ಉಪ್ಪಳದಲ್ಲಿ ತೀವ್ರ ಕಡಲ್ಕೊರೆತ
ಹಲವು ಮನೆಗಳು ಅಪಾಯದಂಚಿನಲ್ಲಿ
Team Udayavani, Jun 13, 2019, 1:50 AM IST
ಸಾಂದರ್ಭಿಕ ಚಿತ್ರ
ಉಪ್ಪಳ: ಮೂಸೋಡಿ ಹಾಗೂ ಶಾರದಾ ನಗರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಹಲವು ಮನೆಗಳು ಅಪಾಯದಂಚಿನಲ್ಲಿವೆ. ಶಾರದಾ ನಗರದ ಮೀನು ಕಾರ್ಮಿಕರಾದ ಶಕುಂತಳಾ ಸಾಲ್ಯಾನ್, ಸುನಂದಾ, ಶಶಿಕಲಾ ಅವರ ಮನೆಗಳು ಅಪಾಯದಂಚಿನಲ್ಲಿದ್ದು, ಈ ಮನೆಗಳವರೆಗೆ ಸಮುದ್ರದ ನೀರು ತಲುಪಿದೆ. ಅಲೆಗಳು ಗೋಡೆಗೆ ಬಡಿಯುತ್ತಿದೆ.
ಈ ಪ್ರದೇಶದಲ್ಲಿದ್ದ ತಡೆಗೋಡೆ ಹಲವು ವರ್ಷಗಳ ಹಿಂದೆಯೇ ಸಮುದ್ರ ಪಾಲಾಗಿದೆ. ಅದೇ ರೀತಿ ಮೂಸೋಡಿಯಲ್ಲಿ ಕಡಲ್ಕೊರೆತದಿಂದ ಇಸ್ಮಾಯಿಲ್ ಅವರ ಸ್ಥಳದಲ್ಲಿದ್ದ ಗಾಳಿ ಮರಗಳು ಸಮುದ್ರ ಪಾಲಾಗಿವೆ. ಕಿಳಿರಿಯ ಮಸೀದಿ ಮತ್ತು 8 ಮನೆಗಳು ಅಪಾಯದಂಚಿನಲ್ಲಿವೆ. ಮೊಹಮ್ಮದ್, ನಫೀಸ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಹೆದ್ದಾರಿಗೆ ಉರುಳಿದ ಮರ
ಮೊಗ್ರಾಲ್ ಪುತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಾಸರಗೋಡಿನ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಮರವನ್ನು ಕಡಿದು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಸುಗಮಗೊಂಡಿತು. ಜೂ. 8ರಿಂದ ಮಳೆ ಆರಂಭಗೊಂಡ ಬಳಿಕ ಜಿಲ್ಲೆಯ 4.7 ಹೆಕ್ಟೇರ್ ಜಾಗದಲ್ಲಿ ಕೃಷಿ ಹಾನಿ ಸಂಭವಿಸಿದೆ. 10 ಮನೆಗಳು ಭಾಗಶಃ ಹಾನಿಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ