ಕಂಬಳ 24 ತಾಸಿನೊಳಗೆ ಮುಕ್ತಾಯ ನಿಯಮ ಕಟ್ಟುನಿಟ್ಟಿಗೆ ಚಿಂತನೆ

ಅವಧಿ ಮೀರಿದರೆ ಸಮಸ್ಯೆ ಕಾನೂನು ತೊಡಕಿನ ಹಿನ್ನೆಲೆ

Team Udayavani, Mar 4, 2020, 7:30 AM IST

kambala

ಮಂಗಳೂರು: ಕಂಬಳವನ್ನು 24 ತಾಸಿನೊಳಗೆ ಮುಕ್ತಾಯ ಗೊಳಿಸಬೇಕು ಎನ್ನುವ ಸರಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ಕಂಬಳ ಸಮಿತಿ ತೀರ್ಮಾನಿಸಿದೆ.

ಫೆ. 29ರಂದು ಆಯೋಜನೆ ಗೊಂಡಿದ್ದ ಉಪ್ಪಿನಂಗಡಿ ಕಂಬಳ ಮತ್ತು ಇದಕ್ಕೂ ಮುನ್ನ ಒಂದೆರಡು ಕಂಬಳಗಳು ನಿಗದಿಗಿಂತ ಹೆಚ್ಚು ಕಾಲ ನಡೆದಿವೆ ಎನ್ನಲಾಗಿದೆ. ಪ್ರಾಣಿ ಹಿಂಸೆ ತಡೆ (ಕರ್ನಾಟಕ ತಿದ್ದುಪಡಿ) ಮಸೂದೆಯ ಮೂಲಕ ಕಂಬಳ ಆಯೋಜನೆಗೆ ಅನುವು ಮಾಡಿಕೊಟ್ಟ ಸಂದರ್ಭದಲ್ಲಿ ಸರಕಾರವು ಕೆಲವು ನಿಯಮಗಳನ್ನು ಪಾಲಿಸುವಂತೆ ಸೂಚಿಸಿತ್ತು. ಅವುಗಳಲ್ಲಿ ಕಂಬಳವನ್ನು 24 ತಾಸುಗಳೊಳಗೆ ಮುಕ್ತಾಯಗೊಳಿಸಬೇಕು ಮತ್ತು ಬಿಸಿಲಿನಲ್ಲಿ ಕೋಣಗಳನ್ನು ಓಡಿಸಬಾ ರದು ಎಂಬುದು ಪ್ರಮುಖ.

ಮಸೂದೆ ವಿರುದ್ಧ ಪೆಟಾ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿಯಲ್ಲಿ ಕಂಬಳವನ್ನು ನಿಗದಿತ ಅವಧಿಯೊಳಗೆ ಮುಗಿಸುವುದಿಲ್ಲ; ಕೋಣಗಳನ್ನು ಬಿಸಿಲಿನಲ್ಲಿ ಓಡಿಸಲಾಗುತ್ತಿದೆ, ಹಿಂಸಿಸಲಾಗುತ್ತಿದೆ ಎಂಬ ಅಂಶಗಳನ್ನು ಉಲ್ಲೇಖೀಸಿದೆ. ಅರ್ಜಿ ಪ್ರಸ್ತುತ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠದಲ್ಲಿದೆ. ಹೀಗಾಗಿ ನಿಯಮ ಪಾಲನೆಯಾ ಗುವಂತೆ ಮತ್ತು ಗೊಂದಲಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಲು ಸಮಿತಿ ನಿರ್ಧರಿಸಿದೆ.

ವಿಳಂಬ ಮುಂದುವರಿದರೆ ಕಂಬಳಕ್ಕೆ ತೊಡಕಾಗುವ ಸಾಧ್ಯತೆ ಮನಗಂಡಿ ರುವ ಕಂಬಳ ಸಮಿತಿಯು ಈ ಹಿಂದೆ ಭಾಸ್ಕರ ಎಸ್‌. ಕೋಟ್ಯಾನ್‌ ಸಮಿತಿಯ ಅಧ್ಯಕ್ಷರಾಗಿದ್ದ ವೇಳೆ ರೂಪಿಸಿದ್ದ ನಿಯಮಗಳನ್ನು ಮುಂದಿನ ಋತುವಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಿದೆ.

ನಿಯಮಗಳು
ಭಾಸ್ಕರ ಎಸ್‌. ಕೋಟ್ಯಾನ್‌ ಅಧ್ಯಕ್ಷತೆ, ಸುರೇಶ್‌ ಪೂಜಾರಿ ಅವರ ಕಾರ್ಯದರ್ಶಿತ್ವ ಮತ್ತು ಸೀತಾರಾಮ ಶೆಟ್ಟಿ ಅವರ ಸಂಚಾಲಕತ್ವದ ವೇಳೆ 2014 ಫೆ. 27ರಂದು ಮೂಡುಬಿದಿರೆಯಲ್ಲಿ ಕರೆದಿದ್ದ ವಿಶೇಷ ಸಭೆಯಲ್ಲಿ ಕಂಬಳ ಸಮಿತಿ ಸದಸ್ಯರು ಕೆಲವು ನಿರ್ಣಯಗಳನ್ನು ಅಂಗೀಕರಿಸಿದ್ದಾರೆ. ಬೆಳಗ್ಗೆ 9 ಗಂಟೆಯೊಳಗೆ ಎಲ್ಲ ಕೋಣಗಳು ಕಂಬಳ ತಾಣಕ್ಕೆ ಬರಬೇಕು, 10 ಗಂಟೆಗೆ ಕಂಬಳ ಕರೆಗೆ ಇಳಿಯಬೇಕು, ಗಂತಿನಲ್ಲಿ ಪ್ರತಿಯೊಂದು ಕೋಣಕ್ಕೆ ಓಟಕ್ಕೆ ಸಮಯಮಿತಿ, ಪ್ರತೀ ವಿಭಾಗದ ಕೋಣಗಳು ಕರೆಗೆ ಇಳಿಯಲು ನಿರ್ದಿಷ್ಟ ವೇಳಾಪಟ್ಟಿ ನಿಗದಿ ಮುಂತಾದ ಅಂಶಗಳು ನಿರ್ಣಯದಲ್ಲಿವೆ.

ಸಭಾ ಕಾರ್ಯಕ್ರಮದ ಅಡಚಣೆ‌
ವಿಳಂಬ ಪ್ರಾರಂಭ ಒಂದೆಡೆಯಾದರೆ ಸುದೀರ್ಘ‌ ಸಭೆಯಿಂದಾಗಿ ನಿಗದಿತ ಅವಧಿಯೊಳಗೆ ಕಂಬಳ ಮುಗಿಸಲು ಅಡಚಣೆಯಾಗುತ್ತಿದೆ. ಸಭೆಯನ್ನು 30 ನಿಮಿಷದಿಂದ 1 ತಾಸಿಗೆ ಸೀಮಿತ ಗೊಳಿಸುವುದು ಉತ್ತಮ ಎಂಬ ಅಭಿಪ್ರಾಯ ಇದೆ.

ಕಂಬಳವನ್ನು 24 ತಾಸುಗಳೊಳಗೆ ಮುಕ್ತಾಯಗೊಳಿಸಲು ಈ ಹಿಂದೆ ಕಂಬಳ ಸಮಿತಿ ಅಂಗೀಕರಿಸಿದ್ದ ನಿರ್ಣಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ. ಗಂತಿನಲ್ಲಿ ಕೋಣಗಳನ್ನು ಬಿಡುವ ಮತ್ತು ಮಂಜೊಟ್ಟಿಯಲ್ಲಿ ಕೋಣಗಳು ತಲುಪುವ ಸಮಯ ದಾಖಲಾತಿಗೂ ಈಗಿರುವ ವ್ಯವಸ್ಥೆಯನ್ನು ಉತ್ತಮಪಡಿಸುವ ಕ್ರಮ ಕೈಗೊಳ್ಳಲು ಯೋಜಿಸಲಾಗಿದೆ.
– ಪಿ.ಆರ್‌. ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷರು

ನಾನು ಅಧ್ಯಕ್ಷನಾಗಿದ್ದ ವೇಳೆ ವಿಶೇಷ ಸಭೆ ನಡೆಸಿ ನಿರ್ಣಯಗಳನ್ನು ಅಂಗೀಕರಿಸಲಾಗಿತ್ತು. ಕೋಣಗಳ ಯಜಮಾನರು, ಆಯೋಜಕರು, ತೀರ್ಪು ಗಾರರು, ಕೋಣ ಬಿಡಿಸುವವರ ಸಹಕಾರದಿಂದ ಇದು ಯಶಸ್ವಿಯಾಗಿತ್ತು. ಕಂಬಳ 16ರಿಂದ 18 ತಾಸುಗಳೊಳಗೆ ಮುಕ್ತಾಯಗೊಂಡಿರುವ ನಿದರ್ಶನಗಳಿವೆ.
– ಭಾಸ್ಕರ ಎಸ್‌. ಕೋಟ್ಯಾನ್‌ ಇರ್ವತ್ತೂರು, ಕಂಬಳ ಸಮಿತಿ ಮಾಜಿ ಅಧ್ಯಕ್ಷರು

– ಕೇಶವ ಕುಂದರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.