ಕದ್ರಿ ಶ್ರೀ ಮಂಜುನಾಥ ದೇವಸ್ಥಾನ: ವೈಭವದ ವರ್ಷಾವಧಿ ಜಾತ್ರೆ


Team Udayavani, Jan 17, 2018, 10:29 AM IST

18-Jan-3.jpg

ಮಹಾನಗರ: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರೆಯು ಜ. 14ಕ್ಕೆ ಆರಂಭಗೊಂಡಿದ್ದು, ಅತ್ಯಂತ ವೈಭವದಿಂದ ಜರಗುತ್ತಿದೆ. ಜಾತ್ರೆ ಅಂಗವಾಗಿ ಕ್ಷೇತ್ರವನ್ನು ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿದ್ದು, ಭಕ್ತರು ಸಂಭ್ರಮದಿಂದ ಪಾಲ್ಗೊಳ್ಳುತ್ತಿದ್ದಾರೆ.

ಜ. 21: ಕದ್ರಿ ರಥೋತ್ಸವ
ಜ. 17ರಂದು ಮಲ್ಲಿಕಟ್ಟೆ ಸವಾರಿ ಬಲಿ, ಜ. 18ರಂದು ಮುಂಡಾಣಕಟ್ಟೆ ಸವಾರಿ ಬಲಿ, ಜ. 19ರಂದು ಕೊಂಚಾಡಿ
ಸವಾರಿ ಬಲಿ, ಜ. 20ರಂದು ಏಳನೇ ದೀಪೋತ್ಸವ ಜರಗಲಿದೆ. ಜ. 21ರಂದು ಮಧ್ಯಾಹ್ನ ರಥಾರೋಹಣ, ಸಂಜೆ ಶ್ರೀ ಮನ್ಮಹಾರಥೋತ್ಸವ, ಬೆಳ್ಳಿ ರಥೋತ್ಸವ, ಕವಾಟ ಬಂಧನ, ಜ. 22ರಂದು ಅವಭೃಥ ಸ್ನಾನ, ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಚಂದ್ರಮಂಡಲ ಉತ್ಸವ, ಅವಭೃತ ಬಳಿಕ ಕದ್ರಿ ಹತ್ತು ಸಮಸ್ತರಿಂದ ಧ್ವಜಾವರೋಹಣ ನಡೆಯಲಿದೆ.

ಜ. 24ರಂದು ದೇಗುಲದಿಂದ ಮಲರಾಯ ದೈವದ ಭಂಡಾರ ಹೊರಡುವುದು, ಮಧ್ಯಾಹ್ನ 12ಕ್ಕೆ ಸಂಪ್ರೋಕ್ಷಣೆ, ಅಣ್ಣಪ್ಪ ದೈವಕ್ಕೆ ವಾರ್ಷಿಕ ಪರ್ವ ಸೇವೆ ಹಾಗೂ ರಾತ್ರಿ ಮಲರಾಯ ಹಾಗೂ ಪರಿವಾರ ದೈವಗಳ ನೇಮ ಜರಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು
ಕ್ಷೇತ್ರದ ಉತ್ಸವದ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ವತಿಯಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜ. 17ರಂದು ಸಂಜೆ ಭಕ್ತಿಗಾಯನ, ಭಜನೆ, ಭಕ್ತಿಸುಧೆ, ಸಾಂಸ್ಕೃತಿಕ ವೈಭವ, ನೃತ್ಯ, ತಾಳಮದ್ದಳೆ. ಜ. 18ರಂದು ಸಂಜೆ ಭಜನೆ, ಭಕ್ತಿಗಾಯನ, ನೃತ್ಯ ನಡೆಯಲಿದೆ.

ಜ. 19ರಂದು ಸಂಜೆ ಸಂಗೀತ, ಯಕ್ಷನೃತ್ಯ, ಸಂಗೀತ ವೈಭವ, ಭರತನಾಟ್ಯ, ತುಳುನಾಟಕ, ಭಕ್ತಿ ಗಾಯನ ಸಂಭ್ರಮ, ಜ. 20ರಂದು ಬೆಳಗ್ಗೆ ಭಜನೆ, ಭಕ್ತಿಗೀತೆ, ಸಂಜೆ ವೈವಿಧ್ಯಮಯ ಕಾರ್ಯಕ್ರಮ, ಭಕ್ತಿ ರಸಧಾರೆ, ಮಕ್ಕಳ ಯಕ್ಷಗಾನ. ಜ. 21ರಂದು ಬೆಳಗ್ಗೆ ವಾದ್ಯಗೋಷ್ಠಿ, ಭಜನೆ, ಸ್ಯಾಕ್ಸೋಫೋನ್‌ ವಾದನ, ಮಧ್ಯಾಹ್ನ ಹಿಂದೂಸ್ಥಾನಿ ಗಾಯನ, ಭಜನೆ, ಯಕ್ಷಗಾನ, ಸಂಜೆ ಭಕ್ತಿಲಹರಿ, ಚೆಂಡೆವಾದನ ಜರಗಲಿದೆ.

ಜ. 22ರಂದು ಬೆಳಗ್ಗೆ ಭಜನೆ, ಸಂಗೀತ, ಭರತನಾಟ್ಯ, ಸಾಂಸ್ಕೃತಿಕ ವೈವಿಧ್ಯ, ಭರತನಾಟ್ಯ. ಜ. 23ರಂದು ಸಂಜೆ ಗೀತ ಗಾಯನ, ಸಂಗೀತ, ವಾದ್ಯಗೋಷ್ಠಿ, ನಾಟ್ಯ. 24ರಂದು ಸಂಜೆ ಭಜನೆ, ಭರತನಾಟ್ಯ, ದಾಸವಾಣಿ, ಇಂದ್ರಜಾಲ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.