6 ತಿಂಗಳಲ್ಲಿ 5 ಕೋ.ರೂ. ಮೌಲ್ಯದ 17 ಕೆ.ಜಿ. ಚಿನ್ನ ಪತ್ತೆ

ಕಣ್ಣೂರು ವಿಮಾನ ನಿಲ್ದಾಣ: ಕಸ್ಟಮ್ಸ್‌ ಸಾಧನೆ

Team Udayavani, Jun 22, 2019, 9:49 AM IST

kannur

ಮಂಗಳೂರು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆಗೆ ಸಂಬಂಧಿಸಿ ಕಳೆದ 6 ತಿಂಗಳಲ್ಲಿ 3 ಹ್ಯಾಟ್ರಿಕ್‌ ಸಾಧನೆಗಳನ್ನು ದಾಖಲಿಸಿದ್ದಾರೆ.

ಗುರುವಾರ ಶಾರ್ಜಾದಿಂದ ವಿಮಾನದಲ್ಲಿ ಬಂದಿಳಿದ ಕೋಯಿಕ್ಕೋಡ್‌ ಜಿಲ್ಲೆಯ ಪರಪ್ಪನಂಗಡಿಯ ಪ್ರಯಾಣಿಕ ಸೈನುದ್ದೀನ್‌ ರಮೀಸ್‌ ತನ್ನ 2 ಪಾದಗಳು, ಒಳ ಉಡುಪು ಮತ್ತು ಗುದದ್ವಾರ ದಲ್ಲಿ ಬಚ್ಚಿಟ್ಟು ಸಾಗಿಸಿದ 60 ಲಕ್ಷ ರೂ. ಮೌಲ್ಯದ ಎರಡೂವರೆ ಕಿಲೋ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಿಮಾನದಿಂದ ಇಳಿದು ನಿರ್ಗಮನ ದ್ವಾರದ ಕಡೆ ಹೋಗುತ್ತಿದ್ದ ರಮೀಸ್‌ನನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಅಂಗಾಲಿನಲ್ಲಿ ಚಿನ್ನ ಅಡಗಿಸಿ ಇರಿಸಿರುವುದು ಪತ್ತೆಯಾಯಿತು. ತಪಾಸಣೆ ಮುಂದುವರಿಸಿದಾಗ ಒಳ ಉಡುಪಿನಲ್ಲಿ ಪೇಸ್ಟ್‌ ರೂಪದಲ್ಲಿ ಹಾಗೂ ಕಚ್ಚಾ ಚೈನ್‌ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಕಂಡು ಬಂತು. ಗುದದ್ವಾರದಲ್ಲಿ ಪೇಸ್ಟ್‌ ರೂಪದ ಚಿನ್ನ ಪತ್ತೆಯಾಯಿತು. ಒಟ್ಟು ಪೇಸ್ಟ್‌ ರೂಪದಲ್ಲಿ 2 ಕಿಲೊ ಹಾಗೂ ಕಚ್ಚಾ ಚೈನ್‌ ರೂಪದಲ್ಲಿ 583 ಗ್ರಾಂ ಚಿನ್ನ ಸಿಕ್ಕಿದೆ.

ಇದಕ್ಕಿಂತ ಹಿಂದೆ ಜೂ. 15ರಂದು ಪತ್ತೆಯಾದ ಹ್ಯಾಟ್ರಿಕ್‌ ಪ್ರಕರಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಮೂವರು ಪ್ರಯಾಣಿಕರು ತಮ್ಮ ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸಿದ 62 ಲಕ್ಷ ರೂ. ಮೌಲ್ಯದ 1.84 ಕೆ.ಜಿ. ಮೌಲ್ಯದ ಚಿನ್ನ ವಶಪಡಿಸಿದ್ದರು. ಜೂ. 14ರಂದು ರಾತ್ರಿ ಕಸ್ಟಮ್ಸ್‌ ಅಧಿಕಾರಿಗಳು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳ ಸಹಕಾರದಲ್ಲಿ ಇಬ್ಬರು ಪ್ರಯಾಣಿಕರು ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಿಸಿದ್ದ 31 ಲಕ್ಷ ರೂ. ಮೌಲ್ಯದ 906 ಗ್ರಾಂ. ಚಿನ್ನವನ್ನು ವಶಪಡಿಸಿಕೊಂಡಿದ್ದರು.

ಮೇ 14ರಂದು ಕಸ್ಟಮ್ಸ್‌ ಅಧಿಕಾರಿ
ಗಳು ಅಕ್ರಮ ಸಾಗಾಟ ಪತ್ತೆಗೆ ಸಂಬಂಧಿಸಿ ಇನ್ನೊಂದು ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಅಂದು ಮೂವರು ಪ್ರಯಾಣಿಕರು ಸಾಗಿಸುತ್ತಿದ್ದ 11 ಲಕ್ಷ ರೂ. ಮೌಲ್ಯದ 679 ಬಾಕ್ಸ್‌ ವಿದೇಶಿ ಮೂಲದ ಸಿಗರೇಟ್‌ ಗಳನ್ನು ಪತ್ತೆಹಚ್ಚಿ ವಶಪಡಿಸಿದ್ದಲ್ಲದೆ 1.35 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇಲಾಖೆಯಲ್ಲಿ ಗರಿಷ್ಠ ಸಿಬಂದಿ ಕೊರತೆ ಮತ್ತು ಇತರ ಮೂಲ ಸೌಲಭ್ಯಗಳ ಕೊರತೆ ಇದ್ದರೂ ಈ ಸಾಧನೆಯನ್ನು ದಾಖಲಿಸಲಾಗಿದೆ ಎಂದು ಕಸ್ಟಮ್ಸ್‌ ಆಯುಕ್ತ ಸುಮಿತ್‌ ಕುಮಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

6 ತಿಂಗಳಲ್ಲಿ 17 ಕೆ.ಜಿ. ಚಿನ್ನ
ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭಗೊಂಡ (2018 ಡಿಸೆಂಬರ್‌) ಬಳಿಕ ಮತ್ತು 2019ರಲ್ಲಿ ಇದುವರೆಗೆ ಕಸ್ಟಮ್ಸ್‌ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟದ 19 ಪ್ರಕರಣಗಳನ್ನು ಪತ್ತೆ ಹಚ್ಚಿ ಒಟ್ಟು 5.5 ಕೋಟಿ ರೂ. ಮೌಲ್ಯದ 17 ಕಿಲೊ ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.