ಇತಿಹಾಸದ ಪುಟಕ್ಕೆ ಸೇರಿತು ಮಕ್ಕಳ ಮಂಟಪ


Team Udayavani, Jun 9, 2019, 6:10 AM IST

makkala-mantapa

ಪುತ್ತೂರು : ಇಪ್ಪತ್ತನಾಲ್ಕು ವರ್ಷಗಳಿಂದ ಸಾವಿರಾರು ಸಾಹಿತ್ಯ ಸಂಶೋಧನಾತ್ಮಕ ಚಟುವಟಿಕೆ ಗಳ ತಾಣವಾಗಿದ್ದ ಪುತ್ತೂರು ಪರ್ಲಡ್ಕದ ಶಿಕ್ಷಣ ಸಿದ್ಧಾಂತಿ ಡಾ| ಸುಕುಮಾರ ಗೌಡ ಅವರ ಕನಸಿನ ಕೂಸು ಶಿಕ್ಷಣ ಅಧ್ಯಯನ ಕೇಂದ್ರ ಮಕ್ಕಳ ಮಂಟಪ ಇದೀಗ ಇತಿಹಾಸದ ಪುಟ ಸೇರಿದೆ.

ವಿಶೇಷವೆಂದರೆ ಲಂಡನ್‌ ವಿವಿ ಮುದ್ರಣಗೊಳಿಸಿದ ಲರ್ನರ್‌ ಲರ್ನರ್ ಪುಸ್ತಕ ಸಿದ್ಧಗೊಂಡಿದ್ದು ಈ ಮಕ್ಕಳ ಮಂಟಪದಲ್ಲಿಯೇ.

1995ರಲ್ಲಿ ಪರ್ಲಡ್ಕ ಸಮೀಪ ಪ್ರಾರಂಭಗೊಂಡ ಈ ಶಿಕ್ಷಣ ಅಧ್ಯಯನ ಕೇಂದ್ರ ಕಳೆದ ಎಪ್ರಿಲ್ ತಿಂಗಳಿನಿಂದ ತನ್ನ ಚಟುವಟಿಕೆಯನ್ನು ಸ್ಥಗಿತಗೊಳಿಸಿದೆ. ಇಲ್ಲಿ ನಡೆಯುತ್ತಿದ್ದ ಪುಸ್ತಕ ವಿಮರ್ಶೆ, ಸಾಹಿತ್ಯ ಚಟುವಟಿಕೆ, ಪಿಎಚ್‌ಡಿ, ಎಂಫಿಲ್ ಅಧ್ಯಯನ ವಿದ್ಯಾರ್ಥಿಗಳು, ಸದಾ ಲವಲವಿಕೆಯ ತಾಣ ಈಗ ತೆರೆಯ ಮರೆಗೆ ಸರಿದಿದೆ. ಕಡಲತೀರದ ಭಾರ್ಗವ ಡಾ| ಶಿವರಾಮ ಕಾರಂತರು ಉದ್ಘಾಟಿಸಿದ ಈ ಅಧ್ಯಯನ ಕೇಂದ್ರ ಸಾವಿರಾರು ವಿದ್ಯಾರ್ಥಿಗಳ, ಸಾಹಿತಿ ಸಂಶೋಧಕರ ನೆಚ್ಚಿನ ತಾಣವಾಗಿತ್ತು.

ಸಂಶೋಧಕರ ಜ್ಞಾನ ಭಂಡಾರ

ಸಂಶೋಧನ ಅಧ್ಯಯನ ಯೋಗ್ಯವಾದ ಪುಸ್ತಕಗಳ ಭಂಡಾರವೇ ಇಲ್ಲಿದ್ದು, ರಾಜ್ಯದ ಬೆರಳೆಣಿಕೆ ಪುಸ್ತಕ ಭಂಡಾರಗಳ ಪೈಕಿ ಇದೂ ಒಂದೆನಿಸಿದೆ. ಶಿಕ್ಷಣ ಅಧ್ಯಯನ ಕೇಂದ್ರವಾಗಿ ರೂಪುಗೊಂಡಿದ್ದ ಮಕ್ಕಳ ಮಂಟಪ ಇಂಗ್ಲಿಷ್‌ ಭಾಷಾ ಜ್ಞಾನದಲ್ಲಿ ಸಂಶೋಧನೆ ನಡೆಸುವ ಸಂಶೋಧನ ವಿದ್ಯಾರ್ಥಿಗಳಿಗೆ ಜ್ಞಾನ ಭಂಡಾರವಾಗಿತ್ತು. ಲರ್ನರ್‌ ಲರ್ನರ್ ಪುಸ್ತಕ ಇಲ್ಲಿ ಸಿದ್ದಗೊಂಡು, ಅದನ್ನು ಲಂಡನ್‌ ವಿವಿ ಮುದ್ರಿಸಿತು.

ಸಾಹಿತ್ಯ ಸಾಧನೆ

ಕೆನಡಾದಲ್ಲಿ ಭಾಷಾ ವಿಜ್ಞಾನದಲ್ಲಿ ಪಿ.ಎಚ್.ಡಿ. ಮಾಡಿ ಅಧ್ಯಯನ-ಅಧ್ಯಾಪನ ನಡೆಸಿದ ಡಾ| ಸುಕುಮಾರ ಗೌಡ ಅವರು ಮೂಲತಃ ಸುಳ್ಯ ತಾಲೂಕಿನವರಾದರೂ ಪುತ್ತೂರಿನಲ್ಲಿಯೇ ನೆಲೆಸಿದ್ದರು. ಇವರ ಪ್ರಾಬ್ಲೆಮ್ಸ್‌ ಆ್ಯಂಡ್‌ ಪ್ರೋಸ್ಪೆಕ್ಟ್ ಆಫ್ ಅವರ್‌ ಎಜುಕೇಶನ್‌ ಎನ್ನುವ ಪುಸ್ತಕವನ್ನು ಡಾ| ಶಿವರಾಮ ಕಾರಂತ ಅವರು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಪ್ರಖ್ಯಾತ ಶಿಕ್ಷಣ ತಜ್ಞ ಡಾ| ಎ.ಎಸ್‌. ನೀಲ್ ಅವರ ಸಮ್ಮರ್‌ ಹೀಲ್ ಅನ್ನು ಡಾ| ಸುಕುಮಾರ ಗೌಡ ಅವರು ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ಈ ಎಲ್ಲ ಕಾರ್ಯಗಳು ನಡೆದದ್ದು ಮಕ್ಕಳ ಮಂಟಪದಲ್ಲಿ. ಇಂತಹ ಮಹಾನ್‌ ಆಂಗ್ಲಭಾಷಾ ತಜ್ಞ ಡಾ| ಸುಕುಮಾರ ಗೌಡ ಅವರೇ ಸ್ಥಾಪಿಸಿದ ಮಕ್ಕಳ ಮಂಟಪ ಇದೀಗ ಅವರ ಕಣ್ಣಮುಂದೆಯೇ ಅವಸಾನದತ್ತ ಸಾಗಿದೆ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.