ಕಿನ್ನಿಗೋಳಿಯಲ್ಲಿ ಜನಪರ ಉತ್ಸವ
Team Udayavani, Dec 29, 2017, 12:38 PM IST
ಕಿನ್ನಿಗೋಳಿ: ಗ್ರಾಮೀಣ ಪ್ರದೇಶಗಳಲ್ಲಿ ಇರುವ ಜನಪದ ಕಲಾವಿದರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅನೇಕ ಯೋಜನೆಗಳಿಂದ ಪ್ರೋತ್ಸಾಹಿಸುತ್ತಿದೆ. ಈ ಹಿನ್ನಲೆಯಲ್ಲಿ ಜನಪರ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು. ಅವರು. ಡಿ. 28 ರಂದು ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯ ಕಲಾವಿದರು ಸಂಘಟನೆಯ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆಯಡಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ‘ಜನಪರ ಉತ್ಸವ’ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ರಾಜಕೀಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದು, ತನ್ನ ಕ್ಷೇತ್ರದಲ್ಲಿ ವಿಧಾನ ಸಭೆಗೆ ಮಹಿಳಾ ಮೀಸಲಾತಿ ಬಂದರೆ ಸ್ವಾಗತಿಸುವುದಾಗಿ ಶಾಸಕರು ತಿಳಿಸಿದರು. ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ, ಮಾತನಾಡಿ, 60ವರ್ಷ ಮೀರಿದ ಕಲಾವಿದರ ಆರೋಗ್ಯಕ್ಕೆ ಇಲಾಖೆ ಸಹಾಯ ಹಸ್ತ ನೀಡುತ್ತಿದ್ದು, ಅದನ್ನು ಸದುಪಯೋಗಿಸಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿದರು. ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾ.ಪಂ. ಸದಸ್ಯ ದಿವಾಕರ ಕರ್ಕೇರ, ರೋಟರಿ ಅಧ್ಯಕ್ಷೆ ಸೆವ್ರಿನ್ ಲೋಬೋ, ಕಿನ್ನಿಗೋಳಿ ಗ್ರಾ.ಪಂ. ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಲಯನ್ಸ್ ಕ್ಲಬ್ ಅಧ್ಯಕ್ಷೆ ಶಾಂಭವಿ ಶೆಟ್ಟಿ, ತಾಳಿಪಾಡಿ ಪ್ರಾಥಮಿಕ ನೇಕಾರರ ಸಹಕಾರಿ ಸಂಘದ ಆನಂದ ಶೆಟ್ಟಿಗಾರ್, ರಾಜೇಶ್ ಕೆಂಚನಕೆರೆ ಮತ್ತಿತರರಿದ್ದರು. ಮಂಜುಳಾ ಶೆಟ್ಟಿ ನಿರೂಪಿಸಿದರು. ಇನ್ನೂರಕ್ಕೂ ಹೆಚ್ಚು ಕಲಾವಿದರು ಹಿಂದೂಸ್ತಾನಿ ಸಂಗೀತ, ಭರತನಾಟ್ಯ, ನಾಟಕ, ಸುಗಮ ಸಂಗೀತ, ಮಾದಿರ ಕುಣಿತ, ವೀರಗಾಸೆ, ತಿತ್ತಿರಿ ತಿರಿ ಮಜಲು ಜಾನಪದ ನೃತ್ಯ, ದಾಸರ ಪದಗಳು ಹೀಗೆ ಸಾಂಸ್ಕೃತಿಕ ವೈಭವವನ್ನು ಸಾರಿದರು.
ಮಹಿಳೆಯರಿಗೂ ಅವಕಾಶ ಸಿಗಲಿ
ಗ್ರಾಮೀಣ ಮಟ್ಟದಲ್ಲಿ ತೆರೆ, ಮರೆಯಲ್ಲಿ ಹಲವಾರು ಜನಪದ – ಜನಪರ ಕಲಾವಿದರಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೂ ಇಲಾಖೆಯ ಮೂಲಕ ಅವಕಾಶ ಸಿಗಬೇಕು.
– ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ