
ಮಂಗಳೂರು: ತಪ್ಪು ವ್ಯಕ್ತಿಯ ನ್ಯಾಯಾಂಗ ಬಂಧನ ಪೊಲೀಸ್ ಅಧಿಕಾರಿಗಳಿಗೆ 5 ಲ.ರೂ. ದಂಡ
Team Udayavani, Dec 2, 2022, 8:00 AM IST

ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಬೇರೆ ವ್ಯಕ್ತಿಯನ್ನು ಬಂಧಿಸಿ ಸುಮಾರು ಒಂದು ವರ್ಷ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳಿಬ್ಬರು ತಮ್ಮ ಜೇಬಿನಿಂದಲೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಇಲ್ಲಿನ ಎರಡನೇ ಹೆಚ್ಚುವರಿ ಎಫ್ಟಿಎಸ್ಸಿ ಪೋಕ್ಸೋ ನ್ಯಾಯಾಲಯ ಆದೇಶವಿತ್ತಿದೆ.
ಮಂಗಳೂರು ಮಹಿಳಾ ಪೊಲೀಸ್ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್ ಸಿಕ್ವೇರ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕೊÕ ನವೀನ್ ಎನ್ನುವ ವ್ಯಕ್ತಿ ಆರೋಪಿಯಾಗಿದ್ದನು. ಬಾಲಕಿ ನೀಡಿದ ಹೇಳಿಕೆಯನ್ವಯ ಎಸ್.ಐ ರೋಸಮ್ಮ ಪಿ.ಪಿ ಅವರು ನವೀನ್ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕಿ ರೇವತಿಯವರಿಗೆ ಹಸ್ತಾಂತರಿಸಿದ್ದರು. ತನಿಖಾ ಸಮಯ ನವೀನ್ ಸಿಕ್ವೇರ ಎಂಬವರನ್ನು ಬಂಧಿಸಲಾಗಿತ್ತು. ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್ ಸಿಕ್ವೇರನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿ ಪರ ವಕೀಲರಾದ ರಾಜೇಶ್ಕುಮಾರ್ ಅಮಾrಡಿ ಮತ್ತು ಗಿರೀಶ್ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲ.ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?