ಎರಡು ವರ್ಷಗಳಿಂದ ತೆರೆಯದ ಭೂತಕಲ್ಲು ಸರಕಾರಿ ಕನ್ನಡ ಶಾಲೆ


Team Udayavani, May 24, 2018, 6:00 AM IST

kannada-school-24-5.jpg

ಸುಳ್ಯ: ಇಲ್ಲಿ ಪಾಠ ಕೇಳಲು ಕೊಠಡಿ ಇದೆ. ಪಾಠ ಹೇಳಲು ಶಿಕ್ಷಕರೂ ಇದ್ದರು. ವಿದ್ಯಾರ್ಥಿಗಳಿಗೆ ಬೇಕಿರುವ ಮೂಲ ಸೌಕರ್ಯ ಇದೆ. ಆದರೆ ಎರಡು ವರ್ಷಗಳಿಂದ ಶೂನ್ಯ ದಾಖಲಾತಿ ಕಾರಣದಿಂದ ಶಾಲೆಗೆ ಬೀಗ ಜಡಿದಿದೆ! ನಗದಿಂದ 12 ಕಿ.ಮೀ. ದೂರದಲ್ಲಿರುವ ಅರಣ್ಯದೊಳಗಿನ ಭೂತಕಲ್ಲು ಸರಕಾರಿ ಕನ್ನಡ ಶಾಲೆಯ ಕಥೆ-ವ್ಯಥೆಯಿದು. ಈ ಬಾರಿ ಪುನಾರಂಭಗೊಳ್ಳಬಹುದೇ ಅಥವಾ ಶೂನ್ಯ ದಾಖಲಾತಿ ಮೂರನೇ ವರ್ಷವೂ ಮುಂದುವರಿಯಲಿದೆಯೇ ಎನ್ನುವ ಕುತೂಹಲಕ್ಕೆ ತೆರೆ ಬೀಳಲು ಇನ್ನು ಒಂದು ವಾರ ಉಳಿದಿದೆ.

ಅರಣ್ಯ ಭಾಗದ ಶಾಲೆ
ಕಾಡಿನೊಳಗಿನ 5 ಕಿ.ಮೀ. ಕಚ್ಚಾ ರಸ್ತೆ ಹೊರತುಪಡಿಸಿ, ಮಿಕ್ಕ ವ್ಯವಸ್ಥೆಗಳಿಗೆ ಇಲ್ಲಿ ತೊಂದರೆ ಇಲ್ಲ. ಆಲೆಟ್ಟಿ ಗ್ರಾಮದ ಭೂತಕಲ್ಲಿನ ಅರಣ್ಯ ಭಾಗದಲ್ಲಿರುವ ಈ ಶಾಲೆ ಸುಳ್ಯದಿಂದ 12 ಕಿ.ಮೀ. ಅಂತರವಿದೆ. 65 ವರ್ಷದ ಹಿಂದೆ ಮುಳಿ ಮಾಡಿನ ಕಟ್ಟಡದಲ್ಲಿ ಕಿ.ಪ್ರಾ. ಶಾಲೆಯಾಗಿ ಆರಂಭಗೊಂಡು, ಅನಂತರ ಮೂಲ ಸೌಕರ್ಯದೊಂದಿಗೆ ಹಿ.ಪ್ರಾ. ಶಾಲೆ ಆಗಿ ಮೇಲ್ದರ್ಜೆಗೆ ಏರಿ ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಹಿರಿಮೆ ಹೊಂದಿದೆ.

ಮುಚ್ಚಿದ ಶಾಲೆ
ಶಿಕ್ಷಣ ಇಲಾಖೆಯ ನಿಯಮ ಪ್ರಕಾರ ಈ ಶಾಲೆ ಮುಚ್ಚಿಲ್ಲ. ಶೂನ್ಯ ದಾಖಲಾತಿ ಕಾರಣದಿಂದ ತರಗತಿ ನಡೆಸಲು ಮಕ್ಕಳಿಲ್ಲ ವಷ್ಟೆ. ಈ ವರ್ಷ ದಾಖಲಾತಿ ಆದಲ್ಲಿ ಮತ್ತೆ ಪುನಾರಂಭಿಸಲು ಅವಕಾಶ ಇದೆ ಎನ್ನುತ್ತದೆ ಕ್ಷೇತ್ರ ಶಿಕ್ಷಣ ಇಲಾಖೆ. ಆದರೆ ಊರವರ ಪಾಲಿಗೆ ಇದು ಮುಚ್ಚಲ್ಪಟ್ಟ ಶಾಲೆ. ಎರಡು ವರ್ಷದಿಂದ ಇಲ್ಲಿ ಯಾವುದೇ ಶೈಕ್ಷಣಿಕ ಚಟು ವಟಿಕೆಗಳು ನಡೆದಿಲ್ಲ. ಅದಕ್ಕೆ ಕಾರಣ ಇಲ್ಲಿ ದಾಖಲಾತಿಗೆ ಮಕ್ಕಳು ಬಾರದಿರುವುದು.

ಅಂಕಿ – ಅಂಶದ ಕಥೆ
ನಾಲ್ಕು ವರ್ಷಗಳಿಂದ 1ನೇ ತರಗತಿಗೆ ಮಕ್ಕಳು ದಾಖಲಾತಿ ಆಗಿಲ್ಲ. 2015-16ರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು, ಅವರ ಶೈಕ್ಷಣಿಕ ಅವಧಿ ಮುಕ್ತಾಯದ ಬಳಿಕ ಹೊಸ ಸೇರ್ಪಡೆಯಾಗಿಲ್ಲ. ಹಾಗಾಗಿ ಊರವರ ವಿರೋಧದ ನಡುವೆಯೂ ಇಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗೆ ವರ್ಗಾಯಿಸಿ, ಶೈಕ್ಷಣಿಕ ಚಟುವಟಿಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

2010-11ನೇ ವರ್ಷದಲ್ಲಿ 1ರಿಂದ 5ನೇ ತರಗತಿಯ ತನಕ ಇದ್ದ ಒಟ್ಟು ಮಕ್ಕಳು ಸಂಖ್ಯೆ- ಒಂಭತ್ತು, 2014-15ರಲ್ಲಿ ಸಂಖ್ಯೆ- ಆರು, 2015-16ರಲ್ಲಿ ನಾಲ್ಕು, 2016-17ರಲ್ಲಿ ಇಬ್ಬರು ವಿದ್ಯಾರ್ಥಿಗಳು ಇದ್ದರು. 2014ರಿಂದ 2018ರ ತನಕ ಇಲ್ಲಿ ಒಂದನೇ ತರಗತಿಗೆ ದಾಖಲಾತಿಯೇ ಆಗಿಲ್ಲ. ಮೂರು ವರ್ಷದ ಹಿಂದೆಯೇ ಇಬ್ಬರು ವಿದ್ಯಾರ್ಥಿಗಳನ್ನು ಸಮೀಪದ ಶಾಲೆಗೆ ಸೇರಿಸಿ, ಶೈಕ್ಷಣಿಕ ಚಟುವಟಿಕೆ ಕೊನೆಗೊಳಿಸುವ ಪ್ರಯತ್ನ ನಡೆದಿದ್ದರೂ ಅದಕ್ಕೆ ಆಕ್ಷೇಪ ವ್ಯಕ್ತವಾಗಿ, ಒಂದು ವರ್ಷ ಮತ್ತೆ ತರಗತಿಗಳು ನಡೆದವು. ಎರಡು ವರ್ಷಗಳಲ್ಲಿ ಆ ವಿದ್ಯಾರ್ಥಿಗಳು ಉತೀರ್ಣಗೊಂಡ ಅನಂತರ, ಇಲ್ಲಿ ವಿದ್ಯಾರ್ಥಿಗಳು ಇಲ್ಲದೆ ಶಾಲಾ ಚಟುವಟಿಕೆ ಕೊನೆ ಆಗಿತ್ತು.

ದಾಖಲಾತಿ ಮುಖ್ಯ
ಶಾಲಾ ವ್ಯಾಪ್ತಿಯ ಪರಿಸರದಲ್ಲಿ ಮನೆ-ಮನೆ ಭೇಟಿ ಮಾಡಿ ಮಕ್ಕಳ ಸೇರ್ಪಡೆಗೊಳಿಸುವ ಪ್ರಕ್ರಿಯೆ ಅಗತ್ಯವಿದೆ. ಕಳೆದ ಬಾರಿ 1ನೇ ತರಗತಿಗೆ ದಾಖಲಾತಿ ಪಡೆಯುವ ವಯಸ್ಕ ಮಕ್ಕಳು ಇರಲಿಲ್ಲ ಅನ್ನುತ್ತಿದೆ ಶಿಕ್ಷಣ ಇಲಾಖೆ. ಈ ಬಾರಿ, ಶಾಲೆಗೆ ಹತ್ತಿರವಿರುವ ಪ್ರದೇಶಗಳಲ್ಲಿ ಶಾಲಾ ದಾಖಲಾತಿ ಆಂದೋಲನ ಹಮ್ಮಿಕೊಳ್ಳಬೇಕು ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಶಾಲಾ ಖರ್ಚು
ಸುಳ್ಯ ತಾಲೂಕಿನ 66 ಕಿರಿಯ ಪ್ರಾಥಮಿಕ ಶಾಲೆಗಳಿಗೆ ತಲಾ 5 ಸಾವಿರ ರೂ.ನಂತೆ 3.30 ಲಕ್ಷ ರೂ., ಹಿರಿಯ ಪ್ರಾಥಮಿಕ ಶಾಲೆಗಳಿಗೆ ತಲಾ 5,200 ರೂ.ನಂತೆ 73 ಶಾಲೆಗಳಿಗೆ 3.79 ಲಕ್ಷ ರೂ., ಪ್ರೌಢಶಾಲೆಗಳಿಗೆ ತಲಾ 5,500 ರೂ.ನಂತೆ 16 ಶಾಲೆಗಳಿಗೆ 8.8 ಲಕ್ಷ ರೂ. ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಕಳುಹಿಸಲಾಗಿದೆ.

ಮೂಲ ಸೌಕರ್ಯ ಇದೆ
ಭೂತಕಲ್ಲು, ಕುಂಚಡ್ಕ, ಕೊಚ್ಚಿಮೂಲೆ, ಕಟ್ಟೆಕಳ, ಮೂಕಮಲೆ ಮೊದಲಾದ ಪ್ರದೇಶಗಳಿಂದ ವಿದ್ಯಾರ್ಥಿಗಳು ಕಲಿಕೆಗೆ ಬರುತ್ತಿದ್ದರು. ಸುಸಜ್ಜಿತ ಕೊಠಡಿ, 2005-06ರಲ್ಲಿ ಸರ್ವಶಿಕ್ಷಣ ಅಭಿಯಾನದಡಿ 1.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕೊಠಡಿ, 2012-13ರಲ್ಲಿ 50 ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಿದ ವಿಶೇಷ ಶೌಚಾಲಯ ಇಲ್ಲಿದೆ. ಹಾಗಾಗಿ ಇಲ್ಲಿ ಕಚ್ಚಾ ರಸ್ತೆ ಬಿಟ್ಟರೆ ಮಿಕ್ಕ ಸಮಸ್ಯೆ ಇಲ್ಲ. ಮಕ್ಕಳ ಆಟೋಟಕ್ಕೆ ಕಿರಿದಾದ ಮೈದಾನ, ಶಾಲಾ ಕಟ್ಟಡಕ್ಕೆ ವಿದ್ಯುತ್‌, ಅಕ್ಷರ ದಾಸೋಹಕ್ಕೆ ವ್ಯವಸ್ಥೆಗಳಿವೆ.

ಪುನಾರಂಭ
ಶಾಲಾ ದಾಖಲಾತಿಗೆ ಇನ್ನಷ್ಟು ಸಮಯವಿದೆ. ಒಂದನೇ ತರಗತಿಗೆ ಮಕ್ಕಳು ಸೇರ್ಪಡೆಗೊಂಡಲ್ಲಿ ಶಾಲಾ ಪುನಾರಂಭಗೊಳ್ಳಲಿದೆ. ಶೂನ್ಯ ದಾಖಲಾತಿ ಕಾರಣದಿಂದ ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ. ಇದನ್ನು ಶಾಶ್ವತವಾಗಿ ಮುಚ್ಚಿಲ್ಲ. ಮತ್ತೆ ಆರಂಭಕ್ಕೆ ಅವಕಾಶವಿದೆ.
– ರಾಧಾಕೃಷ್ಣ, ಸಿಆರ್‌ಪಿ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.