ತೆಂಗಿನ ಗರಿಗಳ ಗುಡಿಸಲಿನಲ್ಲಿದ್ದ ಕೊರಗಟ್ಟೆ ಶಾಲೆ

ಅಜ್ಜಿಬೆಟ್ಟು ದ.ಕ. ಜಿ.ಪಂ. ಹಿ.ಪ್ರಾ. ಶಾಲೆ

Team Udayavani, Dec 2, 2019, 5:31 AM IST

Nam

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಅಜ್ಜಿಬೆಟ್ಟು ದ.ಕ. ಜಿ.ಪಂ. ಹಿ.ಪ್ರಾ. ಶಾಲೆಯು ತೆಂಗಿನಗರಿಗಳನ್ನೊಳಗೊಂಡ ಗುಡಿಸಲಿನಲ್ಲಿ ಆರಂಭಗೊಂಡು ಪ್ರಸ್ತುತ ಉತ್ತಮ ಸ್ಥಿತಿಯಲ್ಲಿದೆ. ಅಂದಿನ ಕಾಲದಲ್ಲಿ ಈ ಶಾಲೆಯು ಕೊರಗಟ್ಟೆ ಶಾಲೆ ಎಂದೇ ಖ್ಯಾತಿ ಗಳಿಸಿತ್ತು.

ಹಿರಿಯರ ಮಾಹಿತಿಯ ಪ್ರಕಾರ ಗುಡಿಸಲಿನಲ್ಲಿ ಆರಂಭಗೊಂಡ ಅಜ್ಜಿಬೆಟ್ಟು ಶಾಲೆಯು ಭಜನ ಮಂದಿರದಲ್ಲಿ ಪ್ರಾರಂಭಗೊಂಡಿದೆ ಎನ್ನಲಾಗುತ್ತಿದೆ. ಅಜ್ಜಿಬೆಟ್ಟಿನಲ್ಲಿ 1919ರಲ್ಲಿ ಶಾಲೆಯು ಪ್ರಾರಂಭಗೊಂಡರೆ, ಅಲ್ಲೇ ಪಕ್ಕದ ಗ್ರಾಮವಾದ ಚೆನ್ನೈತ್ತೋಡಿಯಲ್ಲಿ 1918ರಲ್ಲಿ ಶಾಲೆ ಪ್ರಾರಂಭಗೊಂಡಿತ್ತು.

ಒಂದು ಕಾಲದಲ್ಲಿ ಅಜ್ಜಿಬೆಟ್ಟು ಶಾಲೆಯು ತನ್ನ ವ್ಯಾಪ್ತಿಯನ್ನು ಪಡೆದುಕೊಂಡಿದ್ದ ಪ್ರದೇಶದಲ್ಲಿ ಈಗ ಸರಕಾರಿ ಹಾಗೂ ಖಾಸಗಿ ಶಾಲೆಗಳು ಸಹಿತ ಒಟ್ಟು 8 ಶಾಲೆಗಳಿವೆ. ಕಡ್ತಲಬೆಟ್ಟು, ಶ್ರೀನಿವಾಸನಗರ, ಆಲದಪದವು, ಚೆನ್ನೈತ್ತೋಡಿ, ಶಿವನಗರ ಮೊದಲಾದ ಪ್ರದೇಶಗಳಲ್ಲಿ ಶಾಲೆಗಳು ತೆರೆದುಕೊಂಡಿವೆ.

74 ವರ್ಷಗಳ ಬಳಿಕ ಮೇಲ್ದರ್ಜೆಗೆ
ಪಾಸ್ಕಲ್‌ ಮಾಸ್ಟರ್‌ ಈ ಶಾಲೆಯ ಮೊದಲ ಶಿಕ್ಷಕರಾಗಿದ್ದರು ಎನ್ನಲಾಗುತ್ತದೆ. ಪ್ರಾರಂಭದಲ್ಲಿ ಇಲ್ಲಿ 1ರಿಂದ 5ನೇ ತರಗತಿವರೆಗೆ ಮಾತ್ರ ಇದ್ದು, ಬರೋಬ್ಬರಿ 74 ವರ್ಷಗಳ ಬಳಿಕ ಮೇಲ್ದರ್ಜೆಗೇರಿ 1992ರ ಬಳಿಕ 6-7ನೇ ತರಗತಿಗಳು ಆರಂಭಗೊಂಡಿದ್ದವು.

ವಿದ್ಯಾರ್ಥಿಗಳ ಸಂಖ್ಯೆಯ ದೃಷ್ಟಿಯಿಂದ ಶಾಲೆಯು ಇನ್ನೂ ತೀರಾ ಹಿಂದುಳಿದಿದ್ದು, ಅಂದರೆ ಪ್ರಸ್ತುತ ಶಾಲೆಯಲ್ಲಿ ಕೇವಲ 34 ಮಂದಿ ವಿದ್ಯಾರ್ಥಿಗಳಿದ್ದಾರೆ. ಇಬ್ಬರು ಖಾಯಂ ಶಿಕ್ಷಕರು ಹಾಗೂ ಒಬ್ಬರು ಅತಿಥಿ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

90 ಸೆಂಟ್ಸ್‌ ಆಸ್ತಿ
ಶಾಲೆಯು ಒಟ್ಟು 90 ಸೆಂಟ್ಸ್‌ ಆಸ್ತಿಯನ್ನು ಹೊಂದಿದ್ದು, ತರಗತಿ ಕೊಠಡಿಗಳು, ಬಾವಿ, ಕ್ರೀಡಾಂಗಣ, ಶೌಚಾಲಯಗಳು, ಕೈತೋಟ ಮೊದಲಾದ ಸೌಕರ್ಯಗಳನ್ನು ಒಳಗೊಂಡಿದೆ. 2011-12ನೇ ಸಾಲಿಯಲ್ಲಿ ಶಾಲೆಯ ವಿದ್ಯಾರ್ಥಿ ನಿತಿನ್‌ ಇನ್‌ಸ್ಪೈರ್‌ ಅವಾರ್ಡ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ರಸಪ್ರಶ್ನೆಯಲ್ಲಿ ದೇವಿಕಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

ಹಳೆ ವಿದ್ಯಾರ್ಥಿಗಳು
ಶಾಲೆಯ ಹಳೆ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದು, ವಾಮದಪದವು ಜೂನಿಯರ್‌ ಕಾಲೇಜಿನಲ್ಲಿ ಉಪಪ್ರಾಂಶುಪಾಲರಾಗಿರುವ ರಾಘವೇಂದ್ರ ಬಳ್ಳಾಲ್‌, ಎಸ್‌ಇಝಡ್‌ನ‌ಲ್ಲಿ ಅಧಿಕಾರಿಯಾಗಿರುವ ಯೋಗೀಶ್‌ ಕಳಸಡ್ಕ ಮೊದಲಾದವರು ಶಾಲೆಯ ಹಳೆವಿದ್ಯಾರ್ಥಿಗಳಾಗಿದ್ದಾರೆ.

ತೀರಾ ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಕೇವಲ 34 ಮಂದಿ ಇದ್ದಾರೆ. ಇಬ್ಬರು ಖಾಯಂ ಶಿಕ್ಷಕರು ಹಾಗೂ ಒಬ್ಬರು ಅತಿಥಿ ಶಿಕ್ಷಕರು ದುಡಿಯುತ್ತಿದ್ದಾರೆ. ಮೂಲ ಸೌಕರ್ಯಗಳು ಉತ್ತಮವಾಗಿದ್ದು, ಶಾಲೆಗೆ ಕೈತೋಟವೂ ಇದೆ.
-ಪೂರ್ಣಿಮಾ, ಮುಖ್ಯ ಶಿಕ್ಷಕಿ.

ಅಜ್ಜಿಬೆಟ್ಟು ಶಾಲೆಯಲ್ಲಿ ನಾನು ಕಲಿಯುತ್ತಿದ್ದ ವೇಳೆ ತನ್ನ ತಂದೆ ಸುಂದರ ಬಲ್ಲಾಳ್‌ ಹಾಗೂ ತಾಯಿ ಶಶಿಕಲಾ ಬಲ್ಲಾಳ್‌ ಅವರು ಶಿಕ್ಷಕರಾಗಿದ್ದು, ವಿಶೇಷವೆಂದರೆ ಆಗ ಅವರಿಬ್ಬರೇ ಶಿಕ್ಷಕರಾಗಿದ್ದರು. ಆಗ ಒಂದು ದೊಡ್ಡ ಕೊಠಡಿಯಲ್ಲಿ 1ರಿಂದ 5ನೇ ತರಗತಿವರೆಗೆ ಕ್ಲಾಸ್‌ ನಡೆಯುತ್ತಿತ್ತು. ಆಗಿನ ವ್ಯವಸ್ಥೆಯಲ್ಲಿ ಸುತ್ತಮುತ್ತಲ ಮನೆಯವರು ಶಾಲೆಗೆ ಸಹಕಾರ ನೀಡುತ್ತಿದ್ದರು.
-ರಾಘವೇಂದ್ರ ಬಲ್ಲಾಳ್‌ ಕೆ.ಎಸ್‌.,
ಉಪಪ್ರಾಂಶುಪಾಲರು,ವಾಮದಪದವು ಜೂನಿಯರ್‌ ಕಾಲೇಜು,
(ಹಳೆ ವಿದ್ಯಾರ್ಥಿ)

-  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.