ಕಂಬಳ: ಸು.ಕೋ.ನಲ್ಲಿ ಪೆಟಾ ವರದಿ ಸಲ್ಲಿಕೆ
Team Udayavani, Oct 22, 2019, 5:30 AM IST
ಮಂಗಳೂರು: ಪೆಟಾ ಸಂಘಟನೆಯು ಕಳೆದ ಋತುವಿನಲ್ಲಿ ನಡೆದಿರುವ ಕಂಬಳಗಳ ಬಗ್ಗೆ ಮಾಡಿರುವ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವುದಾಗಿ ತಿಳಿಸಿದೆ.
ಪೆಟಾ ಕಳೆದ ವರ್ಷ ಡಿಸೆಂಬರ್ ಮತ್ತು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆದ ಬಾರಾಡಿಬೀಡು, ಮೂಡುಬಿದಿರೆ, ಮಂಗಳೂರು ಮತ್ತು ತಿರುವೈಲ್ನಲ್ಲಿ ನಡೆದಿರುವ ಕಂಬಳಗಳಲ್ಲಿ ತಪಾಸಣೆ ಮಾಡಿದ್ದು, ಕೋಣಗಳ ಮೇಲಿನ ಹಿಂಸೆ ಮತ್ತು ಕೌರ್ಯವನ್ನು ತಡೆಯಲು ಕರ್ನಾಟಕದ ಕಂಬಳಗಳು ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ಪೆಟಾ ಇಂಡಿಯಾದಿಂದ ತಪಾಸಣೆ ಮಾಡಲಾದ ಎಲ್ಲ 4 ಕಂಬಳಗಳಲ್ಲಿ ಕಂಬಳ ಓಟದ ಸ್ಪರ್ಧೆಗೆ ಅನುವು ಮಾಡಿಕೊಡುವ ರಾಜ್ಯದ ತಿದ್ದುಪಡಿಗಳು ಕೋಣಗಳನ್ನು ಹಿಂಸೆಯಿಂದ ರಕ್ಷಿಸುವಲ್ಲಿ ಎಷ್ಟು ಅನುಪಯುಕ್ತ ಎನ್ನುವುದನ್ನು ಎತ್ತಿ ತೋರಿಸುತ್ತದೆ. ಪೆಟಾ ದಾಖಲು ಮಾಡಿರುವ ದೂರು ಕರ್ನಾಟಕದ ಹೊಸ ಕಾನೂನಿನ ಸಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುತ್ತದೆ ಮತ್ತು ಅದನ್ನು ಕಿತ್ತು ಹಾಕಲು ನಿರ್ದೇಶನವನ್ನು ಕೋರುತ್ತದೆ ಎಂದು ಪೆಟಾದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ