![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-415x229.jpg)
ಕದ್ರಿ ದೇವಸ್ಥಾನ ಬ್ರಹ್ಮಕಲಶಾಭಿಷೇಕಕ್ಕೆ ಸಿದ್ಧ
ಮೇ 2ರಿಂದ 10ರವರೆಗೆ ವಿವಿಧ ಕಾರ್ಯಕ್ರಮ
Team Udayavani, May 1, 2019, 6:14 AM IST
![kadri](https://www.udayavani.com/wp-content/uploads/2019/04/kadri-620x416.jpg)
ಮಹಾನಗರ: ಪುರಾಣ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೇ 2ರಿಂದ ಮೇ 10ರವರೆಗೆ ಅಷ್ಟೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ, ಮಹಾದಂಡರುದ್ರಾಭಿಷೇಕ ಹಾಗೂ ಮಹಾರುದ್ರಯಾಗ ಆಯೋಜನೆಯ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಪುಣ್ಯ ಕಾರ್ಯದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರವನ್ನು ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುದೀಪಗಳಿಂದ ಶೃಂಗರಿಸಲಾಗಿದೆ.
ಕದ್ರಿ ಮಠಾಧೀಶರಾದ ಶ್ರೀ ರಾಜಾನಿರ್ಮಲನಾಥ್ ಜೀ ಉಪಸ್ಥಿತಿಯಲ್ಲಿ ದೇರೆಬೈಲು ಬ್ರಹ್ಮಶ್ರೀ ಶ್ರೀ ವಿಠಲದಾಸ್ ತಂತ್ರಿವರೇಣ್ಯರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ.
ಬ್ರಹ್ಮಕಶಾಭಿಷೇಕದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಹೊರಭಾಗದಲ್ಲಿ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ಗೆ ಕದ್ರಿ ಕ್ರೀಡಾಂಗಣ ಹಾಗೂ ಇತರ ಮೂರು ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ದೇವಾಲಯವನ್ನು ವಿದ್ಯುದ್ದೀಪಾಲಂಕಾರದಿಂದ ಅಲಂಕರಿಸಲಾಗಿದೆ.
ದೇವಾಲಯದ ಬಲಭಾಗದಲ್ಲಿ ಬ್ರಹ್ಮಕಲಶ ಮಂಟಪ ರಚನೆ ನಡೆಯುತ್ತಿದ್ದು, ಸುತ್ತಮುತ್ತ ಚಪ್ಪರ ಹಾಕಲಾಗಿದೆ. ದೇವಾಲಯದ ಬಲಭಾಗದಲ್ಲಿ ಸಾಂಸ್ಕೃತಿಕ ವೇದಿಕೆ ನಿರ್ಮಾಣ ಮಾಡಲಾಗಿದ್ದು ಏಕಕಾಲಕ್ಕೆ 3 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ.
ವಿವಿಧ ಕಾಮಗಾರಿ ಪೂರ್ಣ
ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಸುತ್ತುಪೌಳಿ ಪುನರ್ ನಿರ್ಮಾಣ ಕಾಮಗಾರಿ, ಶನಿಪೂಜೆ, ಸತ್ಯನಾರಾಯಣ ಪೂಜಾ ಹಾಲ್, ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಗ್ರಾನೈಟ್ ಹಾಸುವ ಕಾಮಗಾರಿ ನಡೆದಿದೆ. ಮೇ 2ರಿಂದ 11ರವರೆಗೆ ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ನಡೆಯಲಿದೆ.
ಟಾಪ್ ನ್ಯೂಸ್
![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-150x83.jpg)
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
![ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್](https://www.udayavani.com/wp-content/uploads/2024/06/Belagavi-3-150x81.jpg)
ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್
![Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ](https://www.udayavani.com/wp-content/uploads/2024/06/Priyanka-Jarakiholi-150x80.jpg)
Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
![Mudhol ಬೈಕ್ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್ ವಶಕ್ಕೆ](https://www.udayavani.com/wp-content/uploads/2024/06/BIKE-SS-150x85.jpg)
Mudhol ಬೈಕ್ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್ ವಶಕ್ಕೆ
![Rahul Gandhi resfused to take Leader of Opposition post In Lok Sabha](https://www.udayavani.com/wp-content/uploads/2024/06/rahul-14-150x83.jpg)
Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.