕರಣದ ಸೂಕ್ತ ತನಿಖೆ ನಡೆಸಿ ತನ್ನ ಪುತ್ರನ ಸಾವಿಗೆ ನ್ಯಾಯ ಒದಗಿಸಲು ಆಗ್ರಹಿಸುವೆ ಎಂದು ಉಸ್ಮಾನ್‌ ಕರೋಪಾಡಿ ತಿಳಿಸಿದರು. ಪಂಚಾಯತ್‌ ಅಧ್ಯಕ್ಷೆ ಬೇಬಿ ಆರ್‌. ಶೆಟ್ಟಿ, ಕೆ.ಪಿ. ಸೀತಾರಾಂ ಭಟ್‌, ವನಜಾ ಶೆಟ್ಟಿ, ಅಲೊನ್ಸ್‌ ಲಿಗೋರಿ ಡಿ’ಸೋಜಾ ಉಪಸ್ಥಿತರಿದ್ದರು.

ನಿರಾಸಕ್ತಿ ಏಕೆ?
ಇತ್ತೀಚೆಗೆ ಐಜಿಪಿಯವರ ಜತೆಗೆ ಪ್ರಕರಣದ ಬಗ್ಗೆ ಮಾತನಾಡಿದಾಗ, ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಲಾಗಿತ್ತು. ಅದರಲ್ಲಿ ಕೇವಲ 40,000 ರೂ. ಮಾತ್ರವೇ ನೀಡಲಾಗಿತ್ತು ಎಂಬ ಮಾತನ್ನೂ ಹೇಳಿದ್ದಾರೆ. ಹಾಗಾಧಿದರೆ ಆ 40,000 ರೂ. ನೀಡಿದವರು ಯಾರು ಎಂಬುದೂ ಪೊಲೀಸರಿಗೆ ತಿಳಿದಿರಬೇಕಲ್ಲವೇ? ಹಾಗಿದ್ದರೂ ನೈಜ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಾಕೆ ಆಸಕ್ತಿ ತೋರಿಸುತ್ತಿಲ್ಲ ಎಂದು ಎ. ಉಸ್ಮಾನ್‌ ಕರೋಪಾಡಿ ಪ್ರಶ್ನಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.