ಕಾಣಿಯೂರು ಸೇತುವೆಯಿಂದ ಹೊಳೆಗೆ ಬಿದ್ದ ಕಾರು ; ಯುವಕರ ಪತ್ತೆಯೇ ಇಲ್ಲ

ಸ್ಥಳಕ್ಕೆ ಸಚಿವ ಅಂಗಾರ ಭೇಟಿ

Team Udayavani, Jul 11, 2022, 9:45 PM IST

ಕಾಣಿಯೂರು ಸೇತುವೆಯಿಂದ ಹೊಳೆಗೆ ಬಿದ್ದ ಕಾರು ; ಯುವಕರ ಪತ್ತೆಯೇ ಇಲ್ಲ

ಕಾಣಿಯೂರು : ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಮಸೀದಿಯ ಬಳಿಯಿರುವ ಸೇತುವೆಗೆ ಢಿಕ್ಕಿ ಹೊಡೆದು ಕಾರೊಂದು ಹೊಳೆಗೆ ಬಿದ್ದು, ಕಾರಿನಲ್ಲಿದ್ದ ಯುವಕರಿಬ್ಬರು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯುವಕರ ಪತ್ತೆಗಾಗಿ ಶೋಧ ಕಾರ್ಯಚರಣೆ ಜು. 11ರಂದು ಮುಂದುವರಿದರೂ ಕೂಡ ಕಣ್ಮರೆಯಾಗಿರುವ ಯುವಕರಿಬ್ಬರ ಸುಳಿವು ಪತ್ತೆಯಾಗಿಲ್ಲ. ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೂ ಶೋಧ ಕಾರ್ಯಚರಣೆ ನಡೆಯಿತು.

ಬೈತಡ್ಕ ಹೊಳೆಯಲ್ಲಿ ಹಾಗೂ ಕುಮಾರಾಧಾರ ನದಿಯ ಭಾಗ ಕಾಪೆಜಾಲು ಎಂಬಲ್ಲಿ ಶೋಧ ಕಾರ್ಯ ಮಾಡಲಾಯಿತು. ಯುವಕರು ನೀರು ಪಾಲಾಗಿರಬಹುದು ಎನ್ನುವ ಶಂಕೆಯಲ್ಲಿ ನೀರಿನಲ್ಲಿ ರವಿವಾರದಿಂದ ಹುಡುಕಾಟ ನಡೆಸಲಾಗುತ್ತಿದೆ. ಕಾರು ಪತ್ತೆಯಾದರೂ ಕಾರಿನಲ್ಲಿ ಇದ್ದವರು ಪತ್ತೆಯಾಗಿಲ್ಲ. ಕಣ್ಮರೆಯಾಗಿರುವ ಯುವಕರಿಗಾಗಿ ಎರಡನೇ ದಿನ ಸೋಮವಾರ ಸಂಜೆಯ ತನಕವೂ ಹೊಳೆ ನೀರಿನಲ್ಲಿ ಶೋಧ ನಡೆಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಅಗ್ನಿಶಾಮಕ ದಳದವರು ಹಾಗೂ ಗುತ್ತಿಗಾರು ವಿಪತ್ತು ನಿರ್ವಹಣ ಘಟಕದವರಿಗೆ ಸ್ಥಳೀಯರಾದ ಕೇಶವ ಗೌಡ ಬೈತಡ್ಕ, ಜಯಂತ್‌ ಅಣವುಮೂಲೆಯವರು ಸಾಥ್‌ ನೀಡಿದರು. ಜು. 12ರಂದು ಮತ್ತೆ ಶೋಧ ಕಾರ್ಯಾಚರಣೆ ನಡೆಯಲಿದೆ.

ಘಟನೆಯ ಹಿನ್ನೆಲೆ
ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ : ಜಡೆ ಗ್ರಾಮಕ್ಕೆ ಜಟಾಯುಪುರ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ

ಮಾಹಿತಿ ಪಡೆದ ಸಚಿವರು
ಕಾಣಿಯೂರು ಬೈತಡ್ಕದ ಘಟನ ಸ್ಥಳಕ್ಕೆ ಸಚಿವ ಎಸ್‌. ಅಂಗಾರ ಅವರು ಜು. 11ರಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು. ಈ ವೇಳೆ ಸಚಿವರು ಶೋಧ ಕಾರ್ಯವನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೈತಡ್ಕ ಸೇತುವೆಗೆ ಭದ್ರವಾದ ತಡೆ ಬೇಲಿ ನಿರ್ಮಾಣ ಮಾಡುವಂತೆ ಸ್ಥಳೀಯರು ಸಚಿವರಿಗೆ ಮನವಿ ಮಾಡಿದರು. ಸಚಿವರಿಗೆ ಪುತ್ತೂರು ಸಹಯಕ ಆಯುಕ್ತ ಗಿರೀಶ್‌ ನಂದನ್‌ ಮಾಹಿತಿ ನೀಡಿದರು. ಈ ಸಂದರ್ಭ ಕಡಬ ತಹಶೀಲ್ದಾರ್‌ ಅನಂತ ಶಂಕರ, ಕಂದಾಯ ನಿರೀಕ್ಷಕ ಅವಿನ್‌ ರಂಗತ್ತಮಲೆ, ಬೆಳ್ಳಾರೆ ಠಾಣಾಧಿಕಾರಿ ರುಕ್ಮ ನಾಯ್ಕ, ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್‌ ಉದನಡ್ಕ, ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಗ್ರಾ.ಪಂ. ಸದಸ್ಯರಾದ ಮೋಹನ್‌ ಅಗಳಿ, ಉಮೇಶ್ವರಿ ಅಗಳಿ, ಪಿಡಿಒ ನಾರಾಯಣ, ಗ್ರಾಮಕರಣಿಕ ಪುಷ್ಪರಾಜ್‌, ಕಾಣಿಯೂರು ಗ್ರಾ.ಪಂ.ಸದಸ್ಯರಾದ ದೇವಿಪ್ರಸಾದ್‌ ದೋಳ್ಪಾಡಿ, ತಾರಾನಾಥ ಇಡ್ಯಡ್ಕ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.