ದ.ಕ.: ಕನ್ನಡದಲ್ಲಿ ರಾಜ್ಯೋತ್ಸವ ಪರೇಡ್‌ ಕಮಾಂಡ್‌


Team Udayavani, Nov 1, 2018, 9:35 AM IST

3110mlr14.jpg

ಮಂಗಳೂರು: ಸಾಮಾನ್ಯವಾಗಿ ಕವಾಯತು (ಪರೇಡ್‌) ವೇಳೆ ಆಂಗ್ಲ ಭಾಷೆಯಲ್ಲಿ ಆಜ್ಞೆ (ಕಮಾಂಡ್‌)ಗಳನ್ನು
ನೀಡಲಾಗುತ್ತದೆ. ಆದರೆ ಮಂಗಳೂರಿನಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಪರೇಡ್‌ ಕಮಾಂಡ್‌ ನೀಡುವ ಪ್ರಯತ್ನಕ್ಕೆ ಮಂಗಳೂರು ಹಾಗೂ ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ನ. 1ರಂದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಕನ್ನಡದಲ್ಲೇ ಕವಾಯತು ಆಜ್ಞೆಗಳು ಕೇಳಿ ಬರಲಿವೆ.

ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗಿತ್ತಾದರೂ ಎಲ್ಲ ಕಡೆಗೆ ಸಮರ್ಪಕವಾಗಿ ಜಾರಿ ಮಾಡುವಲ್ಲಿ ಸರಕಾರ ಹಿಂದುಳಿದಿತ್ತು. ಇದೀಗ ಪೊಲೀಸರ ಕಮಾಂಡ್‌ ಕೂಡ ಕನ್ನಡದಲ್ಲೇ ನೀಡುವ ಮೂಲಕ ಕನ್ನಡ ಭಾಷೆಯನ್ನು ಇನ್ನಷ್ಟು ಬಲಿಷ್ಠ ಗೊಳಿಸುವಲ್ಲಿ ಪೊಲೀಸರ ಸಹಕಾರವೂ ಇರಲಿದೆ. 

ರಾಜ್ಯದ ಎರಡನೇ ಜಿಲ್ಲೆ
ಕನ್ನಡದಲ್ಲಿ ಪೊಲೀಸ್‌ ಕವಾಯತು ಆಜ್ಞೆಗಳನ್ನು ನೀಡುವ ರಾಜ್ಯದ ಎರಡನೇ ಜಿಲ್ಲೆ ದ.ಕ.ವಾಗಲಿದೆ. ಮೊದಲ ಬಾರಿಗೆ ಬಳಸಿದ ಹೆಗ್ಗಳಿಕೆ ಬೆಳಗಾವಿಗೆ ಸಲ್ಲುತ್ತದೆ. ಜಿಲ್ಲೆಯ ಎಸ್‌ಪಿ ಡಾ| ರವಿಕಾಂತೇಗೌಡ ಅವರು ಬೆಳಗಾವಿಯಲ್ಲಿ ಮೊದಲ ಬಾರಿ ಪ್ರಯೋಗ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದರು. ಈಗ ದ.ಕ. ಜಿಲ್ಲೆಗೆ ವರ್ಗಾವಣೆಗೊಂಡ ಬಳಿಕ ಇಲ್ಲಿಯೂ ಈ ಪ್ರಯೋಗಕ್ಕೆ ಸಿದ್ಧತೆ ನಡೆಸಿದ್ದಾರೆ.

ರಾಜ್ಯೋತ್ಸವ ಕವಾಯತು ಸಂದರ್ಭ ಒಟ್ಟು 26 ಆದೇಶ (ಕಮಾಂಡ್‌) ಹಾಗೂ ನಾಲ್ಕು ವರದಿ (ರಿಪೋರ್ಟ್‌) ಇರಲಿದೆ. ಹಿಂದೆ ಇದನ್ನು ಆಂಗ್ಲಭಾಷೆಯಲ್ಲಿಯೇ ನೀಡಲಾಗುತ್ತಿತ್ತು. ಈ ಬಾರಿ ಈ ಎಲ್ಲ ಕಮಾಂಡ್‌ಗಳು ಕನ್ನಡ ಭಾಷೆಯಲ್ಲಿ ಇರಲಿವೆ. ಉದಾಹರಣೆಗೆ “ಪರೇಡ್‌ ಸಾವ ಧಾನ್‌’ ಎನ್ನುವ  ಪದಕ್ಕೆ ಬದಲಾಗಿ “ಪರೇಡ್‌ ಸಾವಧಾನ’ ಎನ್ನುವ ಪದ ಬಳಸಲಾಗಿದೆ. “ಪರೇಡ್‌ ವಿಶ್ರಾಂ’ ಬದಲಿಗೆ “ಪರೇಡ್‌ ವಿಶ್ರಾಂತಿ’, “ಕ್ವಿಕ್‌ ಮಾರ್ಚ್‌’ಗೆ ಬದಲಾಗಿ “ಶೀಘ್ರ ನಡೆ’, “ಓಪನ್‌ ಆರ್ಡರ್‌ ಮಾರ್ಚ್‌’ ಬದಲಿಗೆ ವಿರಳ ಕ್ರಮದಲ್ಲಿ ನಿಲ್ಲಿ’, ಔಟ್‌ ಆರ್ಡರ್‌ ಮಾರ್ಚ್‌ನಲ್ಲಿ’ ಎಡದವರು ಎಡಕ್ಕೆ, ಬಲದವರು ಬಲಕ್ಕೆ, ಎಡಬಲಕ್ಕೆ ತಿರುಗಿ’ ಹೀಗೆ ಪದಗಳನ್ನು ಆಯ್ಕೆ ಮಾಡಲಾಗಿದೆ. “ಪರೇಡ್‌’ ಎನ್ನುವ ಪದ ಜನರಿಗೆ ಪರಿಚಿತವಾಗಿರುವುದರಿಂದ ಅದನ್ನು ಬದಲಿಸಿಲ್ಲ.

ಬೆಳಗಾವಿ ಬಳಿಕ ದ.ಕ.
ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್‌ ಕವಾಯತು ಆಜ್ಞೆಗಳನ್ನು ಕನ್ನಡ ಭಾಷೆಯಲ್ಲಿ ಸಿದ್ಧಪಡಿಸಿದ್ದೇವೆ. ಈ ಹಿಂದೆ ನಾನು ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಿ ಬಳಸಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕೆಲ ಪದಗಳು ಜನ ಬಳಕೆಯಲ್ಲಿ ಇರುವುದರಿಂದ ಅದನ್ನು ಹಾಗೆಯೇ ಇಡಲಾಗಿದೆ . 
ಡಾ| ಬಿ.ಆರ್‌. ರವಿಕಾಂತೇ ಗೌಡ, ಎಸ್ಪಿ

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.