ಕಡಬ ಸರಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಕುಸಿತ 


Team Udayavani, Jul 23, 2018, 12:08 PM IST

23-july-7.jpg

ಕಡಬ : ಸಂಪೂರ್ಣವಾಗಿ ಶಿಥಿಲಗೊಂಡು ಕುಸಿಯುವ ಭೀತಿ ಎದುರಿಸುತ್ತಿದ್ದ ಕಡಬ ಸರಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ಕಟ್ಟಡದ ಗೋಡೆ ಛಾವಣಿ ಸಹಿತ ಕುಸಿದು ಬಿದ್ದಿದೆ. ಶನಿವಾರ ಘಟನೆ ಸಂಭವಿಸಿದ್ದು, ಕಟ್ಟ ಡದ ಮರಮಟ್ಟು, ಹೆಂಚುಗಳು ನಾಶವಾಗಿ ಅಪಾರ ನಷ್ಟವೂ ಸಂಭವಿಸಿದೆ. ಕಟ್ಟಡ ಶಿಥಿಲಗೊಂಡು ಕುಸಿಯುವ ಭೀತಿ ಎದುರಿಸುತ್ತಿತ್ತು. ಮುನ್ಸೂಚನೆ ಅರಿತುಕೊಂಡು ವಿದ್ಯಾರ್ಥಿಗಳನ್ನು ಬೇರೆ ತರಗತಿ ಕೊಠಡಿಗಳಿಗೆ ಈ ಮೊದಲೇ ಸ್ಥಳಾಂತರಿಸಲಾಗಿತ್ತು. ಕಾಲೇ ಜಿ ನಲ್ಲಿ ತರಗತಿ ಕೊಠಡಿಗಳ ಕೊರತೆ ಇದೆ. ಈ ನಡುವೆ ಕಟ್ಟಡ ಕುಸಿದಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ. ಕುಸಿದಿರುವ ಹಳೆಯ ಕಟ್ಟಡವನ್ನು ನೆಲ ಸಮಗೊಳಿಸಿ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಪಾಯ ಸನ್ನಿವೇಶ ಅರಿವಿತ್ತು!
ಕಾಲೇಜಿನ ಶಿಥಿಲ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಕುಸಿದು ಬಿದ್ದು ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆ ಗಳಿರುವ ಕುರಿ ತು ಮಾಧ್ಯಮಗಳು ಈ ಹಿಂದೆಯೇ ಸಚಿತ್ರ ವರದಿಗಳನ್ನು ಪ್ರಕಟಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಹಾಗೂ ಜಿ.ಪಂ. ಎಂಜಿನಿಯರ್‌ ಭರತ್‌ ಅವರು ಕಟ್ಟಡದ ಪರಿಶೀಲನೆಯನ್ನೂ ನಡೆಸಿದ್ದರು.

 ಹರಾಜಿಗೆ ಅಂದಾಜು ಪಟ್ಟಿ
ಕಡಬ ಸರಕಾರಿ ಪ.ಪೂ. ಕಾಲೇಜಿನ ಹಳೆಯ ಕಟ್ಟಡದ ಗೋಡೆ ಬಿರುಕುಬಿಟ್ಟ ಕಾರಣದಿಂದ ಸ್ಥಳ ಪರಿಶೀಲನೆ ನಡೆಸಿ ಮುಂಜಾಗರೂಕತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಸೂಚಿಸಲಾಗಿತ್ತು. ಕಟ್ಟಡ ಕುಸಿಯುವ ಭೀತಿ ಇದ್ದುದರಿಂದ ಕಟ್ಟಡವನ್ನು ನೆಲಸಮಗೊಳಿಸಿ ಸಾಮಗ್ರಿಗಳನ್ನು ಹರಾಜು ಮಾಡಲು 50 ಸಾವಿರ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ನೀಡಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಮುಂದಿನ ಕ್ರಮ ಕೈಗೊಳ್ಳಬೇಕಿದೆ.
 - ಭರತ್‌,
ಜಿ.ಪಂ. ಎಂಜಿನಿಯರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.