ಜಾಲ್ಸೂರು-ಕಾಸರಗೋಡು ರಸ್ತೆ: ಅಪಾಯಕಾರಿ ತಿರುವು


Team Udayavani, Feb 11, 2019, 5:51 AM IST

11-february-5.jpg

ಜಾಲ್ಸೂರು: ಸುಳ್ಯ- ಕಾಸರಗೋಡು ರಸ್ತೆಯಲ್ಲಿ ಜಾಲ್ಸೂರು ಗೇಟ್ನಿಂದ ಮುಂದೆ ದೊಡ್ಡ ತಿರುವಿದ್ದು, ನಿರಂತರ ಅಪಘಾತಗಳು ನಡೆಯುತ್ತಿವೆ. ವಾಹನ ದಟ್ಟನೆ ಇರುವ ರಸ್ತೆಯಲ್ಲಿ ಕಾರು, ಬೈಕ್‌ಗಳು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬೀಳುತ್ತವೆ. ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಜನಪ್ರತಿನಿಧಿಗಳ ಜಾಣ ಮೌನವೂ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಹಲವು ವರ್ಷಗಳಿಂದ ಅಪಘಾತಗಳು ಸತತವಾಗಿ ನಡೆಯುತ್ತಿರುವ ಕುರಿತು ‘ಉದಯವಾಣಿ’ ಸುದಿನದಲ್ಲಿ ವಿಶೇಷ ವರದಿ ಪ್ರಕಟಿಸಲಾಗಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಭಾರೀ ಅನಾಹುತ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಸಂಭಾವ್ಯ ಅಪಾಯ ತಪ್ಪಿಸಲಾದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸುವುದು ಒಳಿತು.

ವ್ಯರ್ಥ ತಡೆಗೋಡೆ
ಲೋಕೋಪಯೋಗಿ ಇಲಾಖೆಯಿಂದ 2003-2004ರಲ್ಲಿ ಜಾಲ್ಸೂರು ತಿರುವಿನಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಪರಿಸ್ಥಿತಿ ಬದಲಾಗಿಲ್ಲ. ಕಾಮಗಾರಿಯ ಅವ್ಯವಸ್ಥಿತ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅನುದಾನದ ಕೊರತೆ ಕಾರಣ ನೀಡಿ ಕಾಮಗಾ ರಿಯನ್ನು ಅರೆಬರೆ ನಡೆಸಲಾಗಿತ್ತು.

ಸೂಚನ ಫ‌ಲಕವೂ ಇಲ್ಲ
ಇತ್ತೀಚೆಗೆ ಕಾರೊಂದು ಇದೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಅದೃಷ್ಟ ವಶಾತ್‌ ಯಾವುದೇ ಪ್ರಾಣ ಹಾನಿಯಾಗಿ ರಲಿಲ್ಲ. ಪ್ರಯಾಣಿಕರ ಗಮನಕ್ಕಾಗಿ ರಸ್ತೆ ಬದಿ ‘ಅಪಘಾತ ವಲಯ’ ಎನ್ನುವ ಸೂಚನ ಫ‌ಲಕವನ್ನೂ ಅಳವಡಿಸಿಲ್ಲ. ಮಳೆಗಾಲದಲ್ಲಿ ಇಲ್ಲಿ ಮಣ್ಣು ಕುಸಿಯುತ್ತಿದ್ದರೂ ಅಧಿಕಾರಿಗಳು ಭರವಸೆ ಕೊಟ್ಟು ಮತ್ತೆ ಆ ಕಡೆ ತಿರುಗಿ ನೋಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ತವ್ಯಮರೆತ ಜನಪ್ರತಿನಿಧಿಗಳು
ತಿರುವಿನ ಸಮಸ್ಯೆಯ ಕುರಿತು ಜನಪ್ರತಿನಿಧಿಗಳಿಗೆ ಹಲವು ವರ್ಷಗಳಿಂದ ಮನವಿ ಕೊಟ್ಟರೂ, ಯಾವುದೇ ಸ್ಪಂದನೆ ಇಲ್ಲ. ಗ್ರಾಮಸಭೆಯಲ್ಲೂ ವಿಷಯ ಪ್ರಸ್ತಾವಿಸಲಾಗಿದೆ. ಅಭಿವೃದ್ಧಿಯ ಮಾತು ಚುನಾವಣೆಯ ಸಂದರ್ಭದಲ್ಲಿ ಮತಕ್ಕಾಗಿ ಹೇಳುತ್ತಾರೆ. ಆಮೇಲೆ ನಮ್ಮ ಕಡೆ ತಿರುಗಿ ಕೂಡ ನೋಡುವುದಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಚೇರಿ ಗಳಿಗೆ ಅಲೆಯುವುದು ಬಿಟ್ಟು ಯಾವುದೇ ಪ್ರತಿಫ‌ಲವಿಲ್ಲ ಎನ್ನುವುದು ಜನರ ವಿಷಾದ. ತಾತ್ಕಾಲಿಕ ಪರಿಹಾರವಾದರೂ ಮಾಡಲಿ ಎಂದು ಜನರು ಆಗ್ರಹಿಸಿದ್ದಾರೆ.

ಕ್ರಮ ಕೈಗೊಳ್ಳುತ್ತೇವೆ
ತಿರುವಿನಲ್ಲಿ ಅಪಘಾತ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಇದೆ. ತತ್‌ಕ್ಷಣ ತಾತ್ಕಾಲಿಕ ಪರಿಹಾರ ಮಾಡಲಾಗುವುದು. ತಡೆ ಬೇಲಿ ಅಥವಾ ಟ್ಯಾಪ್‌ ಹಾಕಲು ಕ್ರಮ ಕೈಗೊಳ್ಳುತ್ತೇವೆ.
 -ಸಂದೇಶ್‌,
ಅಸಿಸ್ಟೆಂಟ್ ಎಂಜಿನಿಯರ್‌, ಪಿಡಬ್ಲ್ಯೂಡಿ, ಸುಳ್ಯ

ಅಧಿಕಾರಿಗಳ ನಿರ್ಲಕ್ಷ್ಯ 
ತಿರುವಿನಲ್ಲಿ ವಾಹನಗಳು ತೋಟಕ್ಕೆ ಬೀಳುವುದು ಸಾಮಾನ್ಯವಾಗಿವೆ. ಇತ್ತೀಚೆಗೆ ಕಾರೊಂದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯ  ಅನಾಹುತಗಳಿಗೆ ಕಾರಣವಾಗುತ್ತಿವೆ.
– ಶೇರ್ಕ ಕಾಳಮನೆ,
ಜಾಲ್ಸೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.