ಸರಕಾರದ ಬೆಂಬಲ ನಿರೀಕ್ಷೆಯಲ್ಲಿ ಕಂಬಳ ಕ್ರೀಡೆ

ಬಜೆಟ್‌ನಲ್ಲಿ 5 ಕೋ.ರೂ. ಅನುದಾನಕ್ಕೆ ಬೇಡಿಕೆ ಕಂಬಳ ಭವನ ನಿರ್ಮಾಣ ಪ್ರಸ್ತಾವ

Team Udayavani, Mar 2, 2020, 6:16 AM IST

Kambala-Govt

ಮಂಗಳೂರು: ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆ, ಸರಕಾರದಿಂದ ಶಾಸನಬದ್ಧ ಮಾನ್ಯತೆಯನ್ನು ಪಡೆದಿರುವ ಕಂಬಳವು ರಾಜ್ಯ ಸರಕಾರದಿಂದ ಆರ್ಥಿಕ ಬೆಂಬಲ ಮತ್ತು ಕಂಬಳ ಭವನಕ್ಕೆ ಜಾಗದ ನಿರೀಕ್ಷೆಯಲ್ಲಿದೆ.

ಪ್ರಸ್ತುತ ವೇಗದ ಓಟಗಾರರಿಂದಾಗಿಯೂ ಗಮನ ಸೆಳೆದಿರುವ ಕಂಬಳದ ಸಂರಕ್ಷಣೆಗಾಗಿ ಬಜೆಟ್‌ನಲ್ಲಿ 5 ಕೋ.ರೂ. ಅನುದಾನ ಮೀಸಲಿರಿಸಬೇಕು ಎಂದು ಜಿಲ್ಲಾ ಕಂಬಳ ಸಮಿತಿ ಈಗಾಗಲೇ ಸರಕಾರಕ್ಕೆ ಮನವಿ ಸಲ್ಲಿಸಿದೆ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದಾಗ ಕಂಬಳಕ್ಕೆ ಒಂದು ಕೋ.ರೂ. ಅನುದಾನ ನೀಡಲಾಗಿತ್ತು.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡಿನ ಪೈವಳಿಕೆ ಸೇರಿ ಮೂರು ಜಿಲ್ಲೆಗಳಲ್ಲಿ 19 ಕಂಬಳಗಳು ನಡೆಯುತ್ತಿವೆ. ಈ ಜಾನಪದ ಕ್ರೀಡೆಗೆ ಸರಕಾರದ ಆರ್ಥಿಕ ಬೆಂಬಲ ದೊರಕಿದರೆ ಸಹಾಯವಾಗುತ್ತದೆ. ಹೀಗಾಗಿ ಸರಕಾರದಿಂದ ಕನಿಷ್ಠ 5 ಕೋ.ರೂ. ಅನುದಾನವಾದರೂ ದೊರೆಯಬೇಕು. ಮೂಲ ಸೌಲಭ್ಯಗಳ ಅಭಿವೃದ್ಧಿಯ ಜತೆಗೆ ಪ್ರತಿ ಕಂಬಳ ಆಯೋಜನೆಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಇದರಿಂದ ಸಾಧ್ಯವಾಗುತ್ತದೆ ಎಂಬುದಾಗಿ ಸಮಿತಿ ಪ್ರತಿಪಾದಿಸಿದೆ.

ಕಂಬಳ ಆಯೋಜಕರ ಪ್ರಕಾರ ಪ್ರಸ್ತುತ ಪ್ರತಿಯೊಂದು ಕಂಬಳ ಆಯೋಜನೆಗೆ ಸುಮಾರು 10 ಲಕ್ಷ ರೂ. ವೆಚ್ಚ ತಗಲುತ್ತದೆ. ವಿಜೇತ ಕೋಣಗಳಿಗೆ ಪ್ರಥಮ ಬಹುಮಾನವಾಗಿ 1 ಪವನ್‌ ಚಿನ್ನ, ದ್ವಿತೀಯಕ್ಕೆ ಅರ್ಧ ಪವನ್‌ ಚಿನ್ನ ನೀಡಲಾಗುತ್ತದೆ. ಒಂದು ಕಂಬಳದಲ್ಲಿ ಈ ಬಹುಮಾನ ರೂಪದ ಚಿನ್ನ ಸುಮಾರು 10 ಪವನ್‌ ಆಗುತ್ತದೆ. ಜತೆಗೆ ಕರೆ ಸಿದ್ಧಗೊಳಿಸುವುದು, ವಿದ್ಯುತ್‌ ದೀಪದ ವ್ಯವಸ್ಥೆ ಸೇರಿದಂತೆ ಇತರ ವೆಚ್ಚಗಳಿರುತ್ತವೆ. ಇರುವ ಕರೆಯನ್ನು ಸಿದ್ಧಗೊಳಿಸಲು ಕನಿಷ್ಠ 25 ಸಾವಿರ ರೂ., ಹೊಸತು ನಿರ್ಮಾಣಕ್ಕೆ 8ರಿಂದ 10 ಲಕ್ಷ ರೂ. ವರೆಗೆ ವೆಚ್ಚವಾಗುತ್ತದೆ.

ಕಂಬಳ ಭವನ
ಕಂಬಳಕ್ಕೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಕಂಬಳ ಭವನ ನಿರ್ಮಿಸಲು ಸ್ಥಳ ನೀಡುವಂತೆ ಕಂಬಳ ಸಮಿತಿ ಸರಕಾರಕ್ಕೆ ಮನವಿ ಮಾಡಿದೆ. ಪಿಲಿಕುಳದಲ್ಲಿ ಸರಕಾರಿ ಕಂಬಳ ಆಯೋಜಿಸಲು ನಿರ್ಮಿಸಿರುವ ಕರೆ ಇದೆ. ಪಕ್ಕದಲ್ಲೇ ಸಂಸ್ಕೃತಿ ಗ್ರಾಮವೂ ಇದೆ. ಇಲ್ಲೇ ಕಂಬಳ ಭವನಕ್ಕೆ ನಿವೇಶನ ಲಭಿಸಿದರೆ ಸೂಕ್ತ ಎಂಬ ಅಭಿಪ್ರಾಯವಿದೆ. ತರಬೇತಿಗಳು, ಸುಮಾರು 50 ಮಂದಿಗೆ ತಂಗುವ ವ್ಯವಸ್ಥೆ, ವಸ್ತುಪ್ರದರ್ಶನ ಸೇರಿದಂತೆ ಕಂಬಳವನ್ನು ಉಳಿಸಿ ಬೆಳೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಂಬಳ ಭವನ ಸಹಕಾರಿ ಎನ್ನುವುದು ಕಂಬಳ ಸಮಿತಿಯ ಅಭಿಮತ.

ಗೌರವ ಮನ್ನಣೆ
ಕಂಬಳದಲ್ಲಿ ಕನೆ ಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡಹಲಗೆ ಸೇರಿದಂತೆ 6 ವಿಭಾಗಗಳಲ್ಲಿ 100ಕ್ಕಿಂತಲೂ ಅಧಿಕ ಜತೆ ಕೋಣಗಳು ಭಾಗವಹಿಸುತ್ತವೆ. ಅನುದಾನ ಲಭ್ಯವಾದರೆ ಭಾಗವಹಿಸುವ ಎಲ್ಲ ಕೋಣಗಳಿಗೆ ನಿರ್ದಿಷ್ಟ ಮೊತ್ತವನ್ನು ಗೌರವ ಸಂಕೇತವಾಗಿ ನೀಡಿ ಗುರುತಿಸುವ ವ್ಯವಸೆœ ರೂಪಿಸಲು ಸಾಧ್ಯ ಎಂದು ಕೋಣಗಳ ಯಜಮಾನ ಮತ್ತು ಕಂಬಳ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಬಾಕೂìರು ಶಾಂತಾರಾಮ ಶೆಟ್ಟಿ ಅಭಿಪ್ರಾಯಪಡುತ್ತಾರೆ.

ಕಂಬಳಕ್ಕೆ ಈ ಬಾರಿಯ ಬಜೆಟ್‌ನಲ್ಲಿ 5 ಕೋ.ರೂ. ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಅವಿಭಜಿತ ದ.ಕ. ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ನೀಡಲಾಗಿದ್ದು, ಉತ್ತಮ ಸಹಕಾರ ಮತ್ತು ಸ್ಪಂದನೆ ದೊರಕಿದೆ.
– ಪಿ.ಆರ್‌.ಶೆಟ್ಟಿ,
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರು,

– ಕೇಶವ ಕುಂದರ್‌

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.