ಹೊಸ್ಮಠ ಹಳೇ ಸೇತುವೆ ಬದಲು ಕಟ್ಟಿಸಿದ ಹೊಸ ಸೇತುವೆಗೂ ಮುಳುಗಡೆ ಭೀತಿ!
Team Udayavani, Aug 9, 2018, 12:32 PM IST
ಕಡಬ: ಜನರು ಹಾಗೂ ವಾಹನಗಳ ಸುರಕ್ಷಿತ ಸಂಚಾರದ ಹಿನ್ನೆಲೆಯಲ್ಲಿ ಕಡಬ ಸಮೀಪದ ಹೊಸ್ಮಠದ ಹಳೆ ಸೇತುವೆ ಭಾರೀ ಪ್ರವಾಹದಿಂದ ಮುಳುಗಡೆಯಾಗುತ್ತದೆ ಎಂದು ಹೊಸ ಸೇತುವೆ ನಿರ್ಮಿಸಲಾಗುತ್ತಿದೆ. ಆದರೆ ವಿಪರ್ಯಾಸ ಎಂಬಂತೆ ಇದೀಗ ಹೊಸ ಸೇತುವೆ ಕೂಡಾ ಮುಳುಗಡೆ ಭೀತಿ ಎದುರಿಸುತ್ತಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುಂಡ್ಯ ಹೊಳೆ ಉಕ್ಕಿ ಹರಿಯುತ್ತಿದ್ದು, ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ಸಂಪರ್ಕ ಕಲ್ಪಿಸುವ ಹೊಸ್ಮಠ ಹಳೆ ಸೇತುವೆ ಎರಡು ದಿನಗಳ ಹಿಂದೆಯೇ ಮುಳುಗಡೆಯಾಗಿದ್ದು ಈಗ ಹೊಸ ಸೇತುವೆಯೂ ಮುಳುಗಡೆ ಭೀತಿಯಲ್ಲಿದೆ.
ಕಳೆದ ನಾಲ್ಕು ವರ್ಷಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿದ್ದರೂ ಇನ್ನು ಮುಗಿದಿಲ್ಲ. ಸೇತುವೆಯ ಎತ್ತರದ ಬಗ್ಗೆ ಪ್ರಾರಂಭದಲ್ಲಿ ಸ್ಥಳೀಯರು ಆಕ್ಷೇಪ ವ್ಯಕ್ತ ಪಡಿಸಿದ್ದರೂ ಸೇತುವೆಯ ಕಾಮಗಾರಿ ನಡೆಸುತ್ತಿರುವ ರಾಜ್ಯ ರಸ್ತೆ ಅಭಿವೃದ್ದಿ ನಿಗಮ ಕೆಲಸ ಆರಂಭಿಸಿತ್ತು. ಈ ಬಗೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ನಿಗಮಕ್ಕೆ ಪತ್ರ ಬರೆದಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ.
ಹಳೇ ಸೇತುವೆ ಮುಳುಗಡೆಯಾಗುತ್ತದೆ ಎಂದು ಇದೀಗ ಹೊಸದಾಗಿ ನಿರ್ಮಿಸುತ್ತಿರುವ ಸೇತುವೆ ಕೂಡಾ ಭಾರೀ ಮಳೆ ಹಾಗೂ ಪ್ರವಾಹದಿಂದ ಮುಳುಗಿದರೆ ಸಂಪರ್ಕ ಮತ್ತಷ್ಟು ಕಷ್ಟವಾಗುತ್ತದೆ. ಈ ಹೊಸ ಸೇತುವೆ ನಿರ್ಮಿಸುವಾಗ ಇಂಜಿನಿಯರ್ ಆಗಲಿ ಅಥವಾ ತಜ್ಞರಾಗಲಿ ಈ ಬಗ್ಗೆ ಯಾಕೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ