ಕಲ್ಲಾಜೆ ಸಂಪರ್ಕ ರಸ್ತೆ ಕುಸಿತ : ಪರ್ಯಾಯ ವ್ಯವಸ್ಥೆಗೆ ಸೂಚನೆ


Team Udayavani, Jul 2, 2018, 2:25 AM IST

kallaje-1-7.jpg

ಬೆಳ್ತಂಗಡಿ: ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಕಲ್ಲಾಜೆ ಶಾಲೆ ಸಂಪರ್ಕ ರಸ್ತೆಯ ಕಡಂಬಿಲದಲ್ಲಿ ರಸ್ತೆ ಬದಿ ಮಣ್ಣು ಕುಸಿತದ ಪರಿಣಾಮ ಸಂಪರ್ಕ ಕಡಿತದ ಭೀತಿ ಎದುರಾಗಿದ್ದು, ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಅನಿವಾರ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ರವಿವಾರ ಶಾಸಕ ಹರೀಶ್‌ ಪೂಂಜ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರ್ಯಾಯ ವ್ಯವಸ್ಥೆಗೆ ಗ್ರಾ.ಪಂ.ಗೆ ಸೂಚನೆ ನೀಡಿದ್ದಾರೆ. ಪ್ರಸ್ತುತ ರಸ್ತೆಯಲ್ಲಿ ದೊಡ್ಡ ವಾಹನಗಳ ಸಂಚಾರ ಕಷ್ಟಕರವಾಗಿದ್ದು, ಸಣ್ಣ ಪುಟ್ಟ ವಾಹನಗಳು ಚಲಿಸುತ್ತಿವೆ. ಆದರೆ ರಸ್ತೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ಎಚ್ಚರಿಕೆ ಅಗತ್ಯವಾಗಿದೆ. ಈ ಭಾಗದಲ್ಲಿ ಸುಮಾರು 300ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಸಂಪರ್ಕಕ್ಕೆ ಇರುವ ಏಕೈಕ ರಸ್ತೆ ಇದಾಗಿದೆ. ಕಲ್ಲಾಜೆ ಕ್ರಾಸ್‌ನಿಂದ ಈ ರಸ್ತೆ ಸುಮಾರು 3 ಕಿ.ಮೀ. ಉದ್ದವಿದ್ದು, ಶಾಲೆ, ಅಂಗನವಾಡಿಯನ್ನು ಸಂಪರ್ಕಿಸುತ್ತಿದೆ. ಸ್ಥಳಕ್ಕೆ ಜಿ.ಪಂ. ಸಹಾಯಕ ಎಂಜಿನಿಯರ್‌ ಮೊಹಮ್ಮದ್‌ ಅವರು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.

ಪರ್ಯಾಯ ವ್ಯವಸ್ಥೆ ಏನು?
ಪ್ರಸ್ತುತ ಇರುವ ರಸ್ತೆಯನ್ನು ಉಳಿಸಬೇಕಾದರೆ ಕುಸಿದಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕಿದೆ. ಆದರೆ ಪ್ರಸ್ತುತ ಮಳೆಗಾಲದಲ್ಲಿ ಅದು ಕಷ್ಟಸಾಧ್ಯವಾಗಿದ್ದು, ಜತೆಗೆ ಸಾಕಷ್ಟು ಪ್ರಮಾಣದ ಅನುದಾನದ ಅಗತ್ಯವೂ ಇದೆ. ಹೀಗಾಗಿ ತಾತ್ಕಾಲಿಕ ವ್ಯವಸ್ಥೆಯಾಗಿ ಹತ್ತಿರದ ಗುಡ್ಡದ ಭಾಗದಲ್ಲಿ ಮಣ್ಣು ತೆಗೆದು ಪರ್ಯಾಯ ವ್ಯವಸ್ಥೆ ಮಾಡುವಂತೆ ಶಾಸಕರು ಸೂಚನೆ ನೀಡಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಶಾಸಕರು ಗ್ರಾ.ಪಂ. ಅಧ್ಯಕ್ಷೆ ನೇತ್ರಾವತಿ ಹಾಗೂ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕ ಅವರಿಗೆ ಸಲಹೆ ನೀಡಿದ್ದಾರೆ. ಗ್ರಾ.ಪಂ. ಸದಸ್ಯ ಸಂಜೀವ ಗೌಡ, ಮಾಜಿ ಸದಸ್ಯರಾದ ವೆಂಕಪ್ಪ ಕೋಟ್ಯಾನ್‌, ರಮೇಶ್‌ ಕೆಂಗಾಜೆ, ಉಮೇಶ್‌ ಕೊಪ್ಪದ ಕೋಡಿ, ಸ್ಥಳೀಯರಾದ ಆನಂದ ಅಡೀಲ್‌, ಯೋಗೀಶ್‌ ಕೊಪ್ಪದಕೋಡಿ, ಅಣ್ಣಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಜತೆಗೆ ಸುಮಾರು 50 ಮಂದಿ ಗ್ರಾಮಸ್ಥರು ಕೂಡ ಶಾಸಕರ ಪರಿಶೀಲನೆ ವೇಳೆ ಭಾಗವಹಿಸಿದ್ದರು.

ಗಣಿಗಾರಿಕೆ ಕಾರಣ?
ಕಲ್ಲಾಜೆ ರಸ್ತೆ ಕುಸಿಯುವುದಕ್ಕೆ ರಸ್ತೆಯ ಬದಿಯ ಮಣ್ಣು ತೆಗೆದಿರುವುದು ಹಾಗೂ ಕಲ್ಲು ಗಣಿಗಾರಿಕೆಯ ಘನ ವಾಹನ ಸಂಚಾರವೇ ಪ್ರಮುಖ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘನ ವಾಹನ ಸಂಚಾರದಿಂದ ರಸ್ತೆಯ ಮೇಲೆ ಒತ್ತಡ ಬಿದ್ದಿದೆ. ಜತೆಗೆ ಮಳೆಗಾಲದಲ್ಲಿಯೂ ಘನ ವಾಹನ ಸಂಚಾರದಿಂದ ಈ ರೀತಿ ಕುಸಿದಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದರೂ ಯಾವುದೇ ಕ್ರಮ ಜರಗಿಸಿಲ್ಲ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಪ್ರಸ್ತುತ ರಸ್ತೆಯ ಆರಂಭದಲ್ಲಿ ಘನ ವಾಹನಗಳಿಗೆ ಪ್ರವೇಶವಿಲ್ಲ ಎಂದು ಫಲಕ ಹಾಕಲಾಗಿದ್ದು, ಅಪಾಯದ ಹಿನ್ನೆಲೆಯಲ್ಲಿ ಕುಸಿದಿರುವ ಸ್ಥಳಕ್ಕೆ ತಂತಿಯನ್ನು ಕಟ್ಟಲಾಗಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.