ಕಡಬ: ಮಳೆ ಹಾನಿ ಪ್ರದೇಶಕ್ಕೆ ಸುಳ್ಯ ಶಾಸಕ ಎಸ್‌. ಅಂಗಾರ ಭೇಟಿ


Team Udayavani, Aug 19, 2018, 11:29 AM IST

19-agust-6.jpg

ಕಡಬ : ಅತಿವೃಷ್ಟಿಯ ಹಿನ್ನಲೆಯಲ್ಲಿ ಕಡಬ ಪರಿಸರದ ನೂಜಿಬಾಳ್ತಿಲ, ಇಚಿಲಂಪಾಡಿ, ಮೂರಾಜೆ ಪಟ್ನ ಪ್ರದೇಶದಲ್ಲಿ ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿಯಾದ ಪ್ರದೇಶಗಳಿಗೆ ಸುಳ್ಯ ಶಾಸಕ ಎಸ್‌.ಅಂಗಾರ ಅವರು ಶನಿವಾರ ಭೇಟಿ ನೀಡಿ ಹಾನಿಗೊಳಗಾದ ವರದಿಯೊಂದಿಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿಶೇಷ ಪರಿಹಾರಕ್ಕೆ ಆಗ್ರಹಿಸಲಾಗುವುದೆಂದು ಭರವಸೆ ನೀಡಿದರು.

ಶಾಸಕರು ನೆರೆನೀರಿನಲ್ಲಿ ಮುಳುಗಡೆಯಾಗಿದ್ದ ಇಚಿಲಂಪಾಡಿಯ ಶ್ರೀ ಗಂಗಾ ಧರೇಶ್ವರ ದೇವಸ್ಥಾನದ ಹತ್ತಿರ ಹಾಗೂ ಇಚಿಲಂಪಾಡಿಯ ಮಾನಡ್ಕ ಶ್ಯಾಮಲದೇವಿ, ವಿನೋದ್‌ ಕುಮಾರ್‌, ಲಕ್ಷ್ಮೀ ಕುಟ್ಟಿ, ಜಯಾನಂದ ಶೆಟ್ಟಿ ಮೊದಲಾದವರಿಂದ ತಮ್ಮ ಮನೆ ಕೃಷಿ ಹಾಗೂ ಇನ್ನಿತರ ನಷ್ಟಗಳ ಬಗ್ಗೆ ಮಾಹಿತಿ ಪಡೆದರು. ಶ್ರೀ ಗಂಗಾಧರೇಶ್ವರ ದೇವಾಲಯದ ಸುತ್ತ ಸುಮಾರು 500ಕ್ಕೂ ಹೆಚ್ಚು ಅಡಿಕೆ ಗಿಡ, ಪಂಪ್‌ ಸೆಟ್‌, ಬೈಕ್‌ ಸೆಟ್‌ ಹಾನಿಯಾಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರು.

ಬಳಿಕ ಇಚಿಲಂಪಾಡಿ ಓರ್ಥಡೋಕ್ಸ್‌ ಸಿರಿಯನ್‌ ಚರ್ಚ್‌ ಬಳಿಯಿರುವ ನೇರ್ಲ ಸುದೆಗಂಡಿ ಎಂಬಲ್ಲಿ ರವೀಶ್‌ ಜೈನ್‌ ಅವರ ಹಾನಿಯಾದ ಮನೆಯನ್ನು ಪರಿಶೀಲನೆ ನಡೆಸಿದರು. ಬಳಿಕ ಕಡಬ ತಹಶೀಲ್ದಾರ್‌ ಕಚೇರಿ ಆಗಮಿಸಿದ ಶಾಸಕರು ಕಡಬ ಭಾಗದಲ್ಲಿ ಮಳೆಯಿಂದಾಗಿ ಆದ ಹಾನಿಯ ಬಗ್ಗೆ ವರದಿ ಪಡೆದುಕೊಂಡರು. ಅನಂತರ ಕೋಡಿಂಬಾಳ ಗ್ರಾಮದ ಮೂರಾಜೆ ಪಟ್ನಕ್ಕೆ ತೆರಳಿ ನೆರೆಯಿಂದಾಗಿ ಮನೆ ಕಳೆದುಕೊಂಡ ಜಲಜಾಕ್ಷಿ ಅವರಿಗೆ ಸಾಂತ್ವನ ಹೇಳಿ ಹೆಚ್ಚಿನ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು.

ಅಧಿಕಾರಿಗಳಿಂದ ಮಾಹಿತಿ
ಈಗಿನ ನಿಯಮಾವಳಿಯ ಪ್ರಕಾರ ಮನೆಗಳು ಭಾಗಶಃ ಹಾನಿಯಾದರೆ 75 ಸಾವಿರ ರೂ., ಸಂಪೂರ್ಣ ನಾಶವಾದರೆ 95 ಸಾವಿರ ರೂ. ಪರಿಹಾರ ನಿಗದಿಯಾಗಿದೆ. ಆದರೆ ಈ ಪರಿಹಾರದ ಮೊತ್ತ ತೀರ ಕಡಿಮೆಯಾಗಿದೆ. ಆದ್ದರಿಂದ ಸಂಪೂರ್ಣ ಮನೆ ಹಾನಿಯಾದರೆ ಸರಕಾರ ಕನಿಷ್ಟ 5ಲಕ್ಷ ರೂ. ಹಾಗೂ ಭಾಗಶಃ ಹಾನಿಯಾದರೆ 2.5 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಸರಕಾರದ ಮಟ್ಟದಲ್ಲಿ ಒತ್ತಡ ತರಲಾಗುವುದು ಎಂದರು. ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಮರ್ಪಕವಾದ ವರದಿಯನ್ನು ನೀಡಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಅವರು ಸೂಚಿಸಿದರು.

ವಸತಿ ಯೋಜನೆಯಲ್ಲಿ ಅನುದಾನ
ಇಚಿಲಂಪಾಡಿಯ ರವಿರಾಜ್‌ ಶೆಟ್ಟಿ ಹಾಗೂ ಮೂರಾಜೆ ಪಟ್ನ ಜಲಜಾಕ್ಷಿಯವರ ಮನೆ ಹಾನಿ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಕಂದಾಯ ಇಲಾಖೆಯಿಂದ ಸಿಗುವ ಪರಿಹಾರದೊಂದಿಗೆ ಪಂಚಾಯತ್‌ನಿಂದ ನೂತನ ಮನೆ ನಿರ್ಮಾಣಕ್ಕೆ ವಸತಿ ಯೋಜನೆಯಲ್ಲಿ ಅನುದಾನ ನೀಡುವುದಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಇಚಿಲಂಪಾಡಿಯಲ್ಲಿ ಶಾಸಕರನ್ನು ಭೇಟಿಯಾದ ತಾ. ಪಂ. ಸದಸ್ಯೆ ಕೆ.ಟಿ. ವಲ್ಸಮ್ಮ ಅವರು ಇಚಿಲಂಪಾಡಿ ಭಾಗದಲ್ಲಿ ಮಳೆಯಿಂದಾಗಿ ಅತೀ ಹೆಚ್ಚು ಹಾನಿ ಸಂಭವಿಸಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಪರಿಹಾರವನ್ನು ಈ ಭಾಗಕ್ಕೆ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಮನೆ ಹಾನಿಗೊಳಗಾದ ಮೂರಾಜೆ ಪಟ್ನ ಜಲಜಾಕ್ಷಿಯವರು ಸೂಕ್ತ ಪರಿಹಾರ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಭಾಸ್ಕರ ಗೌಡ, ಕಡಬ ಬಿಜೆಪಿ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಎನ್‌.ಕೆ., ಕೌಕ್ರಾಡಿ ಗ್ರಾ.ಪಂ.ಸದಸ್ಯರಾದ ಮಾಧವ, ಮೋಹಿನಿ, ಪಿ.ವಿ .ಅನ್ನಮ್ಮ , ಬಿಜೆಪಿ ಮುಖಂಡರಾದ ಸತೀಶ್‌ ನಾಯಕ್‌ ಕಡಬ, ಫಯಾಝ್ ಕೆನರಾ, ಮಾಧವ, ಹರ್ಷ ಕೋಡಿ, ಜಾನಕಿ, ಕೃಷ್ಣಪ್ಪ ಶಾಸಕರ ಜತೆಗಿದ್ದರು.

ಶೀಘ್ರ ಸಿಎಂ ಭೇಟಿ
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ಮಳೆಯ ಪರಿಣಾಮವಾಗಿ ಸುಮಾರು 24 ರಸ್ತೆಗಳು ಹಾಗೂ 40ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 6ಮನೆಗಳು ಪೂರ್ತಿ ನೆಲಸಮವಾಗಿದೆ. ಅಪಾರ ಕೃಷಿ, ತೋಟಗಳು ನಾಶವಾಗಿವೆ. ಈ ಎಲ್ಲಾ ಘಟನೆಗಳ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್‌ ರವರಿಂದ ವರದಿಯನ್ನು ತರಿಸಿಕೊಂಡು ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಶೀಘ್ರದಲ್ಲೇ ಭೇಟಿಯಾಗಿ ವಿಶೇಷ ಪರಿಹಾರ ನೀಡುವುದಕ್ಕಾಗಿ ಆಗ್ರಹಿಸಲಾಗುವುದು ಎಂದು ಹೇಳಿದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.