ಜೀವನ್‌ರಾಜ್‌: ಅಂಧತ್ವ ಮರೆಯಿಸಿದ ಸಾಧನೆ


Team Udayavani, May 23, 2018, 2:29 PM IST

23-may-14.jpg

ಬದಿಯಡ್ಕ: ಎಂಡೋಸಲ್ಫಾನ್‌ ಕೀಟನಾಶಕದಿಂದ ಅಂಧತ್ವಕ್ಕೆ ಗುರಿಯಾಗಿದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಜೀವನ್‌ ರಾಜ್‌ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ್ದಾನೆ.

ಕಾಸರಗೋಡು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿದ ಜೀವನ್‌ರಾಜ್‌ ಎಣ್ಮಕಜೆಯ ಪುಷ್ಪಲತಾ- ಈಶ್ವರ ದಂಪತಿಯ ಪುತ್ರ. ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ಇವನಿಗೆ ಎ ಪ್ಲಸ್‌ ಗ್ರೇಡ್‌ ಲಭಿಸಿದೆ. ಇತರ ವಿಷಯಗಳಲ್ಲಿ ಎರಡು ಬಿ ಪ್ಲಸ್‌, ಒಂದು ಎ, ಒಂದು ಬಿ ಮತ್ತೊಂದು  ಸಿ ಪ್ಲಸ್‌ ಗ್ರೇಡ್‌ ಲಭಿಸಿದೆ. ತನ್ನದೇ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಹರೀಶ್‌ನ ಸಹಾಯದೊಂದಿಗೆ ಜೀವನ್‌ರಾಜ್‌ ಪರೀಕ್ಷೆ ಬರೆದಿದ್ದಾನೆ. ಪಾಠ ಭಾಗಗಳನ್ನು ಧ್ವನಿ ಮುದ್ರಣ ಮಾಡಿ ಕೇಳುವುದು ಜೀವನ್‌ ರಾಜ್‌ನ ಕಲಿಕೆಯ ವಿಧಾನ. ಅಗತ್ಯ ವಾಹನ ಸೌಕರ್ಯಗಳಿಲ್ಲದ ದೂರದ ಎಣ್ಮಕಜೆಯಿಂದ ಬಂದು ಕಾಸರಗೋಡಿನ ಪ್ರೀಮೆಟ್ರಿಕ್‌ ಹಾಸ್ಟೆಲ್‌ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಾನೆ.

ಮಿಮಿಕ್ರಿ ಪಟು
ಈತನಿಗೆ ಎಂಡೋಸಲ್ಫಾನ್‌ ಸಂತ್ರಸ್ತರ ಪಿಂಚಣಿ ಲಭಿಸುತ್ತಿದ್ದರೂ ಆರ್ಥಿಕವಾಗಿ ತೀರಾ ಹಿಂದುಳಿದ ಕುಟುಂಬವಾಗಿದೆ. ತಂದೆ ಈಶ್ವರ ನಾಯ್ಕ ಕೂಲಿ ಕೆಲಸ ಮಾಡುತ್ತಾರೆ. ಹುಟ್ಟಿನಿಂದಲೇ ಕಣ್ಣಿನ ದೃಷ್ಟಿ ಸಾಮರ್ಥ್ಯ ಕಳೆದುಕೊಂಡರೂ ಪಠ್ಯ- ಪಠ್ಯೇತರ ವಿಷಯಗಳಲ್ಲಿ ಮುಂದಿರುವ ಜೀವನ್‌ರಾಜ್‌ಗೆ ಶಬ್ದಲೋಕವೇ ಪ್ರಪಂಚ. ಶಬ್ದಗಳಿಂದಲೇ ಪ್ರಕೃತಿಯನ್ನು ಅರಿತುಕೊಳ್ಳುವ ಜನವಿಭಾಗವೊಂದರ ದನಿಯಾಗಿ ಜೀವನ್‌ರಾಜ್‌ ರಾಜ್ಯಮಟ್ಟದ ಶಾಲಾ ಕಲೋತ್ಸವದ ವೇದಿಕೆಯೇರಿ ಈ ವರ್ಷದ ರಾಜ್ಯ ಕಲೋತ್ಸವದಲ್ಲಿ ಪ್ರೌಢಶಾಲಾ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಎ ಗ್ರೇಡ್‌ ಪಡೆದುಕೊಂಡಿದ್ದಾನೆ. ಇವನ ಸಹೋದರ ದೇವಿಕಿರಣ್‌ಗೂ ಅಂಧತ್ವವಿದೆ.

ಕಂಪ್ಯೂಟರ್‌, ಸ್ಮಾರ್ಟ್‌ ಫೋನ್‌ನ್ನು ಚೆನ್ನಾಗಿ ಉಪಯೋಗಿಸುವ ಜೀವನ್‌ರಾಜ್‌ ಮಿಮಿಕ್ರಿಯ ನವೀನತೆಗಾಗಿ ಯೂ ಟ್ಯೂಬ್‌ ನ ಸಹಾಯವನ್ನು ಪಡೆಯುತ್ತಾನೆ. ಗೂಗಲ್‌ ಟಾಕ್‌ ಬ್ಯಾಕ್‌ ವ್ಯವಸ್ಥೆ ಉಪಯೋಗಿಸಿ ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದಾನೆ. 

ಬದುಕೇ ಸವಾಲು
ಎಂಡೋಸಲ್ಫಾನ್‌ ಸಂತ್ರಸ್ತ ಜೀವನದ ದುರಂತ ಕಥೆಗಳೆಲ್ಲವನ್ನೂ ಸದ್ಯಕ್ಕೆ ಮರೆಯಲು ಪ್ರಯತ್ನಿಸುತ್ತಿದ್ದೇನೆ. ದೊಡ್ಡವನಾದ ಮೇಲೆ ಕಾಲೇಜು ಪ್ರಾಧ್ಯಾಪಕನಾಗುವ ಆಸೆಯಿದೆ. ಕೊನೆಯುಸಿರಿನ ವರೆಗೆ ಇತರರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ನಮ್ಮಂತೆ ಬದುಕೇ ಸವಾಲಾಗಿರುವ ಮಂದಿಯ ಬಾಳಲ್ಲಿ ಬೆಳಕು ಹರಿಸುವ ಪ್ರಯತ್ನ ಮಾಡಬೇಕು. ಐಐಟಿಯಲ್ಲಿ ಎಂಟ್ರೆನ್ಸ್‌ ಪರೀಕ್ಷೆ ಬರೆಯಬೇಕು ಎಂಬ ಕನಸಿದೆ.
 -ಜೀವನ್‌ರಾಜ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.