ಕಂಬಳ ಸಾಧಕ ಶ್ರೀನಿವಾಸ್ ಗೌಡರಿಗೆ ಡಾ. ವೀರೇಂದ್ರ ಹೆಗ್ಗಡೆ ಸಮ್ಮಾನ
Team Udayavani, Feb 24, 2020, 12:52 PM IST
ಬೆಳ್ತಂಗಡಿ: ಕಂಬಳ ಓಟಗಾರ ಶ್ರೀನಿವಾಸ್ ಗೌಡ ಅವರು ಸೋಮವಾರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕಂಬಳ ಕ್ರೀಡೆಯಲ್ಲಿ ಸಾಧನೆಗೈಯುವ ಮೂಲಕ ಗ್ರಾಮೀಣ ಕ್ರೀಡೆಯನ್ನು ವಿಶ್ವವ್ಯಾಪಿಯಾಗಿಸಿರುವ ಕುರಿತು ಡಾ. ಹೆಗ್ಗಡೆ ಮಚ್ಚುಗೆ ವ್ಯಕ್ತಪಡಿಸಿದರು.
ಕಂಬಳ ಓಟ ತರಬೇತಿ ಹಿನ್ನಲೆ ಕುರಿತು ಕಂಬಳ ಅಕಾಡೆಮಿ ಸದಸ್ಯ ಗುಣಪಾಲ್ ಜೈನ್ ಕಡಂಬ ವಿವರಿಸಿದರು.
ಕಂಬಳದಲ್ಲಿ ಇನ್ನಷ್ಟು ಸಾಧನೆಗಳು ಹೊರಹೊಮ್ಮಲಿ ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಶುಭಹಾರೈಸಿದರು.
ಈ ವೇಳೆ ಮಾಜಿ ಶಾಸಕ ಅಭಯಚಂದ್ರ ಜೈನ್, ಇರುವೈಲು-ಪಾಣಿಲ ಕೋಣದ ಯಜಮಾನ ಸತೀಶ್ಚಂದ್ರ, ಮಂಗಳೂರು ಎಪಿಎಂಸಿ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಕಲ್ಲಬೆಟ್ಟು ವ್ಯ.ಸೇ. ಸ. ಸಂಘ ನಿರ್ದೇಶಕ ಚಿಂತನ್ ಲೋಬೋ, ಕಂಬಳ ಅಕಾಡೆಮಿ ನಿರ್ದೇಶಕರಾದ ಜ್ವಾಲ ಪ್ರಸಾದ್, ಸುಭಾಶ್ಚಂದ್ರ ಚೌಟ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾ ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು