ನೆರೆ ಬಳಿಕ ಗುಡ್ಡ ಕುಸಿತದ ಭೀತಿಯಲ್ಲಿ ಕಲ್ಮಕಾರು ಜನತೆ


Team Udayavani, Aug 22, 2018, 3:35 AM IST

bridge-21-8.jpg

ಮಂಗಳೂರು: ಬಾಯ್ದೆರೆದು ನಿಂತ ಬೃಹತ್‌ ಗುಡ್ಡ. ತುಂಡಾಗಿರುವ ಸೇತುವೆಗಳು, ಹರಿಯುವ ಹಳ್ಳಕೊಳ್ಳ ದಾಟುವುದಕ್ಕೆ ಪರದಾಟ. ಇದು ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡಿರುವ ಸುಳ್ಯ ತಾ. ಕಲ್ಮಕಾರಿನ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳ ಅರಣ್ಯ ರೋದನ! ಪ್ರವಾಹದಿಂದ ತತ್ತರಿಸಿರುವ ಗ್ರಾಮದ ಅವಲೋಕನಕ್ಕೆ ಪತ್ರಕರ್ತರು ತೆರಳಿದಾಗ ಕಂಡ ಚಿತ್ರಣವಿದು. ಗಾಳಿಬೀಡು ಕಡಕಮಲೆ ಎಸ್ಟೇಟ್‌ ವ್ಯಾಪ್ತಿಯಲ್ಲಿರುವ ಬೆಟ್ಟ ಕುಸಿತಗೊಂಡು ಟನ್‌ಗಟ್ಟಲೆ ಮರಗಳು ಕಲ್ಮಕಾರಿನಲ್ಲಿರುವ ತೋಡುಗಳಲ್ಲಿ ನೀರಿನೊಂದಿಗೆ ನುಗ್ಗಿವೆ. ಇದರಿಂದ ಸೇತುವೆಗಳು ಕೊಚ್ಚಿ ಹೋಗಿವೆ.

ರಾತ್ರಿ ಮನೆ ತೊರೆಯುತ್ತೇವೆ
ಕಲ್ಮಕಾರಿಗೆ ಹೊಂದಿಕೊಂಡಿರುವ ಬೆಟ್ಟ ಬಾಯ್ದೆರೆದು ನಿಂತಿದೆ. ಯಾವಾಗ ಕುಸಿತಕ್ಕೊಳಗಾಗುವುದೋ ಹೇಳಲಾಗದು. ಭೀತಿಯಿಂದ 14 ಮಲೆಕುಡಿಯ ಕುಟುಂಬಗಳು ಊರನ್ನೇ ಬಿಟ್ಟು ಹೋಗಿವೆ. ಮೆಂಟೆಕಜೆ, ಕೊಪ್ಪಡ್ಕ, ಅಂಜನಕಜೆ, ಕಾಜಿಮಡ್ಕ, ಗುಳಿಕಾನ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಮನೆಯವರು ರಾತ್ರಿ ಹೊತ್ತಲ್ಲಿ ತಮ್ಮ ಮನೆಗಳನ್ನೇ ತೊರೆಯುತ್ತಾರೆ. ಸಂಬಂಧಿಕರ ಮನೆಗಳಲ್ಲಿ ಉಳಿದುಕೊಂಡು ಬೆಳಗ್ಗೆ ಮನೆಗಳಿಗೆ ವಾಪಸಾಗುತ್ತಾರೆ.


ತುಂಡಾದ ಆರು ಸೇತುವೆಗಳು

ತೋಡು ನೀರಿನೊಂದಿಗೆ ಟನ್‌ಗಟ್ಟಲೆ ಮರ ನುಗ್ಗಿದ ಪರಿಣಾಮ ಕಾಜಿಮಡ್ಕ, ಯಾಳದಾಳು, ಪಡ್ಪು, ಕಲ್ಮಕಾರು, ಬಾಳೆಬೈಲು, ಕಡಕಮಲ್‌ ಎಸ್ಟೇಟ್‌ ಸಂಪರ್ಕ ಕಲ್ಪಿಸುವ ಸೇತುವೆಗಳು ತುಂಡಾಗಿವೆ. ಇಲ್ಲಿ ಅಡಿಕೆ ಮರ ಜೋಡಿಸಿ ಕಾಲು ಸಂಕ ನಿರ್ಮಿಸಿದ್ದಾರೆ.  ಸಹಾಯಕ ಆಯಕ್ತರು ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ. ಆದರೆ ಮಳೆಗಾಲ ಮುಗಿವಲ್ಲಿವರೆಗೆ ಭೀತಿ ಇದ್ದಿದ್ದೇ ಎನ್ನುತ್ತಾರೆ ಸ್ಥಳೀಯರು.

ಕಲ್ಲುಕೋರೆಗಳಿಂದ ಸಮಸ್ಯೆ?
ಕೊಪ್ಪಡ್ಕ ಆಸುಪಾಸಿನ ಕೆಲವು ಮನೆಗಳಿಗೆ ಗುಡ್ಡ ಕುಸಿತದಿಂದ ಹಾನಿಯಾಗಿರುವುದಕ್ಕೆ ಮನೆಯ ಮೇಲ್ಭಾಗದ ಗುಡ್ಡದಲ್ಲಿ ಕಲ್ಲುಕೋರೆ ಮಾಡಿರುವುದೇ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತ ಪಡಿಸಿದ್ದಾರೆ. ಅಲ್ಲಿನ ಗುಂಡಿಗಳನ್ನು ಹಾಗೇ ಬಿಡಲಾಗಿದ್ದು ಅವುಗಳಲ್ಲಿ ನೀರು ತುಂಬಿ ರಭಸದಿಂದ ತಗ್ಗು ಪ್ರದೇಶಗಳಿಗೆ ನುಗ್ಗುತ್ತವೆ. ಇದರಿಂದ ಮಣ್ಣು ಮೆದುಗೊಂಡು ಕೆಳಭಾಗದಲ್ಲಿರುವ ಮನೆಯ ಮೇಲೆ ಕುಸಿತ ಉಂಟಾಗುತ್ತದೆ ಎಂಬ ಅನುಮಾನ ಸ್ಥಳೀಯ ನಿವಾಸಿಗಳದ್ದಾಗಿದೆ.

27 ಕಿ.ಮೀ. ದೂರಕ್ಕೆ 80 ಕಿ.ಮೀ. ಕ್ರಮಿಸಬೇಕು!
ಕಲ್ಮಕಾರು ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗವಾಗಿದೆ. ಇಲ್ಲಿಂದ ಮಡಿಕೇರಿಗೆ ಕೇವಲ ಸುಮಾರು ಇಪ್ಪತ್ತೇಳು ಕಿ.ಮೀ. ದೂರ. ಆದರೆ ಅವರು ಮಡಿಕೇರಿಗೆ ಸುಳ್ಯ – ಸಂಪಾಜೆಯಾಗಿಯೇ 80 ಕಿ.ಮೀ. ಕ್ರಮಿಸಿ ಹೋಗಬೇಕು. ಕಲ್ಮಕಾರು ಮೂಲಕ ಮಡಿಕೇರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹಿಸುತ್ತಲೇ ಇದ್ದರೂ ಅರಣ್ಯ ಇಲಾಖೆ ಅಪಸ್ವರದಿಂದ ಬೇಡಿಕೆ ಈಡೇರಿಲ್ಲ ಎನ್ನುತ್ತಾರೆ ಸ್ಥಳೀಯರು.

— ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.