ತಲವಾರು ಸಂಸ್ಕೃತಿ ನಮ್ಮದಲ್ಲ: ಡಾ| ಕಲ್ಲಡ್ಕ ಪ್ರಭಾಕರ ಭಟ್‌


Team Udayavani, Mar 31, 2022, 7:48 AM IST

ತಲವಾರು ಸಂಸ್ಕೃತಿ ನಮ್ಮದಲ್ಲ: ಡಾ| ಕಲ್ಲಡ್ಕ ಪ್ರಭಾಕರ ಭಟ್‌

ಉಳ್ಳಾಲ: ಪಠ್ಯಕ್ರಮದಲ್ಲಿ ಭಾರತವನ್ನು ಹಿಂದೂಸ್ಥಾನ ಎಂದು ಕರೆದರೆ ಕೆಲವರಿಗೆ ಮೈ ಉರಿಯು ತ್ತದೆ. ಇಲ್ಲಿ ಕೆಲವರು ತಮ್ಮನ್ನು ತಾವು ಎಡಪಂಥೀಯರು ಎಂದು ಬಿಂಬಿಸಿ ಕೊಂಡು ದೇಶದ ವಿರುದ್ಧ ವಿಷಬೀಜ ಬಿತ್ತುವ ಕೆಲಸವನ್ನು ನಡೆಸುತ್ತಿದ್ದಾರೆ. ತಲವಾರು ಹಿಡಿದು ಬಲವಂತ ಮಾಡುವ ಸಂಸ್ಕೃತಿ ಭಾರತದಲ್ಲಿಲ್ಲ. ದೇಶ ಸರ್ವಶ್ರೇಷ್ಠವಾಗಬೇಕಾದರೆ ಪಾಶ್ಚಾತ್ಯ ದೇಶದ ಬಗೆಗಿನ ಒಲವು ಕಡಿಮೆಯಾಗಬೇಕು ಎಂದು ಆರ್‌ಎಸ್‌ಎಸ್‌ ಪ್ರಮುಖ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ಮೈದಾನದಲ್ಲಿ ಬುಧ ವಾರ ನಡೆದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ 2021-22ನೇ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿ.ವಿ. ಉಪಕುಲಪತಿ ಡಾ| ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿ ದ್ದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ| ಕಿಶೋರಿ ನಾಯಕ್‌ ಕೆ. ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್‌ ಅಧ್ಯಕ್ಷ ಸಂಪತ್‌ ಬಿ., ಪದಾಧಿಕಾರಿಗಳಾದ ವೇದಾಂತ ಮುತ್ತಮ್ಮ, ಕಾರ್ತಿಕ್‌ ಲಕ್ಷಣ್‌, ಸ್ಕಂದ, ಸೃಷ್ಟಿ, ಕಾರ್ತಿಕ್‌ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕೌಶಿಕ್‌ ಜಿ.ಎನ್‌., ಅಕ್ಷಯ್‌ ಕುಮಾರು ಕಾರ್ಯ ಕ್ರಮ ನಿರೂಪಿಸಿದರು.

ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಸಿಎಫ್ಐ ಪ್ರತಿಭಟನೆ
ವಿದ್ಯಾರ್ಥಿ ಪರಿಷತ್‌ನ ಉದ್ಘಾಟನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಆಹ್ವಾನಿಸಿರುವುದನ್ನು ವಿರೋಧಿಸಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿ.ವಿ. ಕ್ಯಾಂಪಸ್‌ನೊಳಗೆ ನುಗ್ಗಲು ಯತ್ನಿಸಿದರು. ಪೊಲೀಸರು ಅವರನ್ನು ಪ್ರವೇಶ ದ್ವಾರದಲ್ಲೇ ತಡೆಹಿಡಿದಿದ್ದು, ಬಳಿಕ ಮುಖ್ಯದ್ವಾರದಲ್ಲೇ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಡುವೆಯೇ ವಿದ್ಯಾರ್ಥಿ ಪರಿಷತ್‌ ಅನ್ನು ಡಾ| ಭಟ್ಟರು ಉದ್ಘಾಟಿಸಿದರು.

ಸಿಎಫ್‌ಐಗೆ ಭಟ್‌ ಧನ್ಯವಾದ!
ಉದ್ಘಾಟನೆಯ ಬಳಿಕ ಡಾ| ಭಟ್ಟರು ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ವಿರುದ್ಧ ಪ್ರತಿಭಟನೆ ಮಾಡಿದ ಸಿಎಫ್‌ಐ ಕಾರ್ಯಕರ್ತರಿಗೆ ಧನ್ಯವಾದ. ಯಾರು ದೇಶಕ್ಕೋಸ್ಕರ ಕೆಲಸ ಮಾಡುತ್ತಾರೋ ಅವರು ಆ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಾರೆ. ವಿರೋಧಿಸುವವರು ವಿರೋಧಿಸುತ್ತಾ ಹೋಗುತ್ತಾರೆ. ಈ ದೇಶದಲ್ಲಿ ಬದುಕಿದ್ದರೆ, ಬದುಕ ಬೇಕೆಂದು ಇದ್ದರೆ, ಸಾಮರಸ್ಯ ಬೇಕಾ ಗಿದ್ದರೆ ದೇಶಕ್ಕೋಸ್ಕರ ಬದುಕಿ. ಇಲ್ಲದಿದ್ದರೆ ಎಲ್ಲಿ ಬೇಕಾದರೂ ಹೋಗಿ ಸಮಸ್ಯೆ ಇಲ್ಲ ಎಂದರು.

ಜತೆಗೂಡಿ ಬದುಕಿ
ನನ್ನ ಭಾಷಣದಲ್ಲಿ ನಾನು ಕೋಮು ದ್ವೇಷ ಹರಡಿಸಿಲ್ಲ. ಹಿಂದೂ ಅನ್ನೋದು ಕೋಮುವಾ? ಅದು ಈ ದೇಶದ ಹೆಸರು. ಭಾರತದ ಭಾರತೀಯರು ಹಿಂದೂಗಳು, ಕೋಮು ಎನ್ನುವ ಪ್ರಶ್ನೆ ಇಲ್ಲ. ಇಲ್ಲಿ ಹಿಂದೂಗಳ ಜತೆಗೆ
ಎಲ್ಲರೂ ಬದುಕುವ ಪ್ರಯತ್ನ ಮಾಡಿ. ಜಗತ್ತಿನಲ್ಲಿ ದೊಡ್ಡ ಸೆಕ್ಯೂ ಲರ್‌ಗಳು ಹಿಂದೂಗಳೇ. ನಾವು ಸತ್ಯ ಮಾತನಾಡುತ್ತೇವೆ, ಅಪ ರಾಧಿ ಗಳನ್ನು ವಿ.ವಿ.ಗೆ ಕರೆಸುವ ವಿಚಾರದಲ್ಲಿಪ್ರತಿಕ್ರಿಯಿಸಿದ ಅವರು ಕೇಸು ಯಾರ ಮೇಲೆ ಯಾರು ಬೇಕಾ ದರೂ ಹಾಕಬಹುದು. ಇದರಲ್ಲಿ ಕೇಸು ಬಿದ್ದರೆ ಆರೋಪಿ ಮಾತ್ರ, ಅಪರಾಧಿ ಅಲ್ಲ. ನನ್ನ ಮೇಲೆ ನೂರಕ್ಕೂ ಮಿಕ್ಕಿ ಕೇಸ್‌ ಇದೆ. ಮೋದಿ, ಅಮಿತ್‌ ಶಾ ಮೇಲೂ ಕೇಸ್‌ ಇದೆ, ಅವರು ಅಪರಾಧಿಗಳಾ? ನನಗೆ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ ಎಂದರು.

ನೈಜ ಹೀರೋಗಳ ಬಗ್ಗೆ ಮಕ್ಕಳಿಗೆ ತಿಳಿಸೋಣ
ನಮ್ಮ ಪಠ್ಯಕ್ರಮದಲ್ಲಿ ಅಕºರ್‌, ಔರಂಗಜೇಬ್‌ನಂತವರನ್ನು ಹೀರೋ ಗಳಾಗಿ ಚಿತ್ರಿಸಿದ್ದೇವೆ ಆದರೆ ನಿಜವಾದ ಹೀರೋಗಳು ಶಿವಾಜಿ ರಾಣಾಪ್ರತಾಪ್‌ ಸಿಂಹನಂತವರು ಆಂತವರ ವಿಚಾರ ಗಳನ್ನು ಪಠ್ಯಕ್ರಮದಲ್ಲಿ ಅಳವಡಿಸದೆ ದೇಶವಿರೋ ಗಳ ಚಿತ್ರಣವನ್ನೇ ಇಲ್ಲಿ ಕಲಿಸಲಾಗುತ್ತಿದೆ. ಜನರಿಗೆ ನಿಜವಾದ ಇತಿಹಾಸವನ್ನು ತಿಳಿಸುವ ಕಾರ್ಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಳವಡಿಸಲಾಗಿದೆ ಎಂದು ಡಾ| ಭಟ್‌ ಹೇಳಿದರು.

 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.