ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಅವಮಾನ: ಸಂಘಟಕರ ಕೃತ್ಯಕ್ಕೆ ತೀವ್ರ ಖಂಡನೆ
Team Udayavani, Jan 6, 2023, 6:16 AM IST
ಸಾಂದರ್ಭಿಕ ಚಿತ್ರ
ಕುಂಬಳೆ: ಕಲ್ಲಿಕೋಟೆಯಲ್ಲಿನ ರಾಜ್ಯ ಮಟ್ಟದ ಶಾಲಾ ಕಲೋತ್ಸವದ ಸಂದರ್ಭ ಯಕ್ಷಗಾನ ಕಲೆಯನ್ನು ಸಂಘಟಕರೇ ಅವಮಾನಿಸಿದ ಘಟನೆ ಗುರುವಾರ ನಡೆದಿದೆ.
ಪ್ರದರ್ಶನ ಪೂರ್ವದಲ್ಲಿ ನಡೆಯುವ ಚೌಕಿ ಪೂಜೆ ಸಂದರ್ಭ ನುಗ್ಗಿ ಬಂದ ಸಂಘಟಕರು ಗಣಪತಿ ವಿಗ್ರಹದ ಮುಂದೆ ಹಚ್ಚಿದ್ದ ದೀಪವನ್ನು ಬಲವಂತವಾಗಿ ನಂದಿಸಿದರು.
ಈ ಸಂದರ್ಭ ಮಾಧ್ಯಮದವರನ್ನು ತಡೆಹಿಡಿದಿದ್ದರಿಂದ ಕೃತ್ಯದ ಚಿತ್ರೀಕರಣಕ್ಕೆ ಅವಕಾಶವಾಗಿರಲಿಲ್ಲ.ಕೃತ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಲಾಯಿತು. ಕೊನೆಗೆ ಪೊಲೀಸರು ಕಲಾವಿದರ ಮನವೊಲಿಸಿ ವೇದಿಕೆಯಲ್ಲಿ ಪ್ರದರ್ಶನ ನೀಡುವಂತೆ ಮಾಡಿದರು.
ದೇವರು ಕ್ಷಮಿಸಲಾರ
ಸಂಘಟಕರ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ನನ್ನ 22 ವರ್ಷಗಳ ಕಲಾ ಜೀವನದಲ್ಲಿ ಇಂತಹ ಅನುಭವ ಪ್ರಥಮ ಎಂದು ಯಕ್ಷಗಾನ ಗುರು ಮಾಧವ ನೆಟ್ಟಣಿಗೆ ಪ್ರತಿಕ್ರಿಯಿಸಿದರಲ್ಲದೆ, ಸಂಘಟನ ಸಮಿತಿಯವರು ಬಹಿರಂಗ ಕ್ಷಮೆ ಯಾಚಿಸದೆ ವೇದಿಕೆ ಏರುವುದಿಲ್ಲ ಎಂದು ಪ್ರತಿಭಟಿಸಿದರು. “ನಾವು ಅವರನ್ನು ಕ್ಷಮಿಸಿದರೂ ದೇವರು ಕ್ಷಮಿಸಲಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ