ವಿದ್ಯಾರ್ಥಿಗಳಿಂದ ಆಕರ್ಷಕ ಪ್ರತಿಭಾ ಪ್ರದರ್ಶನ


Team Udayavani, Dec 11, 2018, 1:50 AM IST

kalladka-school-10-12.jpg

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ ಡಿ. 9ರಂದು ರಾತ್ರಿ ಸಂಪನ್ನಗೊಂಡಿತು. ಕ್ರೀಡೋತ್ಸವದಲ್ಲಿ 3,316ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನ ನೀಡಿದರು. ಪೋಕ್ರಾನ್‌ ಅಣು ಪರೀಕ್ಷೆ, ಸಂಸತ್ತಿನಲ್ಲಿ ವಾಜಪೇಯಿ ಭಾಷಣ, ಕೇರಳ ಸರಕಾರ ಮತ್ತು ಅಯ್ಯಪ್ಪ ಭಕ್ತರ ನಡುವಿನ ಸಂಘರ್ಷ ಮತ್ತು ಸರದಾರ್‌ ವಲ್ಲಭಭಾಯಿ ಪಟೇಲ್‌ ಸ್ಮರಣಿಯ ಸನ್ನಿವೇಶಗಳು ಪ್ರಸ್ತುತಗೊಂಡವು. ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಸಹಿತ ಹಲವು ಅತಿಥಿಗಳ ಸಮಕ್ಷಮ ಕಲ್ಲಡ್ಕ ಡಾ| ಪ್ರಭಾಕರ ಭಟ್‌ ನಿರ್ದೇಶನದಲ್ಲಿ, ಸಂಚಾಲಕ ವಸಂತ ಮಾಧವ, ಅಧ್ಯಕ್ಷ ನಾರಾಯಣ ಸೋಮಾಯಾಜಿ, ಸಹ ಸಂಚಾಲಕ ರಮೇಶ್‌ ಮಾರ್ಗದರ್ಶನದಲ್ಲಿ ಸುಮಾರು 19ಕ್ಕೂ ಅಧಿಕ ಬಗೆಯ ವಿವಿಧ ಕಸರತ್ತು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಕಾಲೇಜು ವಿದ್ಯಾರ್ಥಿಗಳು ನೀಲಿ, ಕೆಂಪು ಬೆಳಕಿನ ಎಲ್‌ಇಡಿ ದಂಡ ಗಳೊಂದಿಗೆ ಪ್ರದರ್ಶನ, ಕನ್ನಡ, ತುಳು, ಹಿಂದಿ, ಭಾಷಾ ಭಜನೆಗೆ ನೃತ್ಯ, ಮಲ್ಲಕಂಬ ಪ್ರದರ್ಶನ, ಬಾಟಲಿಗಳ ಮೇಲೆ ಜೋಡಿಸಿದ ತಿರುಗುವ ಮಲ್ಲಕಂಬಗಳಲ್ಲಿ ವಿಶೇಷ ಯೋಗಾಸನ ಪ್ರದರ್ಶನ, ಘೋಷ್‌ ಟಿಕ್‌ ಟಿಕ್‌ ಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳಿಂದ ಜಾತ್ರೆ ವೈಭವ ಪ್ರದರ್ಶನ, ದ್ವಿಚಕ್ರ, ಏಕಚಕ್ರ ವಾಹನಗಳ ಕಸರತ್ತು, ಬೈಕ್‌ಗಳಲ್ಲಿ ಸಾಹಸಮಯ ಸವಾರಿ, ಬೆಂಚಿನ ಮೇಲೆ ಏಕಚಕ್ರದಲ್ಲಿ ಸವಾರಿ, ಬಾಲಕಿಯರು ಟ್ಯೂಬ್‌ ಲೈಟ್‌ ಒಡೆಯುವ ಸನ್ನಿವೇಶ ರೋಮಾಂಚನಕಾರಿಯಾಗಿದ್ದವು. ಬೆಂಕಿ ಚಕ್ರದೊಳಗೆ ಧುಮುಕುವ ಸನ್ನಿವೇಶ, ಕೇರಳದ ಚೆಂಡೆ ವಾದನ, ಚಕ್ರ ತಾಳ ಮೆರುಗು, ಕಾಲ್ಚಕ್ರ ಪ್ರದರ್ಶನ, ಕೂಪಿಕಾ ಸಮತೋಲನ ಏಕಾಗ್ರತೆಗೆ ನಿದರ್ಶನ ನೀಡಿದವು. ಪ್ರೌಢಶಾಲೆಯ 935 ವಿದ್ಯಾರ್ಥಿಗಳು ಮೈದಾನದ ಹೊನಲು ಬೆಳಕಿನಲ್ಲಿ ಲಯಬದ್ಧವಾಗಿ ಕುಣಿದು ನಿರ್ಮಿಸುವ ರಂಗೋಲಿ ಚಿತ್ತಾರ, ಸಾಲುಸಾಲಾಗಿ ಕುಳಿತು ಮಾಡುವ ಸಾಮೂಹಿಕ ರಚನೆಗಳು ಗಮನ ಸೆಳೆದವು.


ಪಥಸಂಚಲನ, ನೃತ್ಯ ವೈಭವ

ಸಮವಸ್ತ್ರಧಾರಿ ಕಾಲೇಜು ವಿದ್ಯಾರ್ಥಿಗಳು ಘೋಷ್‌ ತಾಳಕ್ಕೆ ಸರಿಯಾಗಿ ಹೆಜ್ಜೆ ಹಾಕಿ ಆಕರ್ಷಕವಾಗಿ ಪಥಸಂಚಲನ ನಡೆಸಿದರು. ಶ್ರೀರಾಮ ಶಿಶು ಮಂದಿರ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ಸಂಸ್ಥೆಯ ಬಾಲಕ, ಬಾಲಕಿಯರಿಂದ ಘೋಷ್‌ ಪ್ರದರ್ಶನ ನಡೆಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಜಡೆ ಕೋಲಾಟ ವಿಶೇಷ ನೃತ್ಯ ವೈಭವವಿತ್ತು. ಭಾರತೀಯ ನಿಶ್ಯಸ್ತ್ರ ಯುದ್ಧ ಕಲೆ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೋರಾಟದ ಮನೋಭಾವ ಬೆಳೆಸುವ ನಿಯುದ್ಧ, ವಿದ್ಯಾರ್ಥಿನಿಯರಿಂದ ಕರಾಟೆ ಪ್ರಯೋಗ ಆಕರ್ಷಣೀಯವಾಗಿತ್ತು. ಯೋಗಾಸನ, ರಥ, ಶಿವಲಿಂಗ, ತಾವರೆ, ರಚನೆಗಳೊಂದಿಗೆ ಪ್ರಾಥಮಿಕ ವಿದ್ಯಾರ್ಥಿಗಳಿಂದ ವಿಶೇಷ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.