ನೇತ್ರಾವತಿ ಸೇತುವೆಯಲ್ಲಿ ಕಸ ಬಿಸಾಡುವವರ ವಿರುದ್ಧ ಜಾಥಾ
ವೃಕ್ಷ ಸ್ವಯಂ ಸೇವಾ ಸಂಸ್ಥೆಯಿಂದ ಎರಡು ದಿನಗಳಿಂದ ಬೆಳಿಗ್ಗೆ 6 ರಿಂದ 9 ರವರೆಗೆ ನಡೆದ ಜಾಗೃತಿ ಜಾಥಾ
Team Udayavani, Jan 19, 2021, 11:34 AM IST
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಕಸ ಬಿಸಾಕುವವರ ವಿರುದ್ಧ ವೃಕ್ಷ ಎನ್ ಜಿಒ ನ ಬಾಸ್ಕಿಯಾರ್ಬ್ಸ್ ಯುವ ತಂಡದ ವತಿಯಿಂದ ಜಾಗೃತಿ ಜಾಥಾ ಎರಡನೇ ದಿನ ನಡೆಯಿತು.
ಸುಮಾರು 100 ರಷ್ಟು ಕಾರ್ಯಕರ್ತರು ನೇತ್ರಾವತಿ ಸೇತುವೆಯುದ್ದಕ್ಕೂ ಸಾಲಾಗಿ ನಿಂತು ಮೊಬೈಲ್ ಟಾರ್ಚ್ ಹಿಡಿದು ಕಸ ಬಿಸಾಡದಂತೆ ಎಚ್ಚರಿಕೆಯ ಜಾಗೃತಿ ಮೂಡಿಸಿದರು.
ಪರಿಸರ ಮಾಲಿನ್ಯದ ವಿರುದ್ಧ ಸಂಸ್ಥೆ ಪರಿಣಾಮಕಾರಿಯಾಗಿ ಜಾಗೃತಿ ಜಾಥಾಗಳನ್ನು ನಡೆಸುತ್ತಾ ಬಂದಿದೆ. ಇತ್ತೀಚೆಗೆ ಬೆಂಗ್ರೆ ಸಮುದ್ರ ತೀರದಲ್ಲಿ ತ್ಯಾಜ್ಯದ ರಾಶಿ ವಿರುದ್ಧ ಜಾಗೃತಿಗೆ ಮುಂದಾದಾಗ, ಅಲ್ಲಿ ಶೇಖರಣೆಯಾಗುವ ತ್ಯಾಜ್ಯವೆಲ್ಲ ನೇತ್ರಾವತಿ ಸೇತುವೆಯಿಂದ ಎಸೆದದ್ದಾಗಿದೆ ಎಂಬುದು ಗೊತ್ತಾದ ಹಿನ್ನೆಲೆಯಲ್ಲಿ ನೇತ್ರಾವತಿ ಸೇತುವೆಯಲ್ಲೇ ಜಾಥಾ ಕೈಗೊಳ್ಳಲು ತೀರ್ಮಾನಿಸಿ, ಇಂದು ಎರಡನೇ ದಿನ ನಸುಕಿನಿಂದ ಕಾರ್ಯಕ್ರಮ ನಡೆಸಿದೆ.
ಇದನ್ನೂ ಓದಿ:ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್: 13 ಜನರ ದುರ್ಮರಣ
ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ, ಬಿಗ್ ಬ್ಯಾಂಗ್ ಸಕ್ರಿಯ ಸದಸ್ಯ ಮಹಮ್ಮದ್ ಫೌಝಾನ್ ಶೇಖ್, ಹಸಿರುದಳ ನಾಗರಾಜ್ ರಾಘವ್ ಅಂಚನ್, ಎಪಿಡಿ ಫೌಂಡೇಶನ್ ನ ವಾಣಿಶ್ರೀ ಬಿ.ಆರ್ , ಮನಪಾ ಸದಸ್ಯೆ ವೀಣಾ ಉಪಸ್ಥಿತರಿದ್ದರು .
ಇದನ್ನೂ ಓದಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ
ಉಳ್ಳಾಲ ನಗರಸಭೆ ಆಯುಕ್ತರ ಕಾಳಜಿ
ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ ಅವರು ಎನ್ ಜಿಓ ಸದಸ್ಯರಿಗೆ ಕುಳಿತುಕೊಳ್ಳಲು ಕುರ್ಚಿಯ ವ್ಯವಸ್ಥೆಯನ್ನು ಕಲ್ಪಿಸಿದರು. ತಮ್ಮ ವ್ಯಾಪ್ತಿಗೆ ಸೇರಿದ ಭಾಗದಲ್ಲೂ ನೇತ್ರಾವತಿ ಸೇತುವೆಯಿಂದ ಎಸೆಯುವ ಕಸದಿಂದ ತೊಂದರೆಯಾಗುತ್ತಿದೆ. ಆದರೆ ಸೇತುವೆ ಮನಪಾ ವ್ಯಾಪ್ತಿಗೆ ಬರುವುದರಿಂದ ಯಾವುದೇ ಕ್ರಮಕೈಗೊಳ್ಳಲು ಅಸಾಧ್ಯ. ಈ ನಿಟ್ಟಿನಲ್ಲಿ ಸಮಾಜ ಸೇವಾ ಸಂಸ್ಥೆ ಜತೆಗೆ ಅಧಿಕಾರಿಯೂ ಕೈಜೋಡಿಸಿದರು.
ಇದನ್ನೂ ಓದಿ: ಬಾಂಗ್ಲಾದೇಶಕ್ಕೆ ಭಾರತದಿಂದ 20 ಲಕ್ಷ ಕೋವಿಡ್ ಲಸಿಕೆ: ಪಾಕ್ ನಿಂದಲೂ ಮುಂದುವರಿದ ಪ್ರಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು