ಕಬಕ: ಶುದ್ಧ ನೀರು ಘಟಕಕ್ಕೆಉದ್ಘಾಟನೆ ಭಾಗ್ಯ ಕಲ್ಪಿಸಿ


Team Udayavani, Jan 26, 2018, 4:24 PM IST

26Jan-18.jpg

ಕಬಕ : ಇಲ್ಲಿನ ಜಂಕ್ಷನ್‌ ಶಾಲಾ ರಸ್ತೆಯ ಪಕ್ಕ ವರ್ಷಗಳ ಹಿಂದೆ ನಿರ್ಮಾಣಗೊಂಡ ಸಾರ್ವಜನಿಕ ಶುದ್ಧ ನೀರಿನ ಘಟಕ ಉದ್ಘಾಟನೆಗೊಳ್ಳದೆ ಹಾಳಾಗುತಿದೆ.

ಗುತ್ತಿಗೆದಾರರು ಕಾಮಗಾರಿ ಮುಗಿಸಿ ಬೀಗ ಜಡಿದು ಹೋಗಿದ್ದಾರೆ. ಆಮೇಲೆ ಇದರತ್ತ ಯಾರೂ ಸುಳಿದಂತಿಲ್ಲ. ಕಾಮಗಾರಿ ಪೂರ್ಣಗೊಂಡಿದ್ದರೂ ಅದನ್ನು ಉದ್ಘಾಟಿಸಿ, ಗ್ರಾಮಸ್ಥರ ಸೇವೆಗೆ ಒದಗಿಸಬೇಕಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸುಮ್ಮನಿದ್ದಾರೆ. ಇದಕ್ಕೇನು ಕಾರಣ ಎಂಬ ಜಿಜ್ಞಾಸೆ ಗ್ರಾಮಸ್ಥರಲ್ಲಿ ಮೂಡಿದೆ.

ಸಾರ್ವಜನಿಕ ಹಣ ಪೋಲು
ಇದು ಒಂದು ಘಟಕದ ಕಥೆಯಲ್ಲ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ನಿರ್ಮಿಸಿದ ಶುದ್ಧ ನೀರು ಘಟಕಗಳ ಪರಿಸ್ಥಿತಿಯೂ ಇದೇ ಆಗಿದೆ. ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುರ ಜಂಕ್ಷನ್‌ ಸೇರಿ ಎರಡು ಘಟಕ ನಿರ್ಮಾಣ ಮಾಡಲಾಗಿದೆ. ಹತ್ತಿರದ ಇಡ್ಕಿದು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಿತ್ತೂರು ಶಾಲೆ ಹತ್ತಿರ, ಸೂರ್ಯ, ಉರಿಮಜಲಿನಲ್ಲೂ ಘಟಕಗಳನ್ನು ಸ್ಥಾಪಿಸಲಾಗಿದೆ. ಎಲ್ಲಿಯೂ ಇದರ ಉಪಯೋಗ ಜನರಿಗೆ ಸಿಕ್ಕಿಲ್ಲ. ಒಂದು ಘಟಕಕ್ಕೆ ಸುಮಾರು 5 ಲಕ್ಷ ರೂ.ಗಳಿಗೂ ಹೆಚ್ಚು ವೆಚ್ಚ ತಗಲುತ್ತದೆ. ಸಾರ್ವಜನಿಕ ಹಣ ಜಿಲ್ಲೆ ಹಾಗೂ ರಾಜ್ಯಾದ್ಯಂತ ಹೇಗೆ ಪೋಲಾಗುತ್ತದೆ ಎಂಬುದಕ್ಕೆ ಇದೇ ನಿದರ್ಶನ. ಗ್ರಾ.ಪಂ. ಗಳಲ್ಲಿ ವಿಚಾರಿಸಿದರೂ ಈ ಘಟಕದ ಬಗ್ಗೆ ಮಾಹಿತಿ ಇಲ್ಲ. ನಿರ್ಮಿಸಿ ಹೋಗಿದ್ದಾರೆ. ನೀರಿನ ಸಂಪರ್ಕ ನೀಡಲಾಗಿದೆ. ಬೇರಾವ ಮಾಹಿತಿಯೂ ನಮಗಿಲ್ಲ ಎನ್ನುತ್ತಾರೆ.

1 ರೂ.ಗೆ 10 ಲೀ ನೀರು
ಒಂದು ರೂ. ನಾಣ್ಯ ಹಾಕಿದರೆ 10 ಲೀ. ಶುದ್ಧ ನೀರು ಕೊಡುತ್ತವೆ. ದಿನದ 24 ಗಂಟೆಯೂ ಸೇವೆ ನೀಡುತ್ತವೆ. ಗ್ರಾಮೀಣ ಜನರಿಗೆ ಕಡಿಮೆ ದರದಲ್ಲಿ ಶುದ್ಧ ನೀರು ಒದಗಿಸುವ ಉದ್ದೇಶ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಉದಾಸೀನದಿಂದ ಈಡೇರಿಲ್ಲ. ಗುತ್ತಿಗೆದಾರರು ತಮಗೆ ತೋಚಿದ ರೀತಿಯಲ್ಲಿ ಕೆಲಸ ಮುಗಿಸಿ ಹೋಗಿದ್ದಾರೆ. ಆದರೆ, ಇದರ ನಿರ್ವಹಣೆಯ ಜವಾಬ್ದಾರಿ ಇನ್ನೂ ಸ್ಥಳೀಯಾಡಳಿತಗಳಿಗೆ ಬಂದಿಲ್ಲ. ಕಬಕ ಜಂಕ್ಷನ್‌ ಘಟಕದ ನೀರಿನ ಟ್ಯಾಂಕಿಗೂ ಹಾನಿಯಾಗಿದೆ. ಇಡ್ಕಿದು ಸೂರ್ಯ ಘಟಕದಲ್ಲಿ ಅಶುದ್ಧ ನೀರು ಬರುತ್ತಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ. ಈ ಕುರಿತು ಪರಿಶೀಲಿಸಿ, ಯೋಜನೆಯ ಫ‌ಲ ಗ್ರಾಮೀಣ ಜನರಿಗೆ ಸಿಗುವಂತೆ ಮಾಡಬೇಕಿದೆ.

ಮಾಹಿತಿ ಇಲ್ಲ
ನಮ್ಮ ಗ್ರಾಮದಲ್ಲಿ ಮೂರು ಕಡೆ ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಇದರ ನಿರ್ವಹಣೆ ಯಾರು ಮಾಡುತ್ತಾರೆ ಎಂಬ ಮಾಹಿತಿ ಇಲ್ಲ. ಉದ್ಘಾಟನೆಯೂ ಆಗಿಲ್ಲ. ಅದರ ಕಾಯಿನ್‌ ಸಂಗ್ರಹಿಸುವ ಬಗ್ಗೆಯೂ ಗೊತ್ತಿಲ್ಲ. 
ಗೋಕುಲ್‌ದಾಸ್‌ ಭಕ್ತ, ಇಡ್ಕಿದು
   ಗ್ರಾ.ಪಂ. ಪಿಡಿಒ

ಹಲವು ತೊಂದರೆ
ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಹಲವು ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಉದ್ಘಾಟನೆ ಮಾಡಿಲ್ಲ. ಅದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ. ಅದು ಜಿಲ್ಲೆಯಾದ್ಯಂತ ತೆರಳಿ ಘಟಕಗಳ ಪರಿಶೀಲನೆ ನಡೆಸಲಿದೆ. ಶೀಘ್ರವಾಗಿ ಜನರಿಗೆ ಇದರ ಪ್ರಯೋಜನ ಸಿಗುವಂತೆ ಮಾಡಲಾಗುವುದು.
ಶಯನಾ ಜಯಾನಂದ,
   ಜಿ.ಪಂ. ಸದಸ್ಯೆ

ಉಮ್ಮರ್‌ ಜಿ. ಕಬಕ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.