ಗುರುತುಚೀಟಿ ಅನಧಿಕೃತ ವಿತರಣೆ: ಜನಸೇವಾ ಕೇಂದ್ರಕ್ಕೆ ಬೀಗ
Team Udayavani, Dec 6, 2022, 6:45 AM IST
ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ ಪ್ರಿಯ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಬೀಗ ಜಡಿದಿದೆ.
ಗುರುತಿನ ಚೀಟಿ ಕಳೆದುಹೋಗಿದ್ದ ಪುತ್ತೂರಿನ ನಿವಾಸಿಯೋರ್ವರು ಜನಸೇವಾ ಕೇಂದ್ರಕ್ಕೆ ಬಂದು ಮಾಹಿತಿ ನೀಡಿದ್ದರು. ಅಲ್ಲಿನ ಸಿಬಂದಿ ತಾವು ತಯಾರಿಸಿ ಕೊಡುವುದಾಗಿ ಹೇಳಿ ಗುರುತು ಚೀಟಿ ನೀಡಿದ್ದರು. ಆದರೂ ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ತಾಲೂಕು ಕಚೇರಿಯ ಚುನಾವಣ ಶಾಖೆಗೆ ತೆರಳಿ ತೋರಿಸಿದರು. ಅಧಿಕಾರಿಗಳು ತಪಾಸಣೆ ನಡೆಸಿದಾಗ ಅನುಮತಿ ರಹಿತವಾಗಿ ಗುರುತುಚೀಟಿ ನೀಡಿರುವುದು ಪತ್ತೆಯಾಗಿದೆ.
ಮತದಾರರ ಗುರುತಿನ ಚೀಟಿ ವಿತರಿಸುವ ಅಧಿಕಾರವನ್ನು ಯಾವುದೇ ಬಾಹ್ಯ ಕೇಂದ್ರಗಳಿಗೆ ಕೊಟ್ಟಿಲ್ಲ ಎಂದು ಎಸಿ ತಿಳಿಸಿದ್ದಾರೆ.
ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್ಸೈಟ್ ತೆರೆದುಕೊಂಡ ಕಾರಣ ಲಾಗಿನ್ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾರ್ಡ್ ಮುದ್ರಿಸಿಕೊಟ್ಟಿದ್ದೇವೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕ ವಾಗಿ ಮಾಡಿ ತೋರಿಸಿದ್ದೇವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ ಎಂದು ಕೇಂದ್ರದ ಮಾಲಕಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ