K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ


Team Udayavani, May 10, 2024, 12:31 AM IST

1-wqeeqw

ಬೆಳ್ತಂಗಡಿ: ತನ್ನನ್ನು ನಂಬಿ ಬಂದವರಿಗೆ ನ್ಯಾಯಕೊಡಿಸಿಯೇ ಸಿದ್ಧ ಎಂಬ ಜಾಯಮಾನದಿಂದಲೇ ಸಾವಿರಾರು ಅಭಿಮಾನಿ ವರ್ಗವನ್ನು ಸಂಪಾದಿಸಿದ, ಬೆಳ್ತಂಗಡಿ ಕಂಡ ಅಪ್ರತಿಮ ರಾಜಕಾರಣಿ, ಹೃದಯ ಶ್ರೀಮಂತಿಕೆಯ ಕೆ. ವಸಂತ ಬಂಗೇರ ಕಾಲದಲ್ಲಿ ಲೀನರಾಗಿದ್ದಾರೆ. ಮೇ 9ರಂದು ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯ ಮಣ್ಣಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.

ಮೇ 9ರಂದು ಮುಂಜಾನೆ 3.30ಕ್ಕೆ ಪಾರ್ಥಿವ ಶರೀರವು ಅವರ ಬೆಳ್ತಂಗಡಿ ಹಳೆಕೋಟೆ ಮನೆಗೆ ತರಲಾಯಿತು. ಸಕಲ ವಿಧಿ ನೆರವೇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಬೆಳಗ್ಗೆ 8.45ಕ್ಕೆ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಸಾರ್ವಜನಿಕ ದರ್ಶನಕ್ಕಾಗಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣಕ್ಕೆ ತರಲಾಯಿತು. ಅಲ್ಲಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ಸರಕಾರಿ ಗೌರವ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಎಸ್‌ಪಿ ಸಿ.ಬಿ. ರಿಷ್ಯಂತ್‌, ಪುತ್ತೂರು ಎಸಿ ಜುಬಿನ್‌ ಮೊಹಪಾತ್ರ, ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌, ಶಾಸಕ ಹರೀಶ್‌ ಪೂಂಜ, ವಿ.ಪ.ಸದಸ್ಯರಾದ ಕೆ. ಹರೀಶ್‌ ಕುಮಾರ್‌, ಕೆ. ಪ್ರತಾಪಸಿಂಹ ನಾಯಕ್‌, ವೃತ್ತನಿರೀಕ್ಷಕ ಸುಬ್ಟಾಪುರ್‌ ಮಠ ಸಮ್ಮುಖದಲ್ಲಿ ಮಧ್ಯಾಹ್ನ 12.45ರ ವೇಳೆ 3 ಸುತ್ತು ಗುಂಡು ಹಾರಿಸುವ ಮೂಲಕ ಸರಕಾರಿ ಗೌರವ ಸಲ್ಲಿಸಲಾಯಿತು.

ಕಿರಿಯ ಪುತ್ರಿಯಿಂದ ಅಗ್ನಿಸ್ಪರ್ಶ
ಮಧ್ಯಾಹ್ನ 1.30ರ ವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಪಾರ್ಥಿವ ಶರೀರವನ್ನು ಗುರುವಾಯನಕೆರೆ ಮಾರ್ಗವಾಗಿ ಕುವೆಟ್ಟು ಗ್ರಾಮದ ಮದ್ದಡ್ಕ ಕೇದೆ ಹೊಸಮನೆಗೆ ತರಲಾಯಿತು. ಬಿಲ್ಲವ ಸಮುದಾಯದ ಪದ್ಧತಿಯಂತೆ ಸಂಜೆ 3.45ರಿಂದ 4.15ರ ಅವಧಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಕಿರಿಯ ಪುತ್ರಿ ಬಿನುತಾ ಅಗ್ನಿ ಸ್ಪರ್ಶಿಸಿದರು.

ಅಂಗಡಿ ಮುಂಗಟ್ಟು ಬಂದ್‌
ಬೆಳ್ತಂಗಡಿ ಹಾಗೂ ಮದ್ದಡ್ಕ ಪೇಟೆಯ ವರ್ತಕರು ಅಂಗಡಿಗಳನ್ನು ಮುಚ್ಚಿ ಗೌರವ ಸಲ್ಲಿಸಿದರು. ಪಕ್ಷಾತೀ ತವಾಗಿ ರಾಜಕೀಯ ನಾಯಕರು ಸೇರಿದ್ದರು.

ಕೋಟ ಶ್ರೀನಿವಾಸ ಪೂಜಾರಿ, ಪದ್ಮರಾಜ್‌ ಆರ್‌. ಪೂಜಾರಿ, ಕೆ. ಗಂಗಾಧರ ಗೌಡ, ಅಭಯಚಂದ್ರ ಜೈನ್‌, ರಮಾನಾಥ ರೈ, ವಿನಯ ಕುಮಾರ್‌ ಸೊರಕೆ, ಕೃಷ್ಣ ಜೆ. ಪಾಲೆಮಾರ್‌, ಜೆ.ಆರ್‌.ಲೋಬೋ, ಉಮನಾಥ್‌ ಕೋಟ್ಯಾನ್‌, ಶಕುಂತಳಾ ಶೆಟ್ಟಿ, ಸಂಜೀವ ಮಠಂದೂರು, ರುಕ್ಮಯ ಪೂಜಾರಿ, ಬಂಗೇರರ ಸಹೋದರ ಕೆ. ಪ್ರಭಾಕರ ಬಂಗೇರ, ಐವನ್‌ ಡಿ’ಸೋಜಾ, ಸೋಲೂರು ಮಠದ ಪೀಠಾಧೀಶ ಬಲೊÂಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿ, ಕಲ್ಲಡ್ಕ ಪ್ರಭಾಕರ್‌ ಭಟ್‌, ಬೆಳ್ತಂಗಡಿ ಬಿಷಪ್‌ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್‌. ಸತೀಶ್ಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸಹಿತ ವಿವಿಧ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ರಕ್ಷಿತ್‌ ಶಿವರಾಂ, ರಂಜನ್‌ ಜಿ. ಗೌಡ, ಅಭಿನಂದನ್‌ ಹರೀಶ್‌ ಕುಮಾರ್‌, ಸಿಯೋನ್‌ ಆಶ್ರಮದ ಆಡಳಿತಾಧಿಕಾರಿ ಯು.ಸಿ. ಪೌಲೋಸ್‌, ಕೆ. ವಸಂತ ಸಾಲಿಯಾನ್‌, ಕಸಾಪ ಅಧ್ಯಕ್ಷ ಯದುಪತಿ ಗೌಡ, ಸೋಮನಾಥ್‌ ನಾಯಕ್‌, ಜಿ.ಪಂ. ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ಮಹೇಶ್‌ ಶೆಟ್ಟಿ ತಿಮರೊಡಿ, ಸತ್ಯಜಿತ್‌ ಸುರತ್ಕಲ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.