ಕಬಕ-ಪುತ್ತೂರು ರೈಲ್ವೇ ನಿಲ್ದಾಣ 2ನೇ ಪ್ಲಾಟ್‌ಫಾರಂ ಕಾಮಗಾರಿ

1.75 ಕೋಟಿ ರೂ. ಅನುದಾನ ಮಂಜೂರು

Team Udayavani, May 17, 2019, 6:00 AM IST

22

ಪುತ್ತೂರು: ಕಬಕ ಪುತ್ತೂರು ಆದರ್ಶ ರೈಲ್ವೇ ನಿಲ್ದಾಣ ಅಭಿವೃದ್ಧಿ ಕಾರ್ಯ ಗಳ ಮುಂದುವರೆದ ಭಾಗವಾಗಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಹೋರಾಟಗಾರರು ಹಾಗೂ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಪ್ರಯತ್ನದ ಫಲವಾಗಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿ ಕಾಮಗಾರಿ ಮಂಜೂರುಗೊಂಡು ನಡೆಯುತ್ತಿದೆ. ಆದರ್ಶ ರೈಲ್ವೇ ನಿಲ್ದಾಣದಲ್ಲಿ ಎರಡು ಫ್ಲಾಟ್‌ ಫಾರಂ ಇರಬೇಕೆಂಬ ನಿಯಮವೂ ಇದೆ. ಈ ಕಾಮಗಾರಿ ನಡೆದರೆ ಎರಡು ರೈಲು ಬಂಡಿಗಳು ಏಕಕಾಲದಲ್ಲಿ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶವಾಗಲಿದೆ.

ಕೇಂದ್ರ ಸರಕಾರದಿಂದ ಈ ಕಾಮಗಾರಿಗೆ 1.75 ಕೋಟಿ ರೂ. ಅನುದಾನ ಮಂಜೂರಾಗಿದೆ. ಆದರ್ಶ ರೈಲ್ವೇ ನಿಲ್ದಾಣವಾಗಿ ಅಭಿವೃದ್ಧಿಗೊಂಡಿರುವ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ 2ನೇ ಪ್ಲಾಟ್‌ಫಾರಂ ಅಭಿವೃದ್ಧಿಪಡಿಸುವಂತೆ ಪುತ್ತೂರು ರೈಲ್ವೇ ಯಾತ್ರಿಕರ ಸಂಘ, ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಬಳಕೆದಾರರ ಸಂಘಗಳು ಸೇರಿದಂತೆ ರೈಲ್ವೇ ಹೋರಾಟಗಾರರು ಒತ್ತಾಯ ಮಾಡುತ್ತಲೇ ಬಂದಿದ್ದರು. ಸಂಸದ ನಳಿನ್‌ ಕುಮಾರ್‌ ಕಟೀಲು ಕೇಂದ್ರ ರೈಲ್ವೇ ಸಚಿವರ ಮೇಲೆ ಒತ್ತಡ ತಂದು ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

700 ಮೀ. ಉದ್ದ
ಒಂದನೇ ಪ್ಲಾಟ್‌ಫಾರಂಗೆ ಸಮಾನಾಂತರವಾಗಿ 700 ಮೀ. ಉದ್ದಕ್ಕೆ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿಗೊಳ್ಳುತ್ತಿದೆ. ಕಾಮಗಾರಿಗೆ ಲಾರಿಗಳಲ್ಲಿ ಮಣ್ಣನ್ನು ತಂದು ಹಾಕಲಾಗುತ್ತಿದೆ. ಪ್ಲಾಟ್‌ಫಾರಂನಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ ಸಹಿತ ಕಾಂಕ್ರೀಟ್‌ ಮತ್ತು ಇಂಟರ್‌ಲಾಕ್‌ಗಳನ್ನು ಹಾಕಿ ಅಭಿವೃದ್ಧಿ ಪಡಿಸಲಾಗುತ್ತದೆ. ಒಂದನೇ ಪ್ಲಾಟ್‌ಫಾರಂನಷ್ಟೇ ಎತ್ತರದಲ್ಲಿ ಎರಡನೇ ಪ್ಲಾಟ್‌ಫಾರಂ ಅಭಿವೃದ್ಧಿಯಾಗುತ್ತಿದೆ.

ವರ್ಷಾಂತ್ಯಕ್ಕೆ ಪೂರ್ಣ
ಆದರ್ಶ ರೈಲ್ವೇ ನಿಲ್ದಾಣ ಮುಂದುವರೆದ ಭಾಗವಾಗಿ ಎರಡನೇ ಪ್ಲಾಟ್‌ ಫಾರಂ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಕಾಮಗಾರಿ ಮುಗಿಸಲು 6 ತಿಂಗಳ ಅವಧಿ ನಿಗದಿಪಡಿಸಲಾಗಿದೆ. ಮಳೆಗಾಲದಲ್ಲಿ ಕೆಲಸ ನಡೆಸಲು ಸಾಧ್ಯವಾಗದ್ದರಿಂದ ಮಳೆಗಾಲ ಮುಗಿದ ಬಳಿಕ ಕೆಲಸ ನಡೆಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಕೆಲಸ ಪೂರ್ಣವಾಗುತ್ತದೆ ಎಂದು ರೈಲ್ವೇ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯ
ಕೇಂದ್ರ ಸರಕಾರದಿಂದ ಕಬಕ ಪುತ್ತೂರು ರೈಲ್ವೇ ನಿಲ್ದಾಣವನ್ನು ಆದರ್ಶ ರೈಲ್ವೇ ನಿಲ್ದಾಣವಾಗಿ ಪರಿಗಣಿಸಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಈಗ ಎರಡನೇ ಪ್ಲಾಟ್‌ ಫಾರಂ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ಶೀಘ್ರ ಮುಕ್ತಾಯಗೊಳ್ಳಲಿದೆ. ಈ ನಿಟ್ಟಿನಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಪ್ರಯತ್ನ ಬಹಳಷ್ಟಿದೆ.
– ಸಂಜೀವ ಮಠಂದೂರು, ಶಾಸಕರು, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.