Kadaba: 2 ಲಕ್ಷ ರೂ. ಮೌಲ್ಯದ ಚಿನ್ನ, 3 ಲಕ್ಷ ರೂ. ನಗದು ಕಳವು


Team Udayavani, Jan 6, 2024, 12:53 AM IST

Kadaba: 2 ಲಕ್ಷ ರೂ. ಮೌಲ್ಯದ ಚಿನ್ನ, 3 ಲಕ್ಷ ರೂ. ನಗದು ಕಳವು

ಕಡಬ: ಕೊಯಿಲ ಗ್ರಾಮದ ಕಲಾಯಿ ನಿವಾಸಿ ಯಾಕುಬ್‌ ಅವರ ಮನೆಯಿಂದ 2 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 3 ಲಕ್ಷ ನಗದು ಕಳವುಗೊಂಡಿರುವ ಘಟನೆ ಜ. 4ರಂದು ರಾತ್ರಿ ನಡೆದಿದೆ.

ಯಾಕುಬ್‌ ಮತ್ತು ಮನೆಯವರು ಜ. 4ರಂದು ರಾತ್ರಿ 7 ಗಂಟೆಗೆ ಮನೆಗೆ ಬೀಗ ಹಾಕಿ ಆತೂರು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಿದ್ದು ಈ ಸಂದರ್ಭದಲ್ಲಿ ಕಳ್ಳತನ ನಡೆದಿದೆ.

ಮನೆಯ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಯಾಕುಬ್‌ ಅವರು ಮಲಗುವ ಕೋಣೆಯಲ್ಲಿನ ಗೋದ್ರೆಜ್‌ನಲ್ಲಿದ್ದ 3 ಲಕ್ಷ ನಗದು ಹಾಗೂ ಇನ್ನೊಂದು ಕೋಣೆಯ ಗೋದ್ರೆಜ್‌ನಲ್ಲಿದ್ದ 30 ಗ್ರಾಮ್‌ ತೂಕದ 6 ಚಿನ್ನದ ಉಂಗುರ ಹಾಗೂ 10 ಗ್ರಾಮ್‌ ತೂಕದ ಕಿವಿಯ ಬೆಂಡೋಲೆ ಮತ್ತು ಜುಮುಕಿ ಕಳವು ಮಾಡಿದ್ದಾರೆ. ಕಳವುಗೈದ ಚಿನ್ನಾಭರಣಗಳ ಮೌಲ್ಯ 2 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.

ಯಾಕುಬ್‌ ಅವರ ಹಿರಿಯ ಮಗ ಮಹಮ್ಮದ್‌ ಇಕ್ಬಾಲ್‌ ಅವರು ಬೆಂಗಳೂರಿನಲ್ಲಿ ಬೇಕರಿ ಉದ್ಯಮ ಮಾಡಿಕೊಂಡಿದ್ದು ಸಂಸಾರ ಸಮೇತ ಬೆಂಗಳೂರಿನಲ್ಲೇ ವಾಸವಿದ್ದಾರೆ. ಅವರು ಡಿ. 30ರಂದು ಊರಿಗೆ ಬಂದವರು ಬೇಕರಿಯಲ್ಲಿ ಸಂಪಾದನೆ ಮಾಡಿದ್ದ 3 ಲಕ್ಷ ರೂಪಾಯಿಯನ್ನು ತಂದೆಗೆ ಕೊಟ್ಟಿದ್ದು ಅವರು ಅದನ್ನು ಗೋದ್ರೆಜ್‌ನಲ್ಲಿಟ್ಟಿದ್ದರು. ಇದೀಗ ಆ 3 ಲಕ್ಷ ರೂ. ಕಳ್ಳರ ಪಾಲಾಗಿದೆ. ಗೋದ್ರೆಜ್‌ನಲ್ಲಿದ್ದ ಅಂದಾಜು 4 ಪವನ್‌ನ ಸರವೊಂದನ್ನು ಕಳ್ಳರು ಅಲ್ಲೇ ಬಿಟ್ಟುಹೋಗಿದ್ದಾರೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ.

ಮನೆಯ ಬಾಗಿಲು ತೆರೆದು ಕೊಂಡಿರುವ ಬಗ್ಗೆ ಪಕ್ಕದ ಮನೆಯ ನಾಸಿರ್‌ ಎಂಬವರು ರಾತ್ರಿ 8 ಗಂಟೆ ವೇಳೆಗೆ ಯಾಕುಬ್‌ ಅವರಿಗೆ ಮಾಹಿತಿ ನೀಡಿದ್ದು ಅವರು ಮನೆಗೆ ಹೋಗಿ ಪರಿಶೀಲನೆ ನಡೆಸಿದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಾಹಿತಿ ತಿಳಿದುಕೊಂಡ ಕಡಬ ಪೊಲೀಸರು ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಪಕ್ಕದ ಮನೆಯಲ್ಲೂ ಯತ್ನ
ಯಾಕುಬ್‌ ಅವರ ಮನೆಯ ಪಕ್ಕದಲ್ಲೇ ಇರುವ ಅವರ ಸಹೋದರ ಅಬ್ದುಲ್‌ ಕುಂಞಿ ಅವರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯೊಳಗಿನ ಗೋದ್ರೆಜ್‌ನಲ್ಲಿದ್ದ ಚಿನ್ನ, ನಗದಿಗಾಗಿ ಜಾಲಾಡಿರುವುದು ಕಂಡುಬಂದಿದೆ. ಆದರೆ ಇವರ ಮನೆಯಿಂದ ಸೊತ್ತು ಕಳವುಗೊಂಡಿಲ್ಲ ಎಂದು ತಿಳಿದು ಬಂದಿದೆ.
ಶ್ವಾನ‌, ಬೆರಳಚ್ಚು ತಜ್ಞರ ಆಗಮನ ಮಂಗಳೂರಿನಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಕಳ್ಳತನ ನಡೆದ ಮನೆಗೆ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ.

ಡಿವೈಎಸ್‌ಪಿ, ಉಪ್ಪಿನಂಗಡಿ ಗ್ರಾಮಾಂತರ ಠಾಣಾ ಇನ್ಸ್‌ಸ್ಪೆಕ್ಟರ್‌, ಕಡಬ ಎಸ್‌ಐ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.