ಕಡಬ ತಾ| ಅನುಷ್ಠಾನಕ್ಕೆ ಬಿರುಸಿನ ತಯಾರಿ


Team Udayavani, Oct 12, 2017, 2:40 PM IST

12-Mng-11.jpg

ಕಡಬ: ಹಲವು ದಶಕಗಳ ಹೋರಾಟದ ಬಳಿಕ ಕಡಬ ತಾಲೂಕು ಕೇಂದ್ರವಾಗಿ ಘೋಷಣೆಯಾಗಿತ್ತು. ಆದರೆ ಅನುಷ್ಠಾನ ವಿಳಂಬವಾಗಿದ್ದು ಜನರಲ್ಲಿ ನಿರಾಸೆ ಮೂಡಿಸಿತ್ತು. ಈಗ ತಾಲೂಕು ಅನುಷ್ಠಾನಕ್ಕೆ ಸಚಿವ ಸಂಪುಟದ ಒಪ್ಪಿಗೆ ದೊರೆತಿದ್ದು, 2018ರ ಜ. 1ರಿಂದ ಕಡಬ ತಾಲೂಕು ಕೇಂದ್ರವಾಗಿ ಮಾರ್ಪಡುವುದು ಖಚಿತವಾಗಿದೆ. ಬಿರುಸಿನ ಸಿದ್ಧತೆಯೂ ನಡೆದಿರುವುದರಿಂದ ಈ ಪರಿಸರದ
ಜನರಲ್ಲಿ ಹೊಸ ಹುರುಪು ಮೂಡಿಸಿದೆ.

ಬಿರುಸಿನ ಸಿದ್ಧತೆ
2017-18ರ ಬಜೆಟ್‌ನಲ್ಲಿ ತಾಲೂಕು ಘೋಷಣೆ ಆದ ಬಳಿಕ ತಾಲೂಕು ಅನುಷ್ಠಾನದ ಕುರಿತು ಜಿಲ್ಲಾಧಿಕಾರಿಗಳ ಹಾಗೂ ಸಹಾಯಕ ಆಯುಕ್ತರ ಮಟ್ಟದಲ್ಲಿ ಹಲವು ಸಭೆಗಳಾಗಿದೆ. ಬಹಳ ಹಿಂದೆಯೇ ಪ್ರಮುಖ ಇಲಾಖೆಗಳಿಗೆ ಸಾಕಷ್ಟು ಜಾಗ ಕಾದಿರಿಸಿದ್ದರೂ ಕೆಲವು ಇಲಾಖೆಗಳಿಗೆ ಬಾಕಿ ಇತ್ತು. ಕಡಬ ಆಸುಪಾಸಿನ ಸರಕಾರಿ ಜಾಗವನ್ನು ಗುರುತು ಮಾಡಿ ಸರಕಾರದ ಅನುಮೋದನೆ ಪಡೆಯುವ ಕಾರ್ಯ ಈಗ ನಡೆದಿದೆ. ಉಸ್ತವಾರಿ ಸಚಿವರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಕಡಬ ತಾಲೂಕಿಗೆ ಸಂಬಂಧಿಸಿದ ಗಡಿಯ ಗ್ರಾಮಗಳ ಕುರಿತು ಚರ್ಚೆ ನಡೆಸಿದ್ದಾರೆ.

ಇಲಾಖೆಗಳಿಗೆ ಎಲ್ಲಿ ಜಾಗ? 
ಕೆಎಸ್‌ಆರ್‌ಟಿಸಿಗೆ ಕಡಬ ಅಂಬೇಡ್ಕರ್‌ ಭವನದ ಸಮೀಪ, ತಾ.ಪಂ. ಕಚೇರಿ ನಿರ್ಮಾಣಕ್ಕೆ ಹಳೆ ಸ್ಟೇಷನ್‌ನಲ್ಲಿ ತಾ.ಪಂ.
ಸುಪರ್ದಿಯಲ್ಲಿರುವ ಜಾಗ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ಕಡಬ ಮೆಸ್ಕಾಂ ಸಮೀಪದ 3 ಎಕ್ರೆ ಜಾಗ, ಅಗ್ನಿಶಾಮಕ ದಳಕ್ಕೆ ಮರ್ದಾಳ ಸಮೀಪ ಚಾಕೋಟೆಕೆರೆಯಲ್ಲಿ, ತೋಟಗಾರಿಕಾ ಇಲಾಖೆಗೆ ಕಡಬ ವಿದ್ಯಾನಗರದಲ್ಲಿರುವ ಜೇನು ಕೃಷಿ ಸಂಬಂಧಿಸಿದ ಕಟ್ಟಡಗಳನ್ನು ಉಪಯೋಗಿಸುವ ಕುರಿತು ಸಿದ್ಧತೆಗಳು ನಡೆದಿವೆ. ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 2 ಎಕರೆ ಜಮೀನು ಅಗತ್ಯವಿದ್ದು, ಕಂದಾಯ ಇಲಾಖೆಯವರು ಜಾಗ ಗೊತ್ತುಪಡಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪೇಟೆಯ ಸಮೀಪ ಜಾಗ ಬೇಕಾಗಿದ್ದು,ಹುಡುಕಲಾಗುತ್ತಿದೆ.

ಪೂರಕ ವಾತಾವರಣ
1986ರಲ್ಲಿ ಕಡಬದಲ್ಲಿ ನಾಡ ಕಚೇರಿಯನ್ನು ಪ್ರಾರಂಭಿಸಲು ಸರಕಾರ ಹಸಿರು ನಿಶಾನೆ ತೋರಿಸಿತು. ಸರಕಾರ ರಚಿಸಿದ ತಾಲೂಕು ರಚನಾ ಸಮಿತಿಗಳು ಕಡಬ ಪ್ರತ್ಯೇಕ ತಾಲೂಕಾಗಲು ಯೋಗ್ಯವಾಗಿದೆ ಎಂದು ಶಿಫಾರಸ್ಸು ಮಾಡಿದ್ದವು.

2001ರಲ್ಲಿ ರಾಜ್ಯ ಸರಕಾರದ ಕಾರ್ಯದರ್ಶಿ ಕಡಬ ತಾಲೂಕು ರಚನೆಗೆ ಸೂಚನೆ ನೀಡಿದ್ದರು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಅದೇ ವರ್ಷ ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ವೇಳೆ ಕಡಬಕ್ಕೆ ವಿಶೇಷ ತಹಶೀಲ್ದಾರ್‌ ನೇಮಕ ಮಾಡಲಾಯಿತು. 2004ರಲ್ಲಿ ಭೂಮಿ ಕೇಂದ್ರವನ್ನು ಪ್ರಾರಂಭಿಸಲಾಯಿತು.

ಶೆಟ್ಟರ್‌ರಿಂದ ಘೋಷಣೆ
2013ರ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಘೋಷಿಸಿದ ಹೊಸ ತಾಲೂಕುಗಳ ಪಟ್ಟಿಯಲ್ಲಿ ಕಡಬವೂ ಸೇರಿತ್ತು.  ಕಾಂಗ್ರೆಸ್‌ ಸರಕಾರ ಹಿಂದಿನ ಸರಕಾರದ ಘೋಷಣೆಯನ್ನೊಪ್ಪದ ಕಾರಣ ತಾಲೂಕು ರಚನೆ ನನೆಗುದಿಗೆ ಬಿದ್ದಿತ್ತು. ಆದರೆ, 2017-18ರ ಬಜೆಟ್‌ನಲ್ಲಿ ರಾಜ್ಯದಲ್ಲಿ ಕಡಬ ಸಹಿತ 49 ಹೊಸ ತಾಲೂಕುಗಳ ಘೋಷಣೆ ಮಾಡಿದ್ದಲ್ಲದೆ, ಸಂಪುಟದ ಒಪ್ಪಿಗೆಯನ್ನೂ ನೀಡುವ ಮೂಲಕ ಕಡಬ ತಾಲೂಕಾಗುವುದು ಖಚಿತವೆನಿಸಿದೆ.

ಇಲಾಖೆಗಳಿಗೆ ಜಮೀನು
ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 1.60 ಎಕ್ರೆ, ಶಿಕ್ಷಣ ಇಲಾಖೆಗೆ 14.56 ಎಕ್ರೆ ಜಮೀನಿದ್ದು, ಅದರಲ್ಲಿಯೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನಿರ್ಮಾಣದ ಯೋಜನೆ ಇದೆ. ಪೊಲೀಸ್‌ ಇಲಾಖೆಗೆ 2.5 ಎಕ್ರೆ, ಲೋಕೋಪಯೋಗಿ ಇಲಾಖೆಗೆ 0.20 ಎಕ್ರೆ, ಪಂಚಾಯತ್‌ ರಾಜ್‌ ಇಲಾಖೆಗೆ 5.62 ಎಕ್ರೆ, ಕೃಷಿ ಇಲಾಖೆಗೆ 0.10 ಎಕ್ರೆ, ಮೆಸ್ಕಾಂಗೆ 2.90 ಎಕ್ರೆ, ಆರೋಗ್ಯ ಇಲಾಖೆಗೆ 2.11 ಎಕ್ರೆ ಭೂಮಿ ಕಾದಿರಿಸಲಾಗಿದೆ. ಕೃಷಿ ಇಲಾಖೆಗೆ ಈಗ ರೈತ ಸಂಪರ್ಕ ಕೇಂದ್ರ ಹಾಗೂ ನಿವೇಶನವಿದೆ. ಪಶುವೈದ್ಯಕೀಯ ಇಲಾಖೆಗೆ 70 ಸೆಂಟ್ಸ್‌ ಜಾಗವಿದ್ದು, ಹೊಸ ಕಟ್ಟಡ ನಿರ್ಮಾಣವಾಗಿದೆ.

ಪ್ರಕ್ರಿಯೆಗಳು ನಡೆಯುತ್ತಿವೆ
ತಾಲೂಕು ರಚನೆಯ ಕುರಿತು ಅ. 12ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಿಗದಿಯಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ವರ್ಗಾವಣೆಯಾದ ಕಾರಣ ಸಭೆ ಮುಂದೂಡಲಾಗಿದೆ. ತಾಲೂಕು ರಚನೆಯ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರದ ಸೂಚನೆಯಂತೆ 2018ರ ಜ. 1ರಿಂದ ಕಡಬ ತಾಲೂಕು ಅನುಷ್ಠಾನವಾಗಬೇಕಿದೆ.
ಜಾನ್‌ಪ್ರಕಾಶ್‌ ರೋಡ್ರಿಗಸ್‌
ಕಡಬ ತಹಶೀಲ್ದಾರ್‌

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.