ಕಡಬ: ಮತ್ತೆ ಬಾಯ್ದೆರೆದ ರಸ್ತೆ ಹೊಂಡ
Team Udayavani, Mar 23, 2022, 12:28 PM IST
ಕಡಬ: ಇಲ್ಲಿನ ಹಳೆಸ್ಟೇಶನ್ ಬಳಿ ಕಡಬ-ಸುಬ್ರಹ್ಮಣ್ಯ ಮುಖ್ಯರಸ್ತೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಒಡೆದು ರಸ್ತೆಗೆ ಹಾನಿಯಾಗಿ ಸೃಷ್ಟಿಯಾಗಿದ್ದ ಅಪಾಯಕಾರಿ ಹೊಂಡವನ್ನು ತಿಂಗಳ ಹಿಂದೆ ಮುಚ್ಚಲಾಗಿತ್ತು. ಆದರೆ ಅದೇ ಜಾಗದಲ್ಲಿ ಮತ್ತೆ ಹೊಂಡ ಕಾಣಿಸಿಕೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಕಳೆದ ಹಲವು ವರ್ಷಗಳಿಂದ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಈ ರಸ್ತೆ ಹೊಂಡವನ್ನು ಮುಚ್ಚಿ ಸಮಸ್ಯೆಯನ್ನು ಬಗೆಹರಿಸುವಂತೆ ಪದೇ ಪದೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ ಪರಿಣಾಮವಾಗಿ ಕಳೆದ ತಿಂಗಳು ಕಡಬ ಪಟ್ಟಣ ಪಂಚಾಯತ್ ಅಧಿಕಾರಿ ಜೆಸಿಬಿ ಮೂಲಕ ರಸ್ತೆಯಲ್ಲಿದ್ದ ಹೊಂಡವನ್ನು ಅಗೆಸಿ ಒಡೆದು ಹೋಗಿದ್ದ ನೀರಿನ ಪೈಪ್ ಅನ್ನು ದುರಸ್ತಿಪಡಿಸಲು ಕ್ರಮ ಕೈಗೊಂಡಿದ್ದರು. ಬಳಿಕ ರಸ್ತೆಯನ್ನು ಅಗೆದಿರುವ ಜಾಗಕ್ಕೆ ಲೋಕೋಪಯೋಗಿ ಇಲಾಖಾಧಿಕಾರಿಗಳು ಡಾಮರು ಹಾಕಿಸಿ ಸರಿಪಡಿಸಿಕೊಟ್ಟಿದ್ದರು. ಆದರೆ ತಿಂಗಳು ಕಳೆಯುವ ಮೊದಲೇ ಹೊಂಡದ ಮಣ್ಣು ಜಗ್ಗಿ ಡಾಮರು ಎದ್ದು ಹೊಂಡ ಮರುಸೃಷ್ಟಿಯಾಗಿದೆ. ಮಾ. 21 ರಂದು ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಹೊಂಡಕ್ಕೆ ಸಿಲುಕಿ ನಿಯಂತ್ರಣ ತಪ್ಪಿ ಉರುಳಿಬಿದ್ದು ಗಾಯಗೊಂಡಿದ್ದಾರೆ.
ಇನ್ನಷ್ಟು ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುವುದರಿಂದ ಸಂಬಂಧ ಪಟ್ಟವರು ಕ್ರಮಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಕ್ರಮ ಕೈಗೊಳ್ಳ ಲಾಗುವುದು ಸ್ಥಳೀಯಾಡಳಿತದವರು ಪೈಪ್ ದುರಸ್ತಿಪಡಿಸಿ ಹೊಂಡವನ್ನು ಮುಚ್ಚಿಕೊಟ್ಟ ಬಳಿಕ ಇಲಾಖೆಯ ವತಿಯಿಂದ ಅಲ್ಲಿಗೆ ಡಾಮರು ಪ್ಯಾಚ್ವರ್ಕ್ ಮಾಡಿಸಲಾಗಿತ್ತು. ಹಾಕಿದ ಮಣ್ಣು ಜಗ್ಗಿ ಮತ್ತೆ ಹೊಂಡ ಸೃಷ್ಟಿಯಾಗಿದೆ. ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. -ರಾಜಾರಾಮ್, ಎಇಇ, ಲೋಕೋಪಯೋಗಿ ಇಲಾಖೆ, ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ