ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು, ಸಿಬಂದಿ ಕೊರತೆ

ಚಿಕಿತ್ಸೆಗೆ ರೋಗಿಗಳ ಪರದಾಟ; ಸಮಸ್ಯೆ ಬಗೆಹರಿಸುವಂತೆ ಲೋಕಾಯುಕ್ತಕ್ಕೆ ದೂರು

Team Udayavani, Sep 23, 2019, 5:33 AM IST

2009KDB3

ಕಡಬ: ನೂತನ ಕಡಬ ತಾಲೂಕಿನ ಉದ್ಘಾಟನೆಯೊಂದಿಗೆ 4.85 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಕಡಬ ಸಮುದಾಯ ಆಸ್ಪತ್ರೆಯ ಕಟ್ಟಡ ಉದ್ಘಾಟನೆಗೊಂಡು 7 ತಿಂಗಳು ಕಳೆದವು. ಆದರೆ ಇಲ್ಲಿ ಅಗತ್ಯ ಸಂಖ್ಯೆಯ ವೈದ್ಯರು ಹಾಗೂ ಸಿಬಂದಿಯಿಲ್ಲದೆ ಬಡ ರೋಗಿಗಳು ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಕಡಬ ಸಮುದಾಯ ಆಸ್ಪತ್ರೆಗೆ ಪ್ರಸೂತಿ, ಶಿಶು ತಜ್ಞರ ಸಹಿತ ನಾಲ್ವರು ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಆದರೆ ಇಲ್ಲಿ ಓರ್ವ ವೈದ್ಯರೇ ಇದ್ದು, ಇನ್ನಷ್ಟು ವೈದ್ಯರ ಹಾಗೂ ಫಾರ್ಮಾಸಿಸ್ಟ್‌ ನೇಮ ಕಾತಿಯಾಗದೇ ಬಡ ರೋಗಿಗಳಿಗೆ ತೀರಾ ತೊಂದರೆಯಾಗಿದೆ. ಇರುವ ಒಬ್ಬರೇ ವೈದ್ಯರು ನಿತ್ಯ 400ಕ್ಕೂ ಹೆಚ್ಚು ಹೊರ ರೋಗಿಗಳನ್ನು ಪರೀಕ್ಷಿಸಿ, ಚಿಕಿತ್ಸೆ ನೀಡುವ ಸವಾಲು ಎದುರಿಸಬೇಕಾಗಿದೆ.

ಕೂಡಲೇ ಈ ಆಸ್ಪತ್ರೆಗೆ ಅಗತ್ಯ ತಜ್ಞ ವೈದ್ಯರು ಹಾಗೂ ಸಿಬಂದಿ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡ ಗಿರೀಶ್‌ ಗೌಡ ಕೊರುಂದೂರು ಅವರು ಕರ್ನಾಟಕ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ ಹೀಗೆ 8 ಗ್ರಾಮಗಳ ವ್ಯಾಪ್ತಿಯನ್ನು ಈ ಆಸ್ಪತ್ರೆ ಹೊಂದಿದೆ. ಆದರೆ ಹತ್ತಿರದ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಬ್ರಹ್ಮಣ್ಯ, ಪಂಜ, ಏನೆಕಲ್‌, ಬಳ್ಪ, ಕೇನ್ಯ, ಎಡಮಂಗಲ ಪ್ರದೇಶದ ಜನರೂ ಇದೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿರುವುದರಿಂದ ವ್ಯಾಪ್ತಿ ವಿಸ್ತರಿಸಿದೆ.

ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ
ಕಡಬ ಸಮುದಾಯ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಸಂಬಂಧಪಟ್ಟವರಿಗೆ ಒತ್ತಡ ಹೇರಲಾಗಿದೆ. ಖಾಲಿ ಇರುವ ಫಾರ್ಮಾಸಿಸ್ಟ್‌ ಹಾಗೂ ಲ್ಯಾಬ್‌ ಟೆಕ್ನೀಶಿಯನ್‌ ಹುದ್ದೆಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಮಾಡಲಾಗಿದೆ.
– ಪಿ.ಪಿ. ವರ್ಗೀಸ್‌ , ಜಿ.ಪಂ. ಸದಸ್ಯ

ಟೆಂಡರ್‌ ಕರೆಯಲಾಗಿದೆ
ಸಮುದಾಯ ಆಸ್ಪತ್ರೆಗೆ ಅಗತ್ಯ ಸಲಕರಣೆ, ಸವಲತ್ತುಗಳ ಒದಗಣೆ, ತಜ್ಞ ವೈದರು, ಸಿಬಂದಿ ನೇಮಕ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಡಬದಲ್ಲಿರುವ ವೈದ್ಯಾಧಿಕಾರಿಗೆ ಕೊçಲ ಆಸ್ಪತ್ರೆಗೆ ವರ್ಗಾವಣೆಯಾಗಿದ್ದರೂ ಜನರ ಹಿತದೃಷ್ಟಿಯಿಂದ ಅವರನ್ನು ಬಿಡುಗಡೆಗೊಳಿಸಿಲ್ಲ. ಸುಬ್ರಹ್ಮಣ್ಯದ ವೈದ್ಯರನ್ನು ವಾರದಲ್ಲಿ 2 ದಿನ ಕಡಬಕ್ಕೆ ನಿಯೋಜಿಸಲಾಗಿದೆ. ಹೊರಗುತ್ತಿಗೆ ಆಧಾರದಲ್ಲಿ ಫಾರ್ಮಾಸಿಸ್ಟ್‌ ಹಾಗೂ ಲ್ಯಾಬ್‌ ಟೆಕ್ನೀಶಿಯನ್‌ ನೇಮಕಾತಿಗೆ ಟೆಂಡರ್‌ ಕರೆಯಲಾಗಿದ್ದು, ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಖಾಲಿ ಇರುವ ಆ ಹುದ್ದೆಗಳನ್ನು ತುಂಬಲಾಗುವುದು.
– ಡಾ| ರಾಮಕೃಷ್ಣ ರಾವ್‌, ಜಿಲ್ಲಾ ಆರೋಗ್ಯಾಧಿಕಾರಿ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.