ಪಾನಮತ್ತ ಸೈನಿಕರಿಂದ ಪೊಲೀಸರ ಮೇಲೆ ಹಲ್ಲೆ : ನಾಲ್ವರ ಬಂಧನ


Team Udayavani, Oct 1, 2018, 9:53 AM IST

kadaba.jpg

ಕಡಬ: ಇಬ್ಬರು ಪಾನಮತ್ತ ಸೈನಿಕರು ಹಾಗೂ ಇನ್ನಿತರರ ತಂಡ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್‌ ವಾಹನಕ್ಕೆ ಹಾನಿಗೈದ ಘಟನೆ ರವಿವಾರ ರಾತ್ರಿ ಮರ್ದಾಳದಲ್ಲಿ ನಡೆದಿದೆ. ಕಡಬ ಆರಕ್ಷಕ ಠಾಣಾ ಉಪ ನಿರೀಕ್ಷಕ ಪ್ರಕಾಶ್‌ ದೇವಾಡಿಗ ಹಾಗೂ ಪೊಲೀಸ್‌ ಸಿಬಂದಿ ಶ್ರೀಶೈಲ, ಶಿವಪ್ರಸಾದ್‌, ಪುಟ್ಟಸ್ವಾಮಿ, ಗೃಹರಕ್ಷಕ
ದಳದ ಸಿಬಂದಿ ಯೋಗೀಶ್‌ ಅವರ ಮೇಲೆ ರಜೆಯಲ್ಲಿ ಊರಿಗೆ ಬಂದಿರುವ ನೂಜಿಬಾಳ್ತಿಲ ಗ್ರಾಮದ ನಿವಾಸಿಗಳಾದ ವೃತ್ತಿಯಲ್ಲಿ ಸೈನಿಕರಾಗಿರುವ ರತ್ನಾಕರ, ಹರೀಶ್‌ ಮತ್ತು ಅವರ ಸ್ನೇಹಿತರಾದ ದಿನೇಶ್‌, ಪ್ರಶಾಂತ್‌ ಮತ್ತಿತ ರರು ಪಾನಮತ್ತರಾಗಿ ಹಲ್ಲೆ ನಡೆಸಿದ್ದಾರೆ. 

ಪೊಲೀಸ್‌ ವಾಹನಕ್ಕೆ ಹಾನಿ
ಹಲ್ಲೆಯ ವೇಳೆ ಪೊಲೀಸ್‌ ವಾಹನಕ್ಕೂ ಹಾನಿಯಾಗಿದ್ದು, ಗಾಜು ಪುಡಿಯಾಗಿದೆ. ಮದ್ಯ ಸೇವನೆಯನ್ನು ಪರೀಕ್ಷಿಸುವ ಸಾಧನವನ್ನು ಕೂಡ ಆರೋಪಿಗಳು ಪುಡಿಗೈದಿದ್ದಾರೆ. ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚುವುದಾಗಿ ಬೆದರಿಸಿ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಪೊಲೀಸರು ತಿಳಿಸಿದ್ದಾರೆ. ಗಾಯಾಳು ಪೊಲೀಸರು ಕಡಬ ಸಮುದಾಯ ಆಸ್ಪತ್ರೆಗ ದಾಖಲಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಾಲ ನಾಯ್ಕ ಭೇಟಿ ನೀಡಿ ಪೋಲೀಸರ ಯೋಗಕ್ಷೇಮ ವಿಚಾರಿಸಿದರು.

ನಮ್ಮನ್ನು ತಡೆಯಲು ನೀವಾರು?
ಮರ್ದಾಳದ ಚಾಕೊಟೆಕೆರೆಯಲ್ಲಿ ಪೊಲೀಸರು ರಾತ್ರಿ 8.30ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಮದ್ಯ ಸೇವಿಸಿ ಬೈಕಿನಲ್ಲಿ ಹೆಲ್ಮೆಟ್‌ ಧರಿಸದೆ ಬಂದ ಸೈನಿಕರಾದ ಹರೀಶ್‌ ಹಾಗೂ ರತ್ನಾಕರ ಅವರನ್ನು ಪೊಲೀಸರು ತಡೆದು ನಿಲ್ಲಿಸಿದಾಗ ಅಕ್ರೋಶಗೊಂಡ ಅವರು ನಾವು ಸೈನಿಕರು ನಮ್ಮನ್ನು ತಡೆಯಲು ನೀವು ಯಾರು ಎಂದು ಅವಾಚ್ಯ ಶಬ್ದಗಳಿಂದ ಬೈದು ಏಕಾಏಕಿ ಪೊಲೀಸರ ಮೇಲೆರಗಿ ಹಲ್ಲೆ ನಡೆಸಿದರು. ಪೊಲೀಸರು ಪ್ರತಿರೋಧ ಒಡ್ಡಿದಾಗ ಆರೋಪಿಗಳು ಮತ್ತು ಅವರ ಸ್ನೇಹಿತರಾದ ದಿನೇಶ್‌, ಪ್ರಶಾಂತ್‌ ಹಾಗೂ ಇತರರು ಸೇರಿಕೊಂಡು ಪೊಲೀಸ್‌ ಸಿಬಂದಿ ಮೇಲೆ ಎರಗಿಬಿದ್ದು ಹಲ್ಲೆ ನಡೆಸಿದ್ದಾರೆ. ಗಾಯಾಳು ಪೊಲೀಸರ ಪೈಕಿ ಶ್ರೀಶೈಲ ಅವರ ತಲೆಗೆ ಗಾಯವಾಗಿದ್ದರೆ ಪುಟ್ಟಸ್ವಾಮಿ ಅವರ ಒಂದು ಹಲ್ಲು ಮುರಿದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿ ಆರೋಪಿಗಳನ್ನು ಬಂಧಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.