ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಜು. 29 ಕೊನೆಯ ದಿನ
Team Udayavani, Jun 23, 2018, 3:30 AM IST
ಮಂಗಳೂರು: ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಪಡೆಯುವಂತಾಗಲು ನಗರದ ಕೆಎಂಸಿ ಆಸ್ಪತ್ರೆ ‘ಮಣಿಪಾಲ ಆರೋಗ್ಯ ಕಾರ್ಡ್’ ಪಡೆದುಕೊಳ್ಳುವ ಅವಕಾಶ ಕಲ್ಪಿಸುತ್ತಿದ್ದು, ನೋಂದಣಿಗೆ ಜು.29 ಕೊನೆಯ ದಿನವಾಗಿರುತ್ತದೆ. ಜೂ.11ರಿಂದಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಖಾಂತರವೂ ನೋಂದಣಿ ಮಾಡಿಕೊಳ್ಳಬಹುದು. ವಾರ್ಷಿಕ 250 ರೂ. ನೀಡಿ 2019 ಜು. 31ವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕಾರ್ಡ್ ಪಡೆದವರು ಅತ್ತಾವರ ಹಾಗೂ ಬಲ್ಮಠದ ಕೆಎಂಸಿ ಆಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಟಿಎಂಎ ಪೈ ಆಸ್ಪತ್ರೆ ಉಡುಪಿ ಹಾಗೂ ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆದುಕೊಳ್ಳಬಹುದು. ಮಂಗಳೂರು ಹಾಗೂ ಮಣಿಪಾಲದಲ್ಲಿರುವ ಡೆಂಟಲ್ ಆಸ್ಪತ್ರೆಗಳಲ್ಲೂ ಸೇವೆ ಲಭ್ಯ.
ಸೇವೆಗಳು ಯಾವುವು?
ಕಾರ್ಡ್ನ ಅವಧಿ ಒಂದು ವರ್ಷ ಇದ್ದು, ಈ ಅವಧಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದರೆ ತೆರಬೇಕಾದ ಶುಲ್ಕದಲ್ಲಿ 50 ಶೇ. ಕಡಿತವಿದೆ ಲ್ಯಾಬ್, ಸ್ಕ್ಯಾನಿಂಗ್ ಇತ್ಯಾದಿಗಳ ಪರೀಕ್ಷಾ ಶುಲ್ಕದಲ್ಲಿ ಶೇ. 20 ಕಡಿತ ಇರಲಿದೆ. ಒಳರೋಗಿಯಾಗಿ ಸಾಮಾನ್ಯ ವಾರ್ಡ್ನಲ್ಲಿ ದಾಖಲಾಗಿ ಶಸ್ತ್ರಕ್ರಿಯೆ ಅಥವಾ ಸಹಜ ಹೆರಿಗೆಯಾದಲ್ಲಿ ಶುಲ್ಕದಲ್ಲಿ ಶೇ. 50 ಕಡಿತ ಇರಲಿದೆ. ಒಳರೋಗಿಯಾಗಿ ಸೆಮಿಪ್ರೈವೇಟ್ ವಾರ್ಡ್ ಅಥವಾ ಸ್ಪೆಷಲ್ ವಾರ್ಡ್ನಲ್ಲಿ ದಾಖಲಾಗಿದ್ದರೆ ಸೇವಾ ಶುಲ್ಕದಲ್ಲಿ ಶೇ. 20 ರಷ್ಟು ಕಡಿತ ಹಾಗೂ ಶಸ್ತ್ರಕ್ರಿಯೆಗೆ ಶೇ.10ರಷ್ಟು ಕಡಿತ ಇರಲಿದೆ ಹೆಚ್ಚಿನ ಮಾಹಿತಿಗೆ 0824-2430555 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್