ಜೋಡುಪಾಲ: ಮನೆ ಮೇಲೆ ಕುಸಿದ ಗುಡ್ಡ ; ಹಾನಿ
Team Udayavani, Jul 22, 2019, 5:05 AM IST
ಜೋಡುಪಾಲ ನಿವಾಸಿ ವೀರೇಂದ್ರ ಅವರ ನಿರ್ಮಾಣ ಹಂತದ ಮನೆ ಮೇಲೆ ಗುಡ್ಡ ಕುಸಿದು ಜಖಂಗೊಂಡಿದೆ.
ಸುಳ್ಯ/ ಅರಂತೋಡು: ಕಳೆದ ಬಾರಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಅಪಾರ ನಷ್ಟ, ಪ್ರಾಣ ಹಾನಿ ಉಂಟಾಗಿದ್ದ ಜೋಡುಪಾಲದಲ್ಲಿ ರವಿವಾರ ನಿರ್ಮಾಣ ಹಂತದಲ್ಲಿರುವ ಮನೆಯೊಂದರ ಮೇಲೆ ಗುಡ್ಡ ಕುಸಿದ ಘಟನೆ ಸಂಭವಿಸಿದೆ.
ಗುಡ್ಡ ಕುಸಿತದ ಪರಿಣಾಮವಾಗಿ ವೀರೇಂದ್ರ ಅವರ ಮನೆ ಜಖಂಗೊಂಡಿದೆ. ಸಾವುನೋವು ಉಂಟಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಳೆ ತೀವ್ರ ಪ್ರಮಾಣದಲ್ಲಿ ಸುರಿಯಲು ಆರಂಭಿಸುವ ಮೊದಲೇ ಗುಡ್ಡ ಕುಸಿದಿರುವುದು ಸ್ಥಳೀಯ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.ಕಳೆದ ಬಾರಿ ಭೂವಿಜ್ಞಾನಿಗಳು ಎಚ್ಚರಿಸಿದ್ದರು!
ಕಳೆದ ಬಾರಿ ಭೂ ಕುಸಿತವಾದಾಗ ಜೋಡುಪಾಲ, ಮೊಣ್ಣಂಗೇರಿ, ಅರೆಕ್ಕಲ್ ಮೊದಲಾದ ಪ್ರದೇಶಗಳಿಗೆ ಭಾರತೀಯ ಭೂ ಸರ್ವೇಕ್ಷಣೆ, ಭೂ ಗರ್ಭ ಶಾಸ್ತ್ರದ ವಿಜ್ಞಾನಿಗಳು ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಕೇಂದ್ರದ ನಿರ್ದೇಶಕರು ಭೇಟಿ ನೀಡಿ ಮತ್ತೆ ಮತ್ತೆ ಭೂ ಕುಸಿತವಾಗುವ ಸಾಧ್ಯತೆಯ ಎಚ್ಚರಿಕೆ ನೀಡಿದ್ದರು.
ಸಂಪಾಜೆ-ಕಡಮಕಲ್ ಮಳೆ
ಕಳೆದ 24 ತಾಸುಗಳಲ್ಲಿ (ಶನಿವಾರ ದಿನಾಂತ್ಯ) ದಕ್ಷಿಣ ಕನ್ನಡ ಗಡಿ ಭಾಗದ ಸಂಪಾಜೆ ಮತ್ತು ಕಡಮಕಲ್ ಶ್ರೇಣಿಯ ತಪ್ಪಲಿನ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗಿದೆ.
ತ್ರಿವೇಣಿ ಸಂಗಮ: ನೀರಿನ ಮಟ್ಟ ಏರಿಕೆ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕೊಡಗು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆ ಯಾಗುತ್ತಿರುವುದರಿಂದ ಭಾಗಮಂಡಲದ ನದಿಪಾತ್ರ ದಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಜಿಲ್ಲೆಯ ಇತರ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಬರೆ ಕುಸಿದ ಘಟನೆಗಳು ನಡೆದಿವೆ. ವಿರಾಜಪೇಟೆ ತಾಲೂಕಿನ ಮಲೆತಿರಿಕೆ ಬೆಟ್ಟದಲ್ಲಿರುವ ಎರಡು ಮನೆಗಳ ತಡೆಗೋಡೆಗಳ ಮೇಲೆ ಬರೆ ಕುಸಿದಿದೆ. ಸ್ಥಳಕ್ಕೆ ಪಟ್ಟಣ ಪಂಚಾಯತ್ ಸದಸ್ಯ ಡಿ.ಪಿ. ರಾಜೇಶ್ ಪದ್ಮನಾಭ ಮತ್ತು ಸಿಬಂದಿ ಭೇಟಿ ಪರಿಶೀಲಿಸಿದ್ದು, ಅಂದಾಜು 3 ಲಕ್ಷ ರೂ.ನಷ್ಟವಾಗಿದೆ ಎಂದು ಮನೆ ಮಾಲಕರು ತಿಳಿಸಿದ್ದಾರೆ.
ಮಡಿಕೇರಿ: ಬಸ್ ನಿಲ್ದಾಣ ಬಳಿ ಬರೆ ಕುಸಿತ
ಕಳೆದ ಮಳೆಗಾಲದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬೃಹತ್ ಬರೆ ಕುಸಿಯುತ್ತಲೇ ಇದ್ದು, ರವಿವಾರೂ ಮಣ್ಣು ಕುಸಿದಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎನ್ನುವ ನಿರೀಕ್ಷೆಯಲ್ಲಿರುವ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ